ಸ್ಥಳೀಯ ಸಂಸ್ಥೆಗಳ ಚುನಾವಣೆ: ಗೆದ್ದು ಬೀಗಿದ ಕಾಂಗ್ರೆಸ್
ಬೆಂಗಳೂರು, ಮೇ 31: ರಾಜ್ಯ ಮಿನಿ ಮಹಾ ಸಮರ ಎಂದೇ ಬಿಂಬಿಸಲಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಅಂತಿಮವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬೀಗಿದೆ.
ಪಟ್ಟಣ ಪಂಚಾಯಿತಿ ಹೊರತು ಪಡಿಸಿ, ಪುರಸಭೆ, ನಗರಸಭೆಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಕಾಂಗ್ರೆಸ್ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮರಳುಗಾಡಿನಲ್ಲಿ ಸಣ್ಣ ನೀರಿನ ಸೆಲೆ ಸಿಕ್ಕಂತಾಗಿದೆ.
ಏಳು ನಗರಸಭೆಯ 217 ಕ್ಷೇತ್ರಗಳ ಪೈಕಿ, ಕಾಂಗ್ರೆಸ್ 90 ಸ್ಥಾನಗಳನ್ನು ಗೆದ್ದಿದೆ, ಬಿಜೆಪಿಯು 56 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 30 ಗೆದ್ದಿದ್ದರೆ ಇತರೆ 33 ಸ್ಥಾನಗಳಲ್ಲಿ ಜಯ ಸಾಧಿಸಿದೆ.
30 ಪುರಸಭೆಯ 714 ಸ್ಥಾನಗಳಲ್ಲಿ ಕಾಂಗ್ರೆಸ್ ಅತಿ ಹೆಚ್ಚು 322 ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಬಿಜೆಪಿಯು 184 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 102 ಸ್ಥಾನಗಳನ್ನು ಗೆದ್ದಿದೆ. ಇತರೆ 106 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮುನ್ನಡೆ
19 ಪಟ್ಟಣ ಪಂಚಾಯಿತಿಗಳ 290 ಸೀಟುಗಳ ಪೈಕಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಜೆಪಿಯು ಒಟ್ಟು 126 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 97 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ನ 34 ಅಭ್ಯರ್ಥಿ ಗೆದ್ದಿದ್ದರೆ, ಇತರೆ 33 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ರವರ್ಧಮಾನಕ್ಕೆ ಬಂದಿದೆ ಬಿಜೆಪಿ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಹಿಂದಿನಿಂದಲೂ ಅತಿಯಾದ ಹಿಡಿತವಿತ್ತು. ಬಿಜೆಪಿ ಬಹುತೇಕ ಇಲ್ಲ ಎನ್ನುವೆಂಬುವ ಸನ್ನಿವೇಶವಿತ್ತು. ಆದರೆ ನಿಧಾನಕ್ಕೆ ಚಿತ್ರಣ ಬದಲಾಗುತ್ತಿರುವುದು ಗೋಚರವಾಗುತ್ತಿದೆ.

ಮಂಕಾಗುತ್ತಿದೆಯಾ ಜೆಡಿಎಸ್?
ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜೆಡಿಎಸ್ ತನ್ನ ಹಿಡಿತವನ್ನು ನಿಧಾನಕ್ಕೆ ಕಳೆದುಕೊಳ್ಳುತ್ತಿದೆ. ಐದು ವರ್ಷದ ಹಿಂದೆ ಕಾಂಗ್ರೆಸ್ಗೆ ಭಾರಿ ಪೈಪೋಟಿ ನೀಡುತ್ತಿದ್ದ ಜೆಡಿಎಸ್ ಈ ಬಾರಿ ಇತರೆಗಿಂತಲೂ ಕಡಿಮೆ ಆಗಿದೆ. ಜೆಡಿಎಸ್ ತನ್ನ ಹಿಂದಿನ ಹೊಳಪನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟ.

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಇಲ್ಲ
ಕಾಂಗ್ರೆಸ್-ಜೆಡಿಎಸ್ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಮೈತ್ರಿಯ ಆಯ್ಕೆಯನ್ನು ಸ್ಥಳೀಯ ಮುಖಂಡರಿಗೆ ಬಿಟ್ಟಿದ್ದರು. ಅವಶ್ಯಕತೆ ಇದ್ದಲ್ಲಿ ಮೈತ್ರಿ ಮಾಡಿಕೊಳ್ಳಿ ಅಥವಾ ಸ್ನೇಹಯುತವಾಗಿ ಚುನಾವಣೆ ಎದುರಿಸಿ ಎಂದಿದ್ದರು. ಬಹುತೇಕ ಕಡೆ ಕಾಂಗ್ರೆಸ್-ಜೆಡಿಎಸ್ ಎದುರಾಳಿಯಾಗಿಯೇ ಸ್ಪರ್ಧಿಸಿದವು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications