ಗೌರಿಬಿದನೂರಿನಲ್ಲಿ ಹರಿದ ರಕ್ತ, ಕಾಂಗ್ರೆಸ್ ಕಾರ್ಯಕರ್ತನ ಕೈ ಕಟ್
ಗೌರಿಬಿದನೂರು (ಚಿಕ್ಕಬಳ್ಳಾಪುರ ಜಿಲ್ಲೆ), ಫೆಬ್ರವರಿ 23 : ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಪುರ ಪಂಚಾಯಿತಿ ವ್ಯಾಪ್ತಿಗೆ ಬರುವ ಆರ್ಕುಂದ ಗ್ರಾಮದಲ್ಲಿ ಗುರುವಾರ ರಾತ್ರಿ ರಾಜಕಾರಣದ ಜಗಳಕ್ಕೆ ರಕ್ತ ಹರಿದಿದೆ. ವ್ಯಕ್ತಿಯೊಬ್ಬರ ಕೈಯನ್ನು ಮಚ್ಚಿನಿಂದ ಕತ್ತರಿಸಲಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಎಸ್.ರವಿಕುಮಾರ್ ಎಡಗೈಯನ್ನು ಜೆಡಿಎಸ್ ಕಾರ್ಯಕರ್ತ ಲೋಕೇಶ್ ಮಚ್ಚಿನಿಂದ ಕತ್ತರಿಸಿದ್ದಾನೆ. ಆರ್ಕುಂದ ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಕಾಂಗ್ರೆಸ್ ಕಾರ್ಯಕರ್ತರಾದ ಶ್ರೀನಿವಾಸರೆಡ್ಡಿ, ದೇವರಾಜ್, ಎಸ್.ರವಿಕುಮಾರ್, ನಾರಾಯಣಸ್ವಾಮಿ ಇನ್ನಿತರರು ಸಂಕ್ರಾಂತಿ ಸುಗ್ಗಿಯ ಅಂಗವಾಗಿ ಮನೆಮನೆಗೆ ತೆರಳಿ ಸೀರೆ ಹಂಚಿಕೊಂಡು ವಾಪಸಾಗಿದ್ದರು.
ಏಕಾಏಕಿಯಾಗಿ ರವಿಕುಮಾರ್ ಮನೆ ಮುಂಭಾಗದಲ್ಲಿದ್ದ ಅಂಗಡಿಯಿಂದ ಬಂದ ರಮೇಶ, ಗೋವರ್ಧನ, ಲೋಕೇಶ್, ನರಸಿಂಹಮೂರ್ತಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ರವಿಕುಮಾರ್ ತನ್ನ ಆತ್ಮರಕ್ಷಣೆಗಾಗಿ ಕೈ ಅಡ್ಡ ಇಟ್ಟಾಗ ಮಚ್ಚಿನಿಂದ ಬಿದ್ದ ಏಟಿಗೆ ಎಡಗೈ ಕತ್ತರಿಸಿ ನೆಲಕ್ಕುರುಳಿದೆ.

ರವಿಕುಮಾರ್ ಮೇಲೆ ಹಲ್ಲೆ ಮಾಡಿದ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ರವಿಕುಮಾರ್ ನನ್ನು ಕೂಡಲೇ ಗೌರಿಬಿದನೂರು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications