ಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕ ಹಕ್ಕೇ ಇಲ್ಲ: ಡಾ. ಸುಧಾಕರ್
ಬೆಂಗಳೂರು,ಡಿಸೆಂಬರ್24: ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ಪಂಚ ಗ್ಯಾರಂಟಿಗಳನ್ನು ಸರಿಯಾಗಿ ಜಾರಿಗೊಳಿಸಿಲ್ಲ. ಅಧಿಕೃತ ಮತ್ತು ಅನಧಿಕೃತ ತೆರಿಗೆ ಹೇರುತ್ತಿದ್ದಾರೆ. ಅಂಬೇಡ್ಕರರನ್ನು ನಿರಂತರವಾಗಿ ಅಪಮಾನ ಮಾಡಿದ್ದ ಕಾಂಗ್ರೆಸ್ಸಿಗರಿಗೆ ಅವರ ಹೆಸರು ಹೇಳುವ ನೈತಿಕ ಹಕ್ಕೇ ಇಲ್ಲ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಾ.ಪಿ.ಸುಧಾಕರ್ ರೆಡ್ಡಿ ಅವರು ಹೇಳಿದರು.
ಈ ಕುರಿತು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸೋಲಿನ ನಂತರ ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದಾರೆ. ಡಾ. ಅಂಬೇಡ್ಕರರನ್ನು ಲೋಕಸಭಾ ಚುನಾವಣೆಯಲ್ಲಿ 2 ಬಾರಿ ಸೋಲಿಸಿ ಅವಮಾನಿಸಿದ್ದ ಕಾಂಗ್ರೆಸ್ ಪಕ್ಷವು ಇದೀಗ ತಮ್ಮ ನಾಯಕರನ್ನು ಉಳಿಸಿಕೊಳ್ಳಲು ಅದೇ ಬಾಬಾಸಾಹೇಬರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ದೇಶ ವಿಭಜಿಸುವುದನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರರು ವಿರೋಧಿಸಿದ್ದರು. 370ನೇ ವಿಧಿ ಹೇರುವುದನ್ನೂ ಅವರು ವಿರೋಧಿಸಿದ್ದರು. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ದೇಶವನ್ನೇ ಜೈಲಾಗಿ ಪರಿವರ್ತಿಸಿತ್ತು ಎಂದು ಟೀಕಿಸಿದರು. ಈಗ ಕಾಂಗ್ರೆಸ್ ಮುಖಂಡರು ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಅಮಿತ್ ಶಾ ಅವರ ಮೇಲೆ ಕೆಸರೆರಚುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಜನರು ಮತ್ತು ದೇಶದ ಜನತೆ ಮೋದಿಜೀ ಮತ್ತು ಅಮಿತ್ ಶಾ ಜೀ ಅವರ ಬಗ್ಗೆ ವಿಶ್ವಾಸ ಹೊಂದಿದ್ದಾರೆ ಎಂದು ನುಡಿದರು. ಡಾ. ಅಂಬೇಡ್ಕರರ ಹೆಸರಿನಿಂದ ಮತ್ತೆ ರಾಜಕಾರಣ ಮಾಡಲು ಕಾಂಗ್ರೆಸ್ ಮುಂದಾಗಿದೆ. ಆದರೆ, ಜನರಿಗೆ ಕಾಂಗ್ರೆಸ್ಸಿಗರ ನೈಜ ಬಣ್ಣ ತಿಳಿದಿದೆ. ಕಾಂಗ್ರೆಸ್ಸಿಗರ ತಪ್ಪು ನೀತಿಗಳನ್ನು ಅಮಿತ್ ಶಾ ಅವರು ಜನರ ಮುಂದೆ ಅನಾವರಣಗೊಳಿಸಿದ್ದಾರೆ. ಮೋದಿ ಜೀ ಅವರು ಸ್ವಾವಲಂಬಿ, ಆತ್ಮನಿರ್ಭರ ಭಾರತ ಮಾಡುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಬಡ ಕುಟುಂಬದಿಂದ ಬಂದ ವ್ಯಕ್ತಿ 10 ವರ್ಷಕ್ಕೂ ಹೆಚ್ಚು ಕಾಲ ಪ್ರಧಾನಿ ಆಗಿ ಇರುವುದನ್ನು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ; ರಾಹುಲ್ ಗಾಂಧಿಯವರು ತಮ್ಮದೇ ಯುಪಿಎ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವಮಾನಿಸಿದ ವ್ಯಕ್ತಿ ಎಂದು ಟೀಕಿಸಿದರು. ಡಾ. ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನ ನೀಡಿದವರು. ಅವರ ಸಂವಿಧಾನವು ನಮಗೆ ವರದಾನ ಎಂದು ತಿಳಿಸಿದರು. ಅಮಿತ್ ಶಾ ಜೀ ಅವರ ಬಗ್ಗೆ ಇಲ್ಲಿನ ಸಚಿವರು ಅಗೌರವದಿಂದ ಮಾತನಾಡುತ್ತಿದ್ದು, ಇದು ಶೋಭೆ ತರುವ ವಿಚಾರವಲ್ಲ ಎಂದು ಆಕ್ಷೇಪಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮಾತನಾಡಿ, ರಾಜ್ಯದ ಎಲ್ಲ 30 ಜಿಲ್ಲೆಗಳಿಂದ ಯುವ ಮೋರ್ಚಾ ಅಧ್ಯಕ್ಷರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಕಾರ್ಯಕ್ರಮದ ಅಂಗವಾಗಿ ಸುಶಾಸನ ವಿಚಾರದಲ್ಲಿ ಡಾ.ಪಿ.ಸುಧಾಕರ ರೆಡ್ಡಿ ಅವರ ನೇತೃತ್ವದಲ್ಲಿ ಒಳ್ಳೆಯ ಕಾರ್ಯಕ್ರಮ ನಡೆದಿದೆ. ವರ್ಷ ಪೂರ್ತಿ ವಾಜಪೇಯಿಯವರ ಜನ್ಮ ಶತಮಾನೋತ್ಸವದ ಕಾರ್ಯಕ್ರಮ ಏರ್ಪಡಿಸುವ ಕುರಿತು ಚರ್ಚಿಸಲಾಗಿದೆ ಎಂದರು.
ಡಾ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಯಾವ ರೀತಿ ಅವಮಾನ ಮಾಡಿದೆ. ಯಾವ ರೀತಿ ಅವರನ್ನು ಅಗೌರವದಿಂದ ನಡೆಸಿಕೊಂಡಿದೆ ಎಂಬ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದರು. ಇವತ್ತು ಕಾಂಗ್ರೆಸ್ ಪಕ್ಷ ಅಂಬೇಡ್ಕರರ ಜಪ ಮಾಡುತ್ತಿದೆ ಎಂದು ಟೀಕಿಸಿದ್ದರು ಎಂದು ವಿವರಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications