ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ, ಒತ್ತಾಯದಿಂದ ಹಣ ನೀಡಲು ಯತ್ನ: ಬಸವರಾಜ ಬೊಮ್ಮಾಯಿ
ಹಾವೇರಿ: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ, ಬಂಧನವಾಗಿರುವ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಜನರು ಬಂದಿರುತ್ತಾರೆ. ಹೀಗಾಗಿ ಅದರಲ್ಲಿ ಯಾವುದೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಕೇಸ್ ಹಾಕಿದ್ದಾರೆ. ತನಿಖೆ ನಂತರ ಸತ್ಯಾ ಸತ್ಯತೆ ಹೊರ ಬರುತ್ತದೆ. ಒಬ್ಬ ಯುವ ವೈದ್ಯರು ಒಳ್ಳೆಯ ಕೆಲಸ ಮಾಡುತ್ತಿರುವಾಗ ಒಂದು ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಿದೆ. ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ಭಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತೇನೆ. ಯಾವುದೇ ಒಬ್ಬರ ಸಾರ್ವಜನಿಕರ ಜೀವನವನ್ನು ಪಡ್ಯಂತ್ರದಿಂದ ಮುಗಿಸುವ ಕೆಲಸವನ್ನು ಯಾರೂ ಪೋತ್ಸಾಹ ಮಾಡಬಾರದು ಖಂಡಿಸಬೇಕು ಎಂದು ಹೇಳಿದರು.

ಕಮಿಷನ್ ಆರೋಪ: ಕಾಂಗ್ರೆಸ್ ನಾಯಕ ಬಯಲು
ಗುತ್ತಿಗೆದಾರರ ಸಂಘದವರು ಮಾಡಿರುವ ಕಮಿಷನ್ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಕಾಂಗ್ರೆಸ್ ನಾಟಕ ಬಟಾ ಬಯಲಾಗಿದೆ. ಗುತ್ತಿಗೆದಾರರ ಸಂಘ ಒಂದೇ ಅಲ್ಲ. ಬೆಸ್ಕಾಂ ಗುತ್ತಿಗೆದಾರರ ಸಂಘ, ಪಿಡಬ್ಲ್ಯುಡಿ ಸಂಘ, ಎಲ್ಲ ಗುತ್ತಿಗೆದಾರರ ಸಂಘದವರು ಪತ್ರಿಕಾಗೋಷ್ಠಿ ಮಾಡಿ ಕಮಿಷನ್ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರಿಗೆ ಈ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಲೆಕ್ಕ ಕೊಡಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ತಮಗೆ ಅನ್ಯಾಯ ಮಾಡಲಾಗುತ್ತಿದೆ ಎನ್ನುವ ದೃಷ್ಠಿಯಲ್ಲಿ ಮಾಡಿರುವ ಅಭಿಪ್ರಾಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ. ರಾಜಕೀಯ ಬೆಳವಣಿಗೆಯನ್ನು ಯಾರೂ ಸಹಿಸುತ್ತಿಲ್ಲ ಅಂತ ಹೇಳುತ್ತಿದ್ದಾರೆ. ಅವರು ಸಿಎಂ ಆಗಿ ದೇವರಾಜ ಅರಸು ಅವರ ಅವಧಿಯ ದಾಖಲೆಯನ್ನು ಮೀರಿದ್ದಾರೆ. ಏಳು ವರ್ಷ ಅಧಿಕಾರ ಅನುಭವಿಸಿದ್ದಾರೆ. ಅತಿ ಹೆಚ್ಚು ಅವಧಿ ಅಧಿಕಾರ ಅನುಭವಿಸಿದವರೇ ಅನ್ಯಾಯ ಆಗಿದೆ ಅಂದರೆ ಏನರ್ಥ?. ಸಿದ್ದರಾಮಯ್ಯ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ, ಪರಿಶಿಷ್ಟ ವರ್ಗದವರಿಗೆ ಏನು ಮಾಡಿದ್ದಾರೆ ಅನ್ನುವುದರ ಬಗ್ಗೆ ಲೆಕ್ಕ ಕೊಡಬೇಕು ಎಂದು ಒತ್ತಾಯಿಸಿದರು.
ಎಸ್ಸಿಗಳಿಗೆ ಸಿಎಂ ಸ್ಥಾನ ಕೊಡಬೇಕು ಅನ್ನುವ ಮಾತನಾಡುತ್ತಾರೆ. ಸಿದ್ದರಾಮಯ್ಯ, ಮಹದಾದೇವಪ್ಪ ಕಾಂಗ್ರೆಸ್ಗೆ ಆಮದಾದವರು. ಬಸವಲಿಂಗಪ್ಪ, ರಂಗನಾಥವರು, ಖರ್ಗೆಯವರು ಬಹಳಷ್ಟು ಘಟಾನುಘಟಿಗಳು ಕಾಂಗ್ರೆಸ್ ಗೆ ಬೆಂಬಲ ಕೊಡುತ್ತ ಬಂದಿದ್ದಾರೆ. ಎಪ್ಪತ್ತೈದು ವರ್ಷಗಳಿಂದ ದಲಿತರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತ ಬಂದಿದ್ದಾರೆ. ದಲಿತರ ಋಣದಲ್ಲಿ ಇರುವಂತ ಕಾಂಗ್ರೆಸ್ನವರು ಅವರನ್ನು ಸಿಎಂ ಮಾಡಬೇಕು. ನಿಜವಾಗಲು ರಾಜಕೀಯ ಬದ್ಧತೆ ಇದ್ದರೆ, ಕಾಂಗ್ರೆಸ್ ದಲಿತರ ಹಕ್ಕನ್ನು ಕೊಡಬೇಕು. ಅದು ಭಿಕ್ಷೆಯಲ್ಲ. ದಲಿತರಿಗೆ ಮೂಗಿಗೆ ತುಪ್ಪ ಸವರುವ ಮೂಲಕ ದಲಿತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಾಗಲಕೋಟೆ ಗಲಾಟೆ: ಎಸ್ಪಿ ವರ್ಗಾವಣೆ ಮಾಡಬೇಕು
ಬಾಗಲಕೋಟೆಯಲ್ಲಿ ನಡೆದ ಗಲಾಟೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗಲಾಟೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ. ಮಸೂತಿಯಿಂದ ಕಲ್ಲು, ಚಪ್ಪಲಿ ಬಿದ್ದಿದೆ. ಅದನ್ನು ಯಾರು ಮಾಡಿದ್ದಾರೆ. ಪೊಲಿಸರು ಒಂದು ಸೈಡ್ ಬಂಧನ ಮಾಡುವುದು. ಪ್ರಮುಖರನ್ನು ಬಿಟ್ಟು ಬಂಧನ ಮಾಡುವುದು. ಪಿತೂರಿ ಹಿಂದಿರುವವರನ್ನು ಬಿಟ್ಟು ಇತರರನ್ನು ಬಂಧಿಸಿದರೆ ಪಿತೂರಿ ಮಾಡುವವರು ಮುಂದೆಯೂ ಮಾಡುತ್ತಾರೆ ತುಷೀಕರಣ ಮಾಡುವ ಮೂಲಕ ಹಿಂದೂಗಳ ಹಬ್ಬ, ಮೆರವಣಿಗೆ, ಶಿವಾಜಿ ಜಯಂತಿ.. ಗಣೇಶ ಜಯಂತಿ ಕಾರ್ಯಕ್ರಮಗಳಲ್ಲಿ ನಿರಂತರ ಗಲಾಟೆ ಮಾಡಿಸುವುದು ನಡೆಯುತ್ತಿದೆ. ಬಾಗಲಕೋಟೆ ಎಸ್ಪಿಗೆ ಏಟು ಬಿದ್ದು ರಕ್ತ ಬರುತ್ತಿದ್ದರೂ ನನಗೇನು ಆಗಿಲ್ಲ ಎಂದು ಹೇಳುತ್ತಾರೆ. ಮೊದಲು ಅಲ್ಲಿನ ಎಸ್ಪಿ ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳನ್ನು ವರ್ಗ ಮಾಡಬೇಕು ಎಂದು ಆಗ್ರಹಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications