30 ವರ್ಷದಿಂದ ಗುತ್ತಿಗೆ ಬಿಲ್ ಬಾಕಿ: ಸರ್ಕಾರಕ್ಕೆ ಗುತ್ತಿಗೆದಾರ ಕಲಿಸಿದ ಪಾಠವೇನು ?
ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಗುತ್ತಿಗೆದಾರರ ಬಾಕಿ ಹಾಗೂ ಗುತ್ತಿಗೆದಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ.
ಅಲ್ಲದೆ ಈ ನಡುವೆ ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಸಹ ಮುಂದುವರಿದಿವೆ. ಧಾರವಾಡದಲ್ಲಿ ಬಾಕಿ ಬಿಲ್ ಪಾವತಿ ಮಾಡಿಸುವಂತೆ ಆಗ್ರಹಿಸಿ ಗುತ್ತಿಗೆದಾರರೊಬ್ಬರು ನ್ಯಾಯಲಯದ ಮೆಟ್ಟಿಲು ಹತ್ತಿದ್ದಾರೆ. ಈ ವಿಚಾರವಾಗಿ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಬಂಧನ ಸಹ ಆಗಿದೆ. ಎನ್. ಆರ್ ನಾಯಕ ಎನ್ನುವ ಗುತ್ತಿಗೆದಾರರು ಗುತ್ತಿಗೆ ಬಿಲ್ ಪಾವತಿ ಮಾಡಿಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ 30 ವರ್ಷಗಳಿಂದ ಅವರಿಗೆ ಗುತ್ತಿಗೆ ಬಾಕಿ ಬಿಲ್ ಪಾವತಿ ಆಗಿರಲಿಲ್ಲ. ಇಷ್ಟು ವರ್ಷಗಳಿಂದ ಅವರು ಗುತ್ತಿಗೆ ಕೆಲಸ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಲ್ಲೇ ಇದ್ದರು.

ಸುದೀರ್ಘ 30 ವರ್ಷಗಳಿಂದ ಗುತ್ತಿಗೆದಾರರಿಗೆ ಬಿಲ್ ಬಾಕಿ ಉಳಿಸಿಕೊಂಡಿರುವ ವಿಷಯ ಇದೀಗ ಬೆಳಕಿಗೆ ಬಂದಿದೆ. ಗುತ್ತಿಗೆದಾರರು ಪಟ್ಟು ಬಿಡದೆ ಕೋರ್ಟ್ ಮೊರೆ ಹೋಗಿ ಈ ಕೇಸ್ನಲ್ಲಿ ಗೆದಿದ್ದಾರೆ. ಈ ಕೇಸ್ನ ವಿವರ ಇಲ್ಲಿದೆ.
ಕೊನೆಗೆ ಪರಿಹಾರ ಸಿಗದೆ ಕೋರ್ಟ್ ಮೊರೆ ಹೋಗಿದ್ದಾರೆ. ಇನ್ನು ಕಾಮಗಾರಿ ಮಾಡಿದ ಗುತ್ತಿಗೆದಾರರ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣಕ್ಕಾಗಿ ಎಂಜಿನಿಯರ ಅರೆಸ್ಟ್ಸಹ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖೆಯ ಮಾಡಿದ ಎಡವಟ್ಟಿನಿಂದಾಗಿ ಎಂಜಿನಿಯರ್ ಅರೆಸ್ಟ್ಮಾಡಲಾಗಿದೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ದೇವರಾಜ ಶಿಗ್ಗಾಂವಿ ಎನ್ನುವವರು ಅರೆಸ್ಟ್ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ ಏನು: ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಮಂಡವಾಡ ಗ್ರಾಮದಲ್ಲಿ ಹೊಸಕೆರೆ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆದಾರ ಎನ್ ಆರ್ ನಾಯಕ್ ಅವರು ಮಾಡಿದ್ದರು. ಗುತ್ತಿಗೆದಾರ ಎನ್ ಆರ್ ನಾಯಕ ಅವರ ಬಾಕಿ ಬಿಲ್ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆಯನ್ನು ಸಹ ಎಂಜಿನಿಯರ್ ಸಲ್ಲಿಸಿದ್ದರು ಎಂದು ಹೇಳಲಾಗಿದೆ. ಹಲವು ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ, ಸರ್ಕಾರದಿಂದ ಹಣ ಬಿಡುಗಡೆ ಆಗಿರಲಿಲ್ಲ ಎಂದು ಹೇಳಲಾಗಿದೆ. ಅಲ್ಲದೆ ಕಳೆದ 30 ವರ್ಷದಲ್ಲಿ 15ಕ್ಕೂ ಎಂಜಿನಿಯರ್ಗಳು ವರ್ಗಾವಣೆಯಾದರೂ ಬಾಕಿ ಬಿಲ್ ಬಿಡುಗಡೆಯಾಗಿರಲಿಲ್ಲ ಎಂದು ಹೇಳಲಾಗಿದೆ.
30 ವರ್ಷಗಳ ಹಿಂದಿನ ಕಾಮಗಾರಿ: ಇನ್ನು ಇದು 30 ವರ್ಷಗಳ ಹಿಂದಿನ ಕಾಮಗಾರಿ ಇದಾಗಿದೆ. ಅಲ್ಲಿಂದ ಇಲ್ಲಿಯವರಗೆ ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡದೆ ಸಣ್ಣ ನೀರಾವರಿ ಇಲಾಖೆಯ ಬಾಕಿ ಉಳಿಸಿಕೊಂಡು ಬಂದಿದೆ. ಒಟ್ಟು 18 ಲಕ್ಷ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದ್ದು.
18 ಲಕ್ಷಕ್ಕೆ ಬಡ್ಡಿ ಸೇರಿ 30 ವರ್ಷಕ್ಕೆ 3. 34 ಕೋಟಿ ರೂಪಾಯಿ ಆಗಿದೆ. ಹೀಗಾಗಿ, ಈ ವಿಚಾರವಾಗಿ ಗುತ್ತಿಗೆದಾರ ನಾಯಕ ಅವರು ಜಿಲ್ಲಾ ನ್ಯಾಯಾಲಯದ ಮೋರೆ ಹೋಗಿದ್ದರು. ಕೇಸ್ ವಿಚಾರಣೆ ನಡೆದಾಗ ನ್ಯಾಯಾಲಯದಲ್ಲಿ ಎಂಜಿನಿಯರ್ ಪರ ವಕೀಲರು 15 ದಿನಗಳವರೆಗೆ ಕಾಲಾವಕಾಶ ಕೊಡುವಂತೆ ಮನವಿ ಮಾಡಿದ್ದರು. ಆದರೆ ಜಿಲ್ಲಾ ನ್ಯಾಯಾಲಯ ಬಾಡಿ ವಾರೆಂಟ್ ಜಾರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications