ಕುಡಿಯುವ ನೀರಿನ ಕೊರತೆ ಇದೆಯೇ? ಕರೆ ಮಾಡಿ
ಬೆಂಗಳೂರು, ಏ. 29 : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗರಹರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಮಗಳಲ್ಲಿ ನೀರಿನ ಕೊರತೆ ಇದ್ದರೆ, ಕರೆ ಮಾಡಿ ಮಾಹಿತಿ ನೀಡಲು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ದೂರು ಬಂದ ಎಂಟು ಗಂಟೆಯೊಳಗೆ ಟ್ಯಾಂಕರ್ ಮೂಲಕವಾದರೂ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್, ರಾಜ್ಯದ 702 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಅಲ್ಲಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೆ 1800-425-8666 ಸಂಖ್ಯೆಗೆ ಶುಲ್ಕರಹಿತವಾಗಿ ಕರೆ ಮಾಡಿ ದೂರು ಸಲ್ಲಿಸಬಹುದು ಎಂದರು.

ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ ಎಂದು ದೂರು ಬಂದರೆ, 8 ಗಂಟೆ ಒಳಗೆ ಟ್ಯಾಂಕರ್ ಮೂಲಕವಾದರೂ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು. [ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ]
ಗ್ರಾಮಗಳಲ್ಲಿ ಜನರಿಗೆ ಮಾತ್ರವಲ್ಲ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸರ್ಕಾರ ಸಿದ್ಧವಾಗಿದೆ. ಕುಡಿಯುವ ನೀರು ಒದಗಿಸಲು ಹಣಕಾಸಿನ ಕೊರತೆ ಇಲ್ಲ. ಈ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿಯೇ ಒಟ್ಟಾರೆ 516 ಕೋಟಿ ರೂ. ಹಣ ಲಭ್ಯವಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು ಸರ್ಕಾರದ ಆದ್ಯತೆಯಾಗಿದೆ. ನೀರು ಪೂರೈಕೆಗೆ ಸಮಸ್ಯೆ ಉಂಟಾಗದಂತೆ ಯಾವುದೇ ಅಧಿಕಾರಿಗೆ ಜೂನ್ 15ರವರೆಗೆ ರಜೆ ನೀಡುವಂತಿಲ್ಲ ಎಂದು ತಿಳಿಸಲಾಗಿದೆ. ರಜೆ ಮೇಲೆ ಹೋಗಿರುವ ಅಧಿಕಾರಿಯನ್ನು ವಾಪಸ್ ಕರೆಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ವಿದ್ಯುತ್ ಸಂಪರ್ಕವಿಲ್ಲ : ರಾಜ್ಯದ 3487 ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕವಿಲ್ಲದ ಕಾರಣ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಕೆಲವು ಭಾಗಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ. ಕೊಳವೆ ಬಾವಿಗಳಿಗೆ ವಿದ್ಯುತ್ ಸೌಲಭ್ಯ ಒದಗಿಸುವಂತೆ ಕೋರಿ ಇಂಧನ ಇಲಾಖೆಗೆ ಪತ್ರ ಬರೆದಿದ್ದು, 15 ದಿನದೊಳಗಾಗಿ ಎಲ್ಲ ಕೊಳವೆಬಾವಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications