ಮುಂದಿನ 4ದಿನ, ರಾಜ್ಯ ಸರಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವ ಅತ್ಯಂತ ಸವಾಲಿನ ದಿನ
ಲಾಕ್ ಡೌನ್ (ಮೊದಲ ಹಂತ?) ಕೊನೆಯಾಗಲು ಇನ್ನೇನು ನಾಲ್ಕೈದು ದಿನಗಳು ಉಳಿದಿವೆ. ಸಾರ್ವಜನಿಕರನ್ನು ಬೀದಿಗಿಳಿಯದಂತೆ ನೋಡಿಕೊಳ್ಳಲು ದಿನದಿಂದ ದಿನಕ್ಕೆ ವಿಫಲವಾಗುತ್ತಿರುವ ರಾಜ್ಯ ಸರಕಾರ, ಪೊಲೀಸ್ ಇಲಾಖೆಗೆ ಮತ್ತೆ ಸೂಪರ್ ಪವರ್ ನೀಡಿದೆ.
ಒಂದು ರೀತಿಯ ಮೆಡಿಕಲ್ ಎಮರ್ಜೆನ್ಸಿ ಎನ್ನಬಹುದಾದ ಈ ಕಾಲಘಟ್ಟದಲ್ಲಿ ಧಾರ್ಮಿಕ ಕೇಂದ್ರಗಳು ಸೇರಿದಂತೆ ಎಲ್ಲವೂ ಬಂದ್ ಆಗಿದೆ. ಎಲ್ಲರೂ ತಮ್ಮತಮ್ಮ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸಿ ಎಂದು ಸರಕಾರ ಫರ್ಮಾನು ಹೊರಡಿಸಿದೆ.
ಕೊರೊನಾ ಹರಡದಂತೆ ನೋಡಿಕೊಳ್ಳಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾದದ್ದು. ಆದರೆ, ಎಷ್ಟೋ ಬಾರಿ ಸಾರ್ವಜನಿಕರು ಇದಕ್ಕೆ ಬೆಲೆಕೊಡುತ್ತಿಲ್ಲ ಎನ್ನುವುದು ಅತ್ಯಂತ ಸ್ಪಷ್ಟ.
ರಾಜ್ಯ ಸರಕಾರಕ್ಕೆ ಮುಂದಿನ ನಾಲ್ಕು ದಿನಗಳು ಜನ ಗುಂಪು ಸೇರದಂತೆ ನೋಡಿಕೊಳ್ಳುವ ವಿಚಾರದಲ್ಲಿ ಅತ್ಯಂತ ಸವಾಲಿನ ದಿನವಾಗಲಿದೆ. ಯಾಕೆಂದರೆ ವರ್ಷಕ್ಕೊಮ್ಮೆ ಬರುವ ಈ ಪುಣ್ಯ ದಿನಗಳನ್ನು ತಮ್ಮ ಧಾರ್ಮಿಕ ನಂಬಿಕೆಗಳನ್ನು ಬದಿಗೊತ್ತಿ ಸಮುದಾಯದವರು ನಿಲ್ಲುತ್ತಾರಾ ಎನ್ನುವುದು ಪ್ರಶ್ನೆ.

ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ವಾರ್ನಿಂಗ್
ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಘಟನೆಯ ನಂತರ, ಒಂದು ಸಮುದಾಯವನ್ನು ಗುರಿ ಮಾಡುವ ಕೆಲಸ ಸಾಮಾಜಿಕ ತಾಣದಲ್ಲಿ ನಡೆಯುತ್ತಲೇ ಬರುತ್ತಿದೆ. "ಯಾರೋ ನಾಲ್ಕು ಜನ ಧಾರ್ಮಿಕ ಮತಾಂಧರು ಮಾಡುವ ಕೆಲಸಕ್ಕೆ ಇಡೀ ಸಮುದಾಯವನ್ನೇ ಗುರಿ ಮಾಡಬೇಡಿ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಮನವೊಲಿಕೆ
ಸರಕಾರದ ಎಚ್ಚರಿಕೆ, ಮನವಿಯನ್ನು ಮೀರಿ, ಅಲ್ಲಲ್ಲಿ, ಕಾನೂನು ಉಲ್ಲಂಘಿಸಿ, ಪ್ರಾರ್ಥನೆಗಳು ನಡೆದ ಉದಾಹರಣೆಗಳು ರಾಜ್ಯದಲ್ಲಿ ನಡೆದಿವೆ. ಮನವೊಲಿಕೆ ಮಾಡಲು ಬಂದ ಪೊಲೀಸರ ಮೇಲೇಯೇ ದಾಳಿ ಮಾಡಿದ ಉದಾಹರಣೆಗಳೂ ಇವೆ. ಆಯಾಯ ಸ್ಥಳದ ಧಾರ್ಮಿಕ ಮುಖಂಡರು, ಇಂತವರಿಗೆ ಬುದ್ದಿ ಹೇಳುವ ಕೆಲಸವನ್ನು ಇನ್ನೂ ಮಾಡದಿದ್ದರೆ, ಇನ್ನಾದರೂ ಮಾಡಲಿ.

ಶಬ್-ಬೇರಾತ್, ಶುಕ್ರವಾರ (ಏ 10) ಕ್ರಿಶ್ಚಿಯನರ ಗುಡ್ ಫ್ರೈಡೇ
ಗುರುವಾರ (ಏ 9) ಮುಸ್ಲಿಂರ ಶಬ್-ಬೇರಾತ್, ಶುಕ್ರವಾರ (ಏ 10) ಕ್ರಿಶ್ಚಿಯನರ ಗುಡ್ ಫ್ರೈಡೇ ಮತ್ತು ಭಾನುವಾರ (ಏ 12) ಈಸ್ಟರ್ ಹಬ್ಬವಿರಲಿದೆ. ಈಗಾಗಲೇ, ಮುಖ್ಯಮಂತ್ರಿಗಳು ಸಮುದಾಯದ ಮುಖಂಡರನ್ನು ಕರೆಸಿ, ಪ್ರಾರ್ಥನಾ ಮಂದಿರಕ್ಕೆ ತೆರಳದಂತೆ ಸೂಚಿಸಿದ್ದಾರೆ. ಇದಕ್ಕೆ, ಸಮುದಾಯದ ಪ್ರಮುಖರೂ ಒಪ್ಪಿಗೆಯನ್ನು ಸೂಚಿಸಿದ್ದಾರೆ.

ದಂಡಂ ದಶಗುಣಂ ದಾರಿ ಮಾತ್ರ
ಆದರೂ, ತಮ್ಮ ಧಾರ್ಮಿಕ ನಂಬಿಕೆಗಳಿಗೆ ತೊಂದರೆಯಾಗುತ್ತದೆ ಎಂದು ಧಾರ್ಮಿಕ ಕೇಂದ್ರಗಳಿಗೆ ತೆರಳುವವರು ಇಲ್ಲದೇ ಇರುವುದಿಲ್ಲ. ಈ ರೀತಿ ಹೋಗುವವರನ್ನು ಸಮುದಾಯದ ಪ್ರಮುಖರು ಕರೆಸಿ, ಮನೆಯೇ ಮಂತ್ರಾಲಯ ಎಂದು ತಿಳಿಹೇಳಬೇಕಿದೆ. ಆದರೆ, ಇದೆಲ್ಲದರ ಹೊರತಾಗಿ ಮನೆಯಿಂದ ಹೊರಬಂದರೆ, ಸರಕಾರಕ್ಕೆ ಉಳಿಯುವುದು ದಂಡಂ ದಶಗುಣಂ ದಾರಿ ಮಾತ್ರ. ಎಲ್ಲಾ ಧರ್ಮದವರು ಇದನ್ನು ಅರ್ಥ ಮಾಡಿಕೊಂಡು, ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ, ಜೊತೆಗೆ ಇತರರನ್ನೂ ಕೂಡಾ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications