ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಕಲಿ ಕೀಲಿಕೈಯಿಂದ ಬಾಗಿಲು ತೆರದು ನೋಡಿದಾಗ ಸಚಿವರು ಹಾಸಿಗೆ ಮೇಲೆ ಮಲಗಿದ್ದರು. ಅದರೆ ಅವರ ದೇಹ ತಣ್ಣಗಾಗಿತ್ತು. ಬಳಿಕ ಸ್ಥಳೀಯ ವೈದ್ಯರು ಬಂದು ತಪಾಸಣೆ ನಡೆಸಿ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದರು.
ಕೊಪ್ಪ, ಜನವರಿ ೦3: ಚಾಮರಾಜನಗರ ಗುಂಡ್ಲುಪೇಟೆ ಶಾಸಕ ಮತ್ತು ಸಹಕಾರಿ, ಸಕ್ಕರೆ ಸಚಿವ ಎಚ್.ಎಸ್. ಮಹದೇವ ಪ್ರಸಾದ್(58) ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ
ಮಂಗಳವಾರ ಖಾಸಗೀ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಸಂಜೆ ಚಿಕ್ಕಮಗಳೂರಿನ ಸಮೀಪ ಸೆರಾಯ್ ರೆಸಾರ್ಟ್ ನಲ್ಲಿ ತಂಗಿದ್ದರು. ಅದರೆ ಮಂಗಳವಾರ ಬೆಳಗ್ಗೆ ಅವರು ಬಾಗಿಲು ತೆರಯಲಿಲ್ಲ. ಆಪ್ತರು ಬಾಗಿಲನ್ನು ತೆರಯಲು ಮುಂದಾಗಿದ್ದು ಆದರೆ ತೆರೆಯಲಾಗಲಿಲ್ಲ. ನಂತರ ನಕಲಿ ಬೀಗದ ಕೀಯಿಂದ ಬಾಗಿಲನ್ನು ತೆರೆದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಒಳ ಹೊದರು ಅದರೆ ಸಚಿವ ಮಹದೇವ ಪ್ರಸಾದ್ ವಿಧಿವಶರಾಗಿದ್ದರು.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]

ಬೆಳಗ್ಗೆಯೇ ಅವರು ವ್ಯಾಯಾಮ ಮತ್ತು ವಾಕಿಂಗ್ ಮಾಡಲು ಹೊಗುತ್ತಿದ್ದರು ಆದರೆ ಅವರು ಮಂಗಳವಾರ ಬೆಳಗ್ಗೆ ಹೋಗಿರಲಿಲ್ಲ ಎಂದು ಸಹಚರರೊಬ್ಬರು ಹೇಳಿದರು. ನಂತರ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಗಡಿಗರೊಂದಿಗೆ ಬಾಗಿಲು ಬಡಿದಾಗ ಪ್ರತ್ಯುತ್ತರ ನೀಡಲಿಲ್ಲ. ಕಿಟಕಿ ಬಾಗಿಲುಗಳು ತೆರೆದಿರಲಿಲ್ಲ. ಹೀಗಾಗಿ ನಕಲಿ ಕೀಲಿಕೈಯಿಂದ ಬಾಗಿಲು ತೆರದು ನೋಡಿದಾಗ ಸಚಿವರು ಹಾಸಿಗೆ ಮೇಲೆ ಮಲಗಿದ್ದರು. ಅದರೆ ಅವರ ದೇಹ ತಣ್ಣಗಾಗಿತ್ತು. ಬಳಿಕ ಸ್ಥಳೀಯ ವೈದ್ಯರು ಬಂದು ತಪಾಸಣೆ ನಡೆಸಿ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದರು.
ಮಹದೇವ ಪ್ರಸಾದ್ ನನ್ನ ಸಹೋದ್ಯೋಗಿ ಮಾತ್ರ ಆಗಿರಲಿಲ್ಲ, ನನ್ನೆಲ್ಲ ಕಷ್ಟ-ಸುಖಗಳಲ್ಲಿ ಭಾಗಿಯಾಗಿದ್ದ ಆತ್ಮೀಯ ಸ್ನೇಹಿತರಾಗಿದ್ದರು. ಅವರ ಅಗಲಿಕೆಯ ನೋವು ಅಸಹನೀಯವಾದುದು. pic.twitter.com/aPv8LYihAt
— CM of Karnataka (@CMofKarnataka) January 3, 2017
ಸಚಿವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಸಹಕಾರಿ ಸಾರಿಗೆ ಸುವರ್ಣಮಹೋತ್ಸವ ಕಾರ್ಯಕ್ರಮಕ್ಕೆ ತೆರಳಲು ಸೋಮವಾರವೇ ಅಗಮಿಸಿದ್ದರು. ನಂತರ ರಾತ್ರಿ ತಮ್ಮ ಸ್ನೇಹಿತರ ಮನೆಗೆ ಭೋಜನಕ್ಕೆ ತೆರಳಿ ರಾತ್ರಿ ಬಂದು ಸೆರಾಯ್ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ನಿಧಾನವಾಗಿ ಬಂದ ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ವಿಜಯ್ ಕುಮಾರ್ ಅವರೊಂದಿಗೆ ರಾತ್ರಿ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಿದ್ದಾಗಿ ಸ್ವತಃ ವಿಜಯ್ ಕುಮಾರ್ ತಿಳಿಸಿದ್ದಾರೆ.
Shocked to hear the demise of Cooperation Minister,Govt of Karnataka Sh.H.S.Mahadeva Prasad.Condolences to the family of Sh.Mahadeva Prasad.
— B.S. Yeddyurappa (@BSYBJP) January 3, 2017
ಸಹಕಾರಿ ಸಚಿವರು ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಪ್ತರೊಂದಿಗೆ ಬಂದಿದ್ದರು. ಅವರೊಂದಿಗೆ ಮನೆಯ ಯಾವ ಸದಸ್ಯರು ಬಂದಿರಲಿಲ್ಲ, ಸಚಿವರು ಹಿಂದೊಮ್ಮೆ ಹೃದಯ ಸಂಬಂಧ ಬೈಪಾಸ್ ಸರ್ಜರಿ ಮಾಡಿಸಿಕೊಂಡಿದ್ದರು, ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಆಪ್ತ ವಲಯ ತಿಳಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications