ಕೊರೊನಾ ನಾಲ್ಕನೇ ಅಲೆ ಬಗ್ಗೆ ಭಯ ಬೇಡ: ಡಾ. ಕೆ. ಸುಧಾಕರ್
ಬೆಂಗಳೂರು, ಏ. 25: ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕರೊನಾ ಹರಡದಂತೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗತ್ತಿದೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ಟೆಸ್ಟ್ ಗಳನ್ನು ಹೆಚ್ಚಳ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ ಕೆ. ಸುಧಾಕರ್ ತಿಳಿಸಿದ್ದಾರೆ.
ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಜತೆ ಚರ್ಚಿಸಿದ ಬಳಿಕ ಡಾ. ಸುಧಾಕರ್ ಇಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಯಲಿರುವ ಕೋವಿಡ್ ಕುರಿತ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಕೆ. ಸುಧಾಕರ್, 'ಕೋವಿಡ್ ನಾಲ್ಕನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ಶಕ್ತಿ ನಮಗಿದೆ. ನೆರೆ ರಾಜ್ಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಗೊಂಡಿವೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸದ್ಯದ ಸ್ಥಿತಿಯಲ್ಲಿ ಟೆಸ್ಟ್ ಗಳನ್ನು ಹೆಚ್ಚಳ ಮಾಡುತ್ತಿಲ್ಲ. ವಿಮಾನ ನಿಲ್ದಾಣದಲ್ಲಿ ಮೊದಲಿರುವ ನಿಯಮಗನ್ನೇ ಪಾಲನೆ ನೀಡಲು ಸೂಚಿಸಲಾಗಿದೆ,' ಎಂದು ತಿಳಿಸಿದರು.
ಸಿಎಂ ನೇತೃತ್ವದಲ್ಲಿ ಇಂದು ಸಭೆ:
ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮೂರನೇ ಅಲೆ ನಿರ್ವಹಣೆ ಮಾಡಿದಂತೆ ನಾಲ್ಕನೇ ಅಲೆಯನ್ನೂ ನಿರ್ವಹಣೆ ಮಾಡಲಾಗುವುದು. ನೆರೆ ರಾಜ್ಯಗಳು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅವಲೋಕಿಸಿ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸುತ್ತೇವೆ. ಹಾಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ವಿಚಾರಗಳು ಪ್ರಸ್ತಾಪವಾಗಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ನಾಲ್ಕನೇ ಅಲೆ ಆತಂಕ ಬೇಡ:
'ಕೊರೊನಾ ನಾಲ್ಕನೇ ಅಲೆ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಮೂರನೇ ಅಲೆಯಂತೆ ನಾಲ್ಕನೇ ಅಲೆ ಬಂದರೂ ಅದರಿಂದ ತೊಂದರೆ ತೀರಾ ಕಡಿಮೆ. ಈ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು. ನಾಲ್ಕನೇ ಅಲೆ ಬಗ್ಗೆ ಆತಂಕ ಪಡುವ ಅಗತ್ಯವೇ ಇಲ್ಲ,' ಎಂದು ಜಯದೇವ ಹೃದ್ರೋಗ ಸಂಸ್ಥೆಯ ಡಾ. ಸಿ.ಎನ್. ಮಂಜುನಾಥ್ ಇದೇ ವೇಳೆ ಸುದ್ದಿ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications