ಕರ್ನಾಟಕ: ಸಕ್ರಿಯ ಕೊರೊನಾ ಪ್ರಕರಣಗಳೊಂದಿಗೆ ಪರೀಕ್ಷೆ ಪ್ರಮಾಣವೂ ಇಳಿಕೆ
ಬೆಂಗಳೂರು, ಸೆಪ್ಟೆಂಬರ್ 23: ರಾಜ್ಯದಲ್ಲಿ ದಿನೇ ದಿನೇ ಸಕ್ರಿಯ ಕೊರೊನಾ ಪ್ರಕರಣಗಳೊಂದಿಗೆ ಪರೀಕ್ಷೆ ಪ್ರಮಾಣವೂ ಕೂಡ ಇಳಿಕೆಯಾಗುತ್ತಿದೆ.
ಆರಂಭಿಕ ಹಂತದಲ್ಲಿ ಸೋಂಕನ್ನು ಪತ್ತೆಹಚ್ಚಲು ಪರಿಣಾಮಕಾರಿ ರೀತಿಯಲ್ಲಿ ಪರೀಕ್ಷೆ ನಡೆಸುವುದು ಅತ್ಯಗತ್ಯವಾಗಿದೆ. ಆದರೂ, ಪರೀಕ್ಷೆಗಳ ಸಂಖ್ಯೆ ಇಳಿಕೆಯಾಗುತ್ತಿರುವುದು ಆತಂಕವನ್ನು ಹೆಚ್ಚಿಸಿದೆ.
ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ಹೆಚ್ಚಾಗಿದ್ದ ಪರೀಕ್ಷೆಗಳ ಸಂಖ್ಯೆ ತದನಂತರದ ದಿನಗಳಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ. ಸೆಪ್ಟೆಂಬರ್ 16 ರಂದು, ಕೋವಿಡ್ ಪರೀಕ್ಷೆಗಳ ಸಂಖ್ಯೆ 1,66,006, ನಂತರ ಸೆಪ್ಟೆಂಬರ್ 17 ರಂದು 1,48,496, ಸೆಪ್ಟೆಂಬರ್ 19 ರಂದು 1,38,920, ಸೆಪ್ಟೆಂಬರ್ 20 ರಂದು 1,29,784 ಮತ್ತು ಸೆಪ್ಟೆಂಬರ್ 21 ರಂದು 1,01,549. ಬುಧವಾರ, 1,46,772 ಪರೀಕ್ಷೆಗಳು ನಡೆದಿವೆ.

ಸರ್ಕಾರ ಇತ್ತೀಚೆಗಷ್ಟೇ ಪರೀಕ್ಷಾ ತಂತ್ರವನ್ನು ಬದಲಾಯಿಸಿರುವುದಾಗಿ ತಿಳಿಸಿತ್ತು. ದೈನಂದಿನ ಪರೀಕ್ಷಾ ಗುರಿ 1.75 ಲಕ್ಷವಾಗಿರಬೇಕು ಎಂದು ಹೇಳಿತ್ತು. ಆದರೂ, ಪರೀಕ್ಷೆಗಳ ಸಂಖ್ಯೆ ಇಳಿಕೆಯಾಗಿದೆ.
ಪರೀಕ್ಷೆಗಳ ಸಂಖ್ಯೆ ಕಡಿಮೆ ಮಾಡದಿರುವುದು ಮುಖ್ಯವಾಗಿದೆ. ಪರೀಕ್ಷೆ ಕಡಿಮೆ ಮಾಡಿದುವುದರಿಂದ ಲಕ್ಷಣ ರಹಿತರು ಹಾಗೂ ರೋಗ ಲಕ್ಷಣ ಇರುವವರು ಪತ್ತೆಯಾಗದೆ ಹೋಗುವ ಸಾಧ್ಯತೆಗಳಿವೆ. ಇದರಿಂತ ಸೋಂಕು ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ ಗುಣಾತ್ಮಕ ಮತ್ತು ಪರಿಮಾಣಾತ್ಮಕ ಪರೀಕ್ಷೆ ನಡೆಸುವುದು ಎರಡೂ ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಸೆಪ್ಟೆಂಬರ್ 15 ಕ್ಕಿಂತ ಹಿಂದಿನ ದಿನಗಳಲ್ಲೂ ಕೂಡ ಪರೀಕ್ಷೆಗಳ ಸಂಖ್ಯೆ ಕುಸಿದಿರುವುದು ಕಂಡು ಬಂದಿತ್ತು. ಸೆಪ್ಟೆಂಬರ್ 11 ರಂದು 1,19,503 ಪರೀಕ್ಷೆಗಳನ್ನು ನಡೆಸಲಾಗಿತ್ತು. ನಂತರ ಸೆಪ್ಟೆಂಬರ್ 12 ರಂದು 1,00,176, ಸೆಪ್ಟೆಂಬರ್ 13 ರಂದು 1,19,014 ಪರೀಕ್ಷೆಗಳು ಮತ್ತು ಸೆಪ್ಟೆಂಬರ್ 14 ರಂದು 1,06,645 ಪರೀಕ್ಷೆಗಳು ನಡೆದಿದ್ದವು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ರಾಜ್ಯದಲ್ಲಿ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಕಡಿಮೆ ಮಾಡಲಾಗಿದ್ದು, ಆರ್ಟಿ-ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವತ್ತ ಗಮನ ಹರಿಸಲಾಗಿದೆ. ಈ ವರೆಗೂ ರಾಜ್ಯದಲ್ಲಿ 4.64 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
ಈ ಪೈಕಿ 3.77 ಕೋಟಿ ಆರ್'ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದೆ. ಇದು ಇಡೀ ದೇಶದಲ್ಲಿಯೇ ಅತ್ಯಧಿಕವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಎದುರಾದ ಭಾರೀ ಮಳೆಯಿಂದಾಗಿ ಕಳೆದ ವಾರ ರಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿದೆ, ಆದರೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ನಡೆಸಲಾಗುತ್ತಿದೆ. ಕೇರಳ ಗಡಿ ಭಾಗದಲ್ಲಿ ಆರ್'ಟಿ-ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನನಿತ್ಯ 1 ಲಕ್ಷ ಪರೀಕ್ಷೆಗಳನ್ನು ನಡೆಸುವ ಗುರಿಯನ್ನು ನೀಡಲಾಗಿದೆ. ಆದರೂ 50,000-60,000 ಪರೀಕ್ಷೆಗಳ್ನು ನಡೆಸಲಾಗುತ್ತಿದೆ. ಸೆಪ್ಟೆಂಬರ್ 17 ರ ನಂತರ ನಗರದಲ್ಲಿ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿದೆ. ಸೆ.17 ರಂದು 37,179 ಪರೀಕ್ಷೆ ನಡೆಸಲಾಗಿದ್ದರೆ, ಸೆ.18 ರಂದು 49,954, ಸೆ.19 ರಂದು 41,695, ಸೆ.20 ರಂದು 56,108 ಪರೀಕ್ಷೆಗಳನ್ನು ನಡೆಸಲಾಗಿದೆ.
ರಾಷ್ಟ್ರೀಯ ಆಯೋಗ ನಿರ್ದೇಶಕಿ ಡಾ.ಅರುಂದತಿ ಚಂದ್ರಶೇಖರ್ ಅವರು ಮಾತನಾಡಿ, ಪಾಸಿಟಿವಿಟಿ ಪರೀಕ್ಷೆಗಳ ಸಂಖ್ಯೆ ಕಡಿಮೆಯಾದಂತೆ ಸೋಂಕಿತ ಸಂಪರ್ಕ ಪತ್ತೆ ಕೂಡ ಕಡಿಮೆಯಾಗಲಿದೆ.
ಒಬ್ಬ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿರುವ ಕನಿಷ್ಟ 10-15 ಮಂದಿಯನ್ನು ಪರೀಕ್ಷೆಗೊಳಪಡಿಸಬೇಕು. ಗಡಿ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಪರೀಕ್ಷೆಗಳನ್ನು ನಡೆಸಿದರೆ, ಲಕ್ಷಣ ರಹಿತ ವ್ಯಕ್ತಿಗಳು ಪತ್ತೆಯಾಗುತ್ತಾರೆಂದು ಹೇಳಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 80.67 (80,67,26,335) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 4,29,03,090 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಇನ್ನು ಕೆಲವೇ ದಿನಗಳಲ್ಲಿ 64 ಲಕ್ಷ ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications