Coronavirus: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ- 500 ದಾಟಿದ ಆ್ಯಕ್ಟಿವ್ ಕೇಸ್!
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದ್ದು ಮಾಸ್ಕ್ ಹಾಗೂ ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಲು ಸೂಚಿಸಲಾಗುತ್ತಿದೆ.
ಬೆಂಗಳೂರು ಮಾರ್ಚ್ 14: ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು ಜ್ವರ, ನಗಡಿ, ಕೆಮ್ಮು ಜನರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇತ್ತೀಚೆಗೆ ಜನಸಾಮಾನ್ಯರಲ್ಲಿ ಕೊರೊನಾ ಲಕ್ಷಣಗಳು ಹೆಚ್ಚಾಗಿ ಕಂಡು ಬರುತ್ತಿವೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಮಾರ್ಚ್ 13ರಂದು ರಾಜ್ಯದಲ್ಲಿ 510 ಸಕ್ರಿಯ ಪ್ರಕರಣಗಳಿರುವುದು ದಾಖಲಾಗಿದೆ. ರಾಜ್ಯದಲ್ಲಿ ಸೋಮವಾರ 62 ಹೊಸ ಪ್ರಕರಣಗಳು ವರದಿಯಾಗಿವೆ. ಮಾರ್ಚ್ 12 ರ ಸಕಾರಾತ್ಮಕ ದರವು 4.5% ರಷ್ಟಿದ್ದರೆ, ಸಾಪ್ತಾಹಿಕ ಒಟ್ಟು ಧನಾತ್ಮಕ ದರವು 2.60% ರಷ್ಟು ಇದೆ.

"ನಾವು ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳವನ್ನು ಕಾಣುತ್ತಿದ್ದೇವೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಹೇಳಿದ್ದಾರೆ. ದಾಖಲಾತಿ ಪಡೆಯುವ ಹೆಚ್ಚಿನ ಕೋವಿಡ್ -19 ರೋಗಿಗಳಿಗೆ ಒಬ್ಬರಿಂದ ಒಬ್ಬರಿಗೆ ವೈರಸ್ ತಗುಲಿರುವುದು ಕಂಡುಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಮಾಸ್ಕ್ ಸಾಮಾಜಿಕ ಅಂತರದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಕೇಳಿಕೊಳ್ಳಲಾಗುತ್ತಿದೆ.
ದೇಶವು 113 ದಿನಗಳಲ್ಲಿ ಮೊದಲ ಬಾರಿಗೆ 500 ಸಕ್ರಿಯ ಪ್ರಕರಣಗಳನ್ನು ದಾಖಲಿಸಿದೆ. ಒಟ್ಟಾರೆಯಾಗಿ ಸೋಂಕಿನ ಪ್ರಮಾಣ ಹೆಚ್ಚಿರುವುದನ್ನು ಇದು ತಿಳಿಸುತ್ತದೆ. ಅದರಲ್ಲೂ ಬಿಬಿಎಂಪಿ ಆಸ್ಪತ್ರೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಈ ಪ್ರಕರಣಗಳ ಹರಡುವಿಕೆಯ ಬಗ್ಗೆ ಮಾಹಿತಿಯನ್ನು ಪಡೆಯಲಾಗುತ್ತಿದೆ ಎಂದು ರಂದೀಪ್ ಹೇಳಿದ್ದಾರೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ, ಡಿಸೆಂಬರ್ 2022 ರಲ್ಲಿ ಕೇವಲ ಮೂರು ಪ್ರಕರಣಗಳು ವರದಿಯಾಗಿವೆ. ಜನವರಿಯಲ್ಲಿ ಆರು ಮತ್ತು ಫೆಬ್ರವರಿಯಲ್ಲಿ ನಾಲ್ಕು. ಮಾರ್ಚ್ ಮೊದಲ 10 ದಿನಗಳಲ್ಲಿ, ಎರಡು ಪ್ರಕರಣಗಳು ವರದಿಯಾಗಿವೆ ಎಂದು ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ಮನೋಜ್ ಕುಮಾರ್ ಎಚ್.ವಿ. ತಿಳಿಸಿದರು.
ಮಾಸ್ಕ್ಗಳ ಬಳಕೆ ಮಾಡದೇ ಇರುವುದು, ಕೋವಿಡ್ ಮುನ್ನೆಚ್ಚರಿಕೆ ಡೋಸ್ನೊಂದಿಗೆ ಕಳಪೆ ಆಹಾರ ಸೇವನೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕೋವಿಡ್ ಪ್ರಕರಣಗಳು ಹಠಾತ್ತನೆ ಹೆಚ್ಚಾಗಲು ಕಾರಣವಾಗಿವೆ ಎಂದು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳು ಮತ್ತು ಟ್ರಾವೆಲ್ ಮೆಡಿಸಿನ್ ಸಲಹೆಗಾರರಾದ ಡಾ ಸ್ವಾತಿ ರಾಜಗೋಪಾಲ್ ಹೇಳಿದರು.
ಕರ್ನಾಟಕ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (PHANA) ಅಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ಹೇಳುವ ಪ್ರಕಾರ- "ಅಪೋಲೋ ಆಸ್ಪತ್ರೆಗಳಲ್ಲಿ ಕಳೆದ ಒಂದು ವಾರದಲ್ಲಿ ಶಂಕಿತ ಮತ್ತು ಪರೀಕ್ಷಿಸಲಾದ 36 ಪ್ರಕರಣಗಳಲ್ಲಿ ಎಂಟು ಪಾಸಿಟಿವ್ ಆಗಿದೆ." ಇನ್ಫ್ಲುಯೆನ್ಸ ಎ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ವರದಿಯಾಗಿದೆ, ಇದು ರೋಗನಿರ್ಣಯವನ್ನು ಹೆಚ್ಚು ಸವಾಲಾಗಿ ಮಾಡುತ್ತಿದೆ ಎಂದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications