ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್: ನಿಗಮ ಮಂಡಳಿ ಸದಸ್ಯರ ನೇಮಕ!
ಬೆಂಗಳೂರು, ನವೆಂಬರ್ 08: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಯಾಗಲಿದೆ ಎನ್ನುವ ಗುಸು ಗುಸು ಖೆಳಿ ಬರುತ್ತಿದೆ. ಅಲ್ಲದೇ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಚರ್ಚೆಯ ನಡುವೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಿಗಮ ಮಂಡಳಿ ಸದಸ್ಯರ ನೇಮಕದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವ ಕ್ಷೇತ್ರದಲ್ಲಿ ಓರ್ವ ಮಹಿಳೆ ಬಳಿ 200 ಮತಗಳಿವೆ ಎಂದು ಆರೋಪ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮತಪೆಟ್ಟಿಗೆಯಲ್ಲಿ 49 ಶೂನ್ಯಕ್ಕೆ ಸಮ, 51 ನೂರಕ್ಕೆ ಸಮ. ಕಾಂಗ್ರೆಸ್ ಅಭ್ಯರ್ಥಿಯಾದರೇನು, ಬಿಜೆಪಿ ಅಭ್ಯರ್ಥಿಯಾದರೇನು. ಎಲ್ಲಿ ಅಕ್ರಮ ನಡೆಡಿದೆಯೋ ಅದರ ಬಗ್ಗೆ ಮಾತನಾಡಿದ್ದೇವೆ. ಕೆಲವು ಕಡೆ ಅಕ್ರಮವನ್ನು ಮೀರಿ ನಾವು ಗೆದ್ದಿದ್ದೇವೆ. ಆಳಂದದಲ್ಲಿ ನಮ್ಮ ಅಭ್ಯರ್ಥಿ ಈ ಷಡ್ಯಂತ್ರ ಮೀರಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಆಗಿರುವ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ಬಯಲು ಮಾಡಿದ್ದಾರೆ. ಆದರೂ ಆಯೋಗ ಯಾಕೆ ಇದನ್ನು ತಡೆಗಟ್ಟುತ್ತಿಲ್ಲ. ಈಗಿರುವ ತಂತ್ರಜ್ಞಾನದಲ್ಲಿ ಈ ಅಕ್ರಮ ತಡೆಯಲು ಯಾಕೆ ಸಾಧ್ಯವಾಗಿಲ್ಲ? ಚುನಾವಣಾ ಆಯೋಗವು ಈ ಅಕ್ರಮದಲ್ಲಿ ಭಾಗಿಯಾಗಿದೆ ಎಂದು ತಿಳಿಸಿದರು.
ಸಂವಿಧಾನದಲ್ಲಿ ಗೌಪ್ಯ ಮತದಾನ ಎಂದು ಇರುವಾಗ ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ನೀಡಬೇಕು ಎಂದು ರಾಹುಲ್ ಗಾಂಧಿ ಅವರು ಹೇಗೆ ಕೇಳುತ್ತಾರೆ ಎಂಬ ಬಗ್ಗೆ ಮಾತನಾಡಿ, ಮತದಾರ ಯಾರಿಗೆ ಮತಹಾಕಿದ ಎಂದು ತೋರಿಸದಿದ್ದರೂ, ಮತಗಟ್ಟೆಯೊಳಗೆ ಎಷ್ಟು ಮತದಾರರು ಹೋದರು, ಯಾವ ಸಮಯದಲ್ಲಿ ಹೋದರು ಎಂಬ ಮಾಹಿತಿ ನೀಡಲು ಸಮಸ್ಯೆ ಏನು? ಮಹಾರಾಷ್ಟ್ರದಲ್ಲಿ ಕೊನೆ ಒಂದು ಗಂಟೆ ಅವಧಿಯಲ್ಲಿ ಲಕ್ಷಾಂತರ ಮತ ಚಲಾವಣೆಯಾಗಿದೆ. ಈ ಮತಗಳನ್ನು ಯಾರು ಹಾಕಿದರು ಎಂಬುದು ದಾಖಲೆ ಬೇಕಲ್ಲವೇ? ಇದು ದೇಶದ ಮುಂದಿರುವ ಸವಾಲು ಎಂದರು.
ಮಹದೇವಪುರ ಕ್ಷೇತ್ರದಲ್ಲಿನ ಅಕ್ರಮದ ಬಗ್ಗೆ ತನಿಖೆ ಮಾಡಿಸುತ್ತೀರಾ ಎಂಬ ಬಗ್ಗೆ ಮಾತನಾಡಿ, ಈ ತನಿಖೆಯನ್ನು ಸರ್ಕಾರವೇ ಮಾಡಬೇಕಿಲ್ಲ. ಚುನಾವಣೆ ಪ್ರಕ್ರಿಯೆ ವೇಳೆ ಸಂಪೂರ್ಣ ನಿಯಂತ್ರಣ ಚುನಾವಣಾ ಆಯೋಗದ ಕೈಯಲ್ಲಿರುತ್ತದೆ. ಹೀಗಾಗಿ ರಾಜಕೀಯ ಪಕ್ಷವಾಗಿ ನಾವೇ ತನಿಖೆ ಮಾಡಿ ಅಕ್ರಮಗಳನ್ನು ದಾಖಲೆ ಸಮೇತ ಬಹಿರಂಗಪಡಿಸಿದ್ದೇವೆ. ಮಾಧ್ಯಮಗಳು ಕೂಡ ತನಿಖೆ ಮಾಡಿ ಈ ಆರೋಪ ನಿಜ ಎಂದು ವರದಿ ಮಾಡಿವೆ ಎಂದು ತಿಳಿಸಿದರು.
ಈ ಆರೋಪಗಳ ಬಗ್ಗೆ ಕಾಂಗ್ರೆಸ್ ಎಲ್ಲೂ ಅಫಿಡವಿಟ್ ಸಲ್ಲಿಸಿಲ್ಲ ಚುನಾವಣಾ ಆಯೋಗ, ನ್ಯಾಯಾಲಯದ ಮೆಟ್ಟಿಲೂ ಏರಿಲ್ಲ ಯಾಕೆ ಎಂಬ ಬಗ್ಗೆ ಮಾತನಾಡಿ, ನಾವು ಚುನಾವಣಾ ಅಯೋಗದ ಬಳಿ ಪೂರಕ ದಾಖಲೆಗಳನ್ನು ಕೇಳುತ್ತಿದ್ದೇವೆ. ಚುನಾವಣಾ ಆಯೋಗದ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರಬೇಕು. ಅವರು ಅಗತ್ಯ ಮಾಹಿತಿ ನೀಡಬೇಕು. ಆದರೆ ಅವರು ಈ ಮಾಹಿತಿ ನೀಡುತ್ತಿಲ್ಲ. ನಾವು ತನಿಖೆ ಮಾಡಿ ಸಂಗ್ರಹಿಸಿರುವ ಮಾಹಿತಿಗಳನ್ನು ಬಹಿರಂಗಪಡಿಸಿದ್ದೇವೆ. ನಾನೇ ಹೋಗಿ ಮಾಹಿತಿ ನೀಡುವಂತೆ ಅರ್ಜಿ ಕೊಟ್ಟಿದ್ದರೂ ಅವರೇ ನನ್ನ ಬಳಿ ದಾಖಲೆ ಕೇಳುತ್ತಿದ್ದಾರೆ. ಮಾಹಿತಿ ಕೇಳುವ ಹಕ್ಕು ನಮಗಿದೆ. ಆ ಮಾಹಿತಿಗಳನ್ನು ಕೊಡಬೇಕಾಗಿರುವುದು ಅವರ ಕರ್ತವ್ಯ. ಅವರು ಮೊದಲು ದಾಖಲೆ ನೀಡಲಿ. ಆಮೇಲೆ ನಾವು ಅಫಿಡವಿಟ್ ಸಲ್ಲಿಸುತ್ತೇವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications