ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ತನಿಖೆ ಭೀತಿ
ಬೆಂಗಳೂರು, ಮೇ 12 : ಗಣಿ ಅಕ್ರಮ ಸೇರಿದಂತೆ ವಿವಿಧ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಲೋಕಾಯುಕ್ತ ತನಿಖೆ ವೇಗ ಪಡೆದುಕೊಳ್ಳುತ್ತಿದೆ. ತನಿಖೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನೀಡಿವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಸೂಚನೆ ರವಾನಿಸಲಾಗಿದೆ.
ಕೆಲವು ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಹಕಾರ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಐಎಎಸ್, ಐಎಫ್ಎಸ್, ಐಪಿಎಸ್ ದರ್ಜೆಯ ಹಿರಿಯ ಅಧಿಕಾರಿಗಳನ್ನೂ ಲೋಕಾಯುಕ್ತ ವಿಚಾರಣೆಯ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡಲಾಗಿತ್ತು.

ಸದ್ಯ ಈ ತನಿಖೆಯನ್ನು ತ್ವರಿತಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಲೋಕಾಯುಕ್ತ ತನಿಖೆಗೆ ಸಹಕಾರ ನೀಡುವಂತೆ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಕಚೇರಿಯಿಂದ ಸೂಚನೆ ರವಾನಿಸಲಾಗಿದೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಾಗಿದೆ. [ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಸಿಎಂ]
ತಮ್ಮ ಆದೇಶದಲ್ಲಿ ಕೌಶಿಕ್ ಮುಖರ್ಜಿ ಅವರು, ಎಲ್ಲಾ ಇಲಾಖೆ ಕಾರ್ಯದರ್ಶಿಗಳಿಗೆ ಸರ್ಕಾರದ ಆದೇಶವಿರುವುದರಿಂದ ಯಾವುವೇ ಕಾರಣಕ್ಕೂ ಲೋಕಾಯುಕ್ತ ತನಿಖೆಗೆ ಅಡ್ಡಿ ಉಂಟಾಗಬಾರದು. ಅಧಿಕಾರಿಗಳು, ನೌಕರರು, ಇನ್ನಿತರ ಸಿಬ್ಬಂದಿಗಳ ಕುರಿತ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. [22 ಅಧಿಕಾರಿಗಳ ವಿರುದ್ಧ ತನಿಖೆ]
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲ್ಲಿಸಿದ್ದ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ 677 ಅಧಿಕಾರಿಗಳು, ನೌಕರರು ಭಾಗಿಯಾಗಿದ್ದಾರೆ ಎಂದು ಹೇಳಲಾಗಿತ್ತು. ನಂತರ ಸುಮಾರು 350 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿತ್ತು.
ಸಿಎಂ ಅನುಮತಿ ನೀಡಿದ್ದರು : ಭ್ರಷ್ಟಾಚಾರ ಮತ್ತು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬ ಮಾತು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಜೂನ್ ನಲ್ಲಿ 74 ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧದ ಲೋಕಾಯುಕ್ತ ತನಿಖೆಗೆ ಹಸಿರು ನಿಶಾನೆ ತೋರಿಸಿದ್ದರು. ನಂತರ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿಯೂ ನಿರ್ಧಾರ ಕೈಗೊಳ್ಳಲಾಗಿತ್ತು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications