ಸಚಿವ ಬಾಬುರಾವ್ ವಿರುದ್ಧ ಬೆದರಿಕೆ, ವಂಚನೆ ಆರೋಪ
ಬೆಂಗಳೂರು, ಜುಲೈ 06: ಜವಳಿ ಮತ್ತು ಅಂತರಿಕ ಸಾರಿಗೆ, ಬಂದರು ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಅವರ ಮೇಲೆ ಕೋಟ್ಯಂತರ ರುಪಾಯಿ ವಂಚನೆ ಆರೋಪ ಹೊರೆಸಲಾಗಿದೆ.
ಸಚಿವ ಚಿಂಚನಸೂರ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ನೀಡುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸಂತ್ರಸ್ತ ಮಹಿಳೆ ಅಂಜನಾ ವಿ. ಶಾಂತವೀರ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.[ಆಸೆ ತೋರಿಸಿ ಮೋಸ ಮಾಡಿದ ಚಿಂಚನಸೂರ್ : ಆರೋಪ]
ಅಂಜನಾ ವಿ. ಶಾಂತವೀರ್ ಎಂಬ ಮಹಿಳೆಯಿಂದ ಸುಮಾರು 11 ಕೋಟಿ 88 ಲಕ್ಷ ರೂಪಾಯಿಗಳನ್ನು ಸಚಿವ ಬಾಬುರಾವ್ ಚಿಂಚನಸೂರ್ ಅವರು ಸಾಲ ರೂಪದಲ್ಲಿ ಪಡೆದುಕೊಂಡಿದ್ದರು. ಅದರೆ, ಇದುವರೆವಿಗೂ ಸಾಲ ವಾಪಸ್ ಮಾಡಿಲ್ಲ ಹಾಗೂ ಅವರು ನೀಡಿದ ಚೆಕ್ ಗಳು ಬೌನ್ಸ್ ಆಗಿದೆ. ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಅನುಮತಿ ನೀಡಿ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಲ್ಲಿ ಅಂಜನಾ ಅವರು ಬೇಡಿಕೊಂಡಿದ್ದಾರೆ.

2011 ಜನವರಿಯಿಂದ ಸೆಪ್ಟಂಬರ್ ತಿಂಗಳ ವರೆಗೆ ವಿವಿಧ ಮೊತ್ತಗಳಲ್ಲಿ ಒಟ್ಟು 11 ಕೋಟಿ 88 ಲಕ್ಷ ರೂಪಾಯಿ ಸಾಲ ಪಡೆದಿರುವ ಕುರಿತು ಆಗಿರುವ ಒಪ್ಪಂದ ಪತ್ರವನ್ನು ಲಗತ್ತಿಸಿ ಮನವಿಯನ್ನು ಸ್ಪೀಕರ್ ಕಚೇರಿಗೆ ಕಳಿಸಲಾಗಿದೆ. ಪಡೆದ ಸಾಲಕ್ಕೆ ಪ್ರತಿಯಾಗಿ ನನಗೆ # 692458 ನಂಬರಿನ ಚೆಕ್ಕನ್ನು 30:04:2015ನೇ ದಿನಾಂಕಕ್ಕೆ ಕೊಟ್ಟಿದ್ದಾರೆ. ಈ ಚೆಕ್ ವಿಧಾನಸೌಧ ಬ್ರಾಂಚ್ಗೆ ಸಂಬಂಧಪಟ್ಟಿದ್ದಾಗಿದೆ. ಆದರೆ ಈ ಚೆಕ್ ಬೌನ್ಸ್ ಆಗಿದೆ. ಅಕೌಂಟ್ನಲ್ಲಿ ಹಣವಿಲ್ಲ. ಇದರಿಂದ ನಮಗೆ ಶಾಕ್ ಆಗಿದೆ ಎಂದು ಅಂಜನಾ ಹೇಳಿದ್ದಾರೆ.
ಅಂಜನಾ ಅವರ ಮನವಿ ಪರಿಶೀಲಿಸಿರುವ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ಸಚಿವರು - ಶಾಸಕರನ್ನು ಸ್ಪೀಕರ್ ನೇಮಿಸುವುದಿಲ್ಲ. ಹೀಗಾಗಿ ಅವರ ಮೇಲೆ ಪ್ರಕರಣ ದಾಖಲಿಸುವ ಅನುಮತಿ ನೀಡುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇರುವುದಿಲ್ಲ ಎಂದು ಉತ್ತರಿಸಿದ್ದಾರೆ. ಹೀಗಾಗಿ, ಸಚಿವರಿಗೆ ಪ್ರಮಾಣ ವಚನ ಬೋಧಿಸುವ ರಾಜ್ಯಪಾಲರ ಮೊರೆ ಹೋಗಲು ಅಂಜನಾ ವಿ. ಶಾಂತವೀರ್ ಸಿದ್ಧತೆ ನಡೆಸಿದ್ದಾರೆ.
ನಾನು ಯಾರಿಗೂ ಬೆದರಿಕೆ ಹಾಕಿಲ್ಲ. ಆಕೆಯ ಆರೋಪದ ವಿರುದ್ಧವೇ ನಾನು ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications