ಎಚ್ಚೆತ್ತ ಕರ್ನಾಟಕ ಸರ್ಕಾರ : ನೀರು ಸಂಗ್ರಹಕ್ಕೆ ಯೋಜನೆ

ಬೆಂಗಳೂರು, ಮೇ, 14: ಬರ, ಕುಡಿಯುವ ನೀರಿನ ತಾತ್ವಾರ ಎದುರಿಸುತ್ತಿರುವ ಕರ್ನಾಟಕ ಕೆಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳು ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಮಳೆ ನೀರು ಕೊಯ್ಲು ಮತ್ತು ನೀರು ಸಂಗ್ರಹಕ್ಕೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಕರ್ನಾಟಕದ 3562 ಕೆರೆಗಳಲ್ಲಿ ಈ ಬಾರಿಯ ಮಳೆಗಾಲದಲ್ಲಿ ನೀರು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ. ಕೆರೆಗಳ ಹೂಳು ತೆಗೆಯಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.[ಉತ್ತರ ಕನ್ನಡದ ಜೀವನಾಡಿ ಅಘನಾಶಿನಿಯೂ ಬರಿದು]

water

90.95 ಕೋಟಿ ರೂ. ವೆಚ್ಚದಲ್ಲಿ 2957 ಕೆರೆಗಳ ಒತ್ತುವರಿ ತೆರವು ಹಾಗೂ ರಾಜಕಾಲುವೆಗಳ ದುರಸ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೆರೆಗಳಲ್ಲಿ ನೀರು ಸಂಗ್ರಹಿಸಿ ಆ ಮೂಲಕ ಅಂತರ್ಜಲ ಮಟ್ಟ ಸುಧಾರಣೆ ಮಾಡಲಾಗುವುದು. ಉದ್ಯೋಗ ಖಾತ್ರಿ ಯೋಜನೆಯನ್ನು ಇದಕ್ಕೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.[ಬಕ್ಕ ಬರಿದಾದ ಕೆಆರ್‌ಎಸ್, ಕೊಡಗಿನಲ್ಲಿ ಮಳೆ ಸಿಂಚನ]

ಹೂಳು ಅವ್ಯವಹಾರ ಸಿಐಡಿಗೆ: ಕೊಪ್ಪಳ ಜಿಲ್ಲೆಯಲ್ಲಿ ಕೆರೆ ಹೂಳು ತೆಗೆಯುವ ಕಾಮಗಾರಿಯಲ್ಲಿ ಅವ್ಯವಹಾರ ನಡೆದ ದೂರುಗಳು ಕೇಳಿಬಂದಿದ್ದು ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+