ಲೋಕಾಯುಕ್ತ ಕಚೇರಿಯಿಂದ ಕಡತ ಸಾಗಿಸಿದ ಇಬ್ಬರು ಯಾರು?
ಬೆಂಗಳೂರು, ಮಾರ್ಚ್ 14 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಲೋಕಾಯುಕ್ತ ಕಚೇರಿಯಿಂದ ಕಾಣೆಯಾದ ಕಡತಗಳ ಬಗ್ಗೆ ತನಿಖೆ ಆರಂಭಿಸಿದೆ. ಕಚೇರಿಯಿಂದ ಕಡತಗಳನ್ನು ಸಾಗಿಸಿದ ವ್ಯಕ್ತಿಗಳ ಗುರುತು ಪತ್ತೆ ಹಚ್ಚಲು ವಿವಿಧ ಇಲಾಖೆಗಳಿಗೆ ಪತ್ರ ಬರೆದಿದೆ.
ಭ್ರಷ್ಟಾಚಾರ ಪ್ರಕರಣ ಬಯಲಿಗೆ ಬಂದ ಒಂದೆರಡು ದಿನಗಳಲ್ಲಿಯೇ ಇಬ್ಬರು ಲೋಕಾಯುಕ್ತರ ಕಚೇರಿಯಿಂದ ಕಡತಗಳನ್ನು ಹೊತ್ತೊಯ್ದು ನ್ಯಾ.ಭಾಸ್ಕರರಾವ್ ಅವರ ಕಾರಿನಲ್ಲಿಡುತ್ತಿದ್ದ ದೃಶ್ಯ ಮಾಧ್ಯಮಗಳಲ್ಲಿ ಸೆರೆಯಾಗಿದೆ. ಈ ವ್ಯಕ್ತಿಗಳು ಯಾರು? ಎನ್ನುವುದನ್ನು ಪತ್ತೆ ಹಚ್ಚಲು ಸಹಕರಿಸಿ ಎಂದು ಎಸ್ಐಟಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಪತ್ರ ಬರೆದು ಸೂಚನೆ ನೀಡಿದೆ. [ಭಾಸ್ಕರರಾವ್ ವಿರುದ್ಧದ ತನಿಖೆಗೆ ರಾಜ್ಯಪಾಲರ ಒಪ್ಪಿಗೆ ಬೇಕು]

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರರಾವ್ ಅವರ ವಿರುದ್ಧ ಈ ಪ್ರಕರಣದಲ್ಲಿ ಮೊಕದ್ದಮೆ ದಾಖಲು ಮಾಡಲು ಎಸ್ಐಟಿ ರಾಜ್ಯಪಾಲರ ಅನುಮತಿ ಕೇಳಿದೆ. ಎಸ್ಐಟಿ ಅಧಿಕಾರಿಗಳು ಸೂಕ್ತ ಸಾಕ್ಷಿಗಳನ್ನು ಸಂಗ್ರಹಿಸಲು ಭಾಸ್ಕರ್ ರಾವ್ ಅವರ ಕಚೇರಿಯಲ್ಲಿನ ಕಡತಗಳನ್ನು ಕಾರಿಗೆ ಸಾಗಣೆ ಮಾಡಿದ ಇಬ್ಬರನ್ನು ಪತ್ತೆ ಹಚ್ಚಲು ವಿವಿಧ ಇಲಾಖೆಗಳಿಗೆ ಪತ್ರ ಬರೆದಿದೆ. [ಕರ್ನಾಟಕ ಲೋಕಾಯುಕ್ತರ ನೇಮಕ ಮತ್ತಷ್ಟು ವಿಳಂಬ]
ಕಡತಗಳನ್ನು ಕಾರಿಗೆ ಸಾಗಣೆ ಮಾಡಿದ ಇಬ್ಬರು ವ್ಯಕ್ತಿಗಳು ಯಾರು?, ಸರ್ಕಾರಿ ನೌಕರರು ಎನ್ನಲಾದ ಆ ವ್ಯಕ್ತಿಗಳು ನಿಮ್ಮ ಸಿಬ್ಬಂದಿಯೇ? ಎಂಬುದನ್ನು ಪತ್ತೆ ಮಾಡಿ ತಿಳಿಸುವಂತೆ ಎಸ್ಐಟಿ ಅಧಿಕಾರಿಗಳು ಪತ್ರದಲ್ಲಿ ಮನವಿ ಮಾಡಿದ್ದು, ಕಡತ ಸಾಗಿಸುತ್ತಿರುವ ದೃಶ್ಯಾವಳಿಯ ಸಿಡಿಯನ್ನೂ ಜೊತೆಗೆ ಕಳುಹಿಸಿಕೊಟ್ಟಿದ್ದಾರೆ. [ಲೋಕಾಯುಕ್ತದಲ್ಲಿ ಏನಿದು ಹಗರಣ?]
ಬಿಬಿಎಂಪಿ, ಖನಿಜ ಭವನ, ಜಲಮಂಡಳಿ, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳಿಗೆ ಎಸ್ಐಟಿ ಪತ್ರ ಮತ್ತು ಸಿಡಿ ಕಳುಹಿಸಿದೆ. ಅದಷ್ಟು ಬೇಗ ಅವರನ್ನು ಪತ್ತೆ ಹಚ್ಚಿ ವಿವರ ನೀಡುವಂತೆ ಸೂಚನೆ ನೀಡಿದ್ದಾರೆ. [ಭಾಸ್ಕರರಾವ್ ರಾಜೀನಾಮೆ]
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದೆ. ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ರಜೆ ಪಡೆದಿದ್ದ ಭಾಸ್ಕರರಾವ್, ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ, ಕರ್ನಾಟಕ ಲೋಕಾಯುಕ್ತರ ಹುದ್ದೆ ತೆರವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications