ಶ್ರೀಲಂಕಾಗೆ ಹೊರಟಿದ್ದ ಹೊಟ್ಟೆ ಕೃಷ್ಣ ಬಂಧಿಸಿದ ಎಸ್ಐಟಿ
ಬೆಂಗಳೂರು, ಆಗಸ್ಟ್ 24 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟ್ಟೆ ಕೃಷ್ಣ ಎಂಬುವವರನ್ನು ಎಸ್ಐಟಿ ಬಂಧಿಸಿದೆ. ಪ್ರಕರಣದಲ್ಲಿ ಇತರರು ಬಂಧಿತರಾದ ನಂತರ ತಲೆಮರೆಸಿಕೊಂಡಿದ್ದ ಹೊಟ್ಟೆ ಕೃಷ್ಣ ಅವರು ಶ್ರೀಲಂಕಾಗೆ ಹಾರುವ ತಯಾರಿಯಲ್ಲಿದ್ದಾಗ ಬಂಧಿಸಲಾಗಿದೆ.
ಶ್ರೀಲಂಕಾಗೆ ಹೊರಡಲು ಸಿದ್ಧರಾಗುತ್ತಿದ್ದ ಹೊಟ್ಟೆ ಕೃಷ್ಣ ಅವರನ್ನು ಶನಿವಾರ ರಾತ್ರಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಜಿ.ಬೋಪಯ್ಯ ಅವರ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ಆ.29ರ ತನಕ ಎಸ್ಐಟಿ ವಶಕ್ಕೆ ಒಪ್ಪಿಸಲಾಗಿದೆ. [ಅಶ್ವಿನ್ ರಾವ್ ಸ್ನೇಹಿತನ ಬಂಧನ]

ಹೊಟ್ಟೆ ಕೃಷ್ಣ ಭ್ರಷ್ಟಚಾರ ಪ್ರಕರಣದಲ್ಲಿ ಬಂಧಿತರಾಗಿರುವ 11ನೇ ಆರೋಪಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಬಂಧಿಸಿರುವ ವಿ.ಭಾಸ್ಕರ್ ಸ್ನೇಹಿತರಾಗಿರುವ ಹೊಟ್ಟೆ ಕೃಷ್ಣ ಅವರು ಇತರ ಆರೋಪಿಗಳು ಬಂಧಿತರಾದ ನಂತರ ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. [ನಿವೃತ್ತ ನ್ಯಾ.ಸಂತೋಷ್ ಹೆಗಡೆ ಸಂದರ್ಶನ]
ಎಸ್ಐಟಿ ಮೂಲಗಳ ಮಾಹಿತಿ ಪ್ರಕಾರ ಹೊಟ್ಟೆ ಕೃಷ್ಣ ಅವರನ್ನು ರಾಮನಗರದ ಲೋಕೋಪಯೋಗಿ ಇಂಜಿನಿಯರ್ ಉದಯ್ ಕುಮಾರ್ ಅವರು ನೀಡಿರುವ ದೂರಿನ ಅನ್ವಯ ಬಂಧಿಸಲಾಗಿದೆ. ಹೊಟ್ಟೆ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್ಐಟಿ ವಿಚಾರಣೆ ಮುಂದುವರೆಸಿದೆ.
11 ಆರೋಪಿಗಳ ಬಂಧನ : ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 11 ಆರೋಪಿಗಳನ್ನು ಎಸ್ಐಟಿ ಬಂಧಿಸಿದೆ. ಅಶ್ವಿನ್ ರಾವ್, ಎಚ್.ಎಸ್.ರಾಜಶೇಖರ್, ಸೈಯದ್ ರಿಯಾಜ್, ಅಶೋಕ್ ಕುಮಾರ್, ಶ್ರೀನಿವಾಸ ಗೌಡ, ಶಂಕರೇಗೌಡ, ವಿ. ಭಾಸ್ಕರ್, ಮೊಹಮ್ಮದ್ ಸಾದಿಕ್, ಎನ್. ನರಸಿಂಹಮೂರ್ತಿ, ನರಸಿಂಹರಾವ್, ಹೊಟ್ಟೆ ಕೃಷ್ಣ ಬಂಧಿತ ಆರೋಪಿಗಳು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications