ಲೋಕಾಯುಕ್ತ ಕೋಟಿ ಡೀಲ್, ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಜು.01 : ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಕುರಿತು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನಡೆಸುತ್ತಿದ್ದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತನಿಖೆಗೆ ತಡೆ ನೀಡುವಂತೆ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಕೋರ್ಟ್ ಮೆಟ್ಟಿಲೇರಿದ್ದರು.
ಬುಧವಾರ ನ್ಯಾಯಮೂರ್ತಿ ಎನ್. ಕುಮಾರ್ ಅವರ ಪೀಠ ತನಿಖೆಗೆ ತಡೆಯಾಜ್ಞೆ ನೀಡಿದೆ. ಸರ್ಕಾರ ಹಗರಣದ ತನಿಖೆಗೆ ವಿಶೇಷ ತನಿಖಾ ದಳ (ಎಸ್ಐಟಿ) ರಚನೆ ಮಾಡಿದೆ. ಒಟ್ಟಿಗೆ ಎರಡು ತನಿಖೆ ಬೇಡವೆಂದು ಅಭಿಪ್ರಾಯಪಟ್ಟಿರುವ ಕೋರ್ಟ್ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. [ಲೋಕಾ ಹಗರಣ, ಕೃಷ್ಣರಾವ್ ಗುರುತು ಪತ್ತೆ]

ಲೋಕಾಯುಕ್ತದಲ್ಲಿ ನಡೆದ ಹಣದ ಬೇಡಿಕೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಸೂಚನೆ ನೀಡಿದ್ದರು. ಆದರೆ, ಸೋಮವಾರ ನ್ಯಾ.ಭಾಸ್ಕರರಾವ್ ಈ ತನಿಖೆಗೆ ತಡೆಯಾಜ್ಞೆ ನೀಡಿದ್ದರು. ಮಂಗಳವಾರ ಪುನಃ ತನಿಖೆ ನಡೆಸುವಂತೆ ಉಪ ಲೋಕಾಯುಕ್ತರು ಆದೇಶ ಹೊರಡಿಸಿದ್ದರು. [ಲೋಕಾಯುಕ್ತ ಹಗರಣ, ತನಿಖೆಗೆ ಆದೇಶ]
ಬುಧವಾರ ಹಣದ ಬೇಡಿಕೆ ಹಗರಣದಲ್ಲಿ ಹೆಸರು ಕೇಳಿಬರುತ್ತಿರುವ ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಪುತ್ರ ಅಶ್ವಿನ್ ರಾವ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು ಮತ್ತು ತನಿಖೆಗೆ ತಡೆ ನೀಡಬೇಕೆಂದು ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. [ಲೋಕಾಯುಕ್ತ ಹಗರಣ, ಎಸ್ ಐಟಿ ತನಿಖೆ]
ಅರ್ಜಿದಾರ ಅಶ್ವಿನ್ ರಾವ್ ಪರವಾಗಿ ವಾದ ಮಂಡನೆ ಮಾಡಿದ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು, ಒಂದೇ ಬಾರಿಗೆ ಎರಡು ತನಿಖೆ ನಡೆಯುತ್ತಿದೆ. ಹಗರಣದ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಆದ್ದರಿಂದ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications