ಲೋಕಾ ಹಗರಣ : ಅಶ್ವಿನ್ ರಾವ್ ವಿರುದ್ಧ ಮತ್ತೊಂದು ಚಾರ್ಜ್ಶೀಟ್
ಬೆಂಗಳೂರು, ಡಿಸೆಂಬರ್ 16 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಅಶ್ವಿನ್ ರಾವ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಶ್ರೀನಿವಾಸ್ ಅವರು ನೀಡಿದ ದೂರಿನ ತನಿಖೆ ನಡೆಸಿದ ಪೊಲೀಸರು ಬುಧವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ 1,250 ಪುಟಗಳ ಚಾರ್ಜ್ಶೀಟ್ ಅನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದು, ಈ ಪ್ರಕರಣದಲ್ಲಿ ವೈ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್, ಹೊಟ್ಟೆ ಕೃಷ್ಣ ಮತ್ತು ನರಹಿಂಹಮೂರ್ತಿ ಆರೋಪಿಗಳು ಎಂದು ಹೇಳಿದ್ದಾರೆ. [ಭಾಸ್ಕರರಾವ್ ರಾಜೀನಾಮೆ : ಯಾರು, ಏನು ಹೇಳಿದರು?]

ಲೋಕಾಯುಕ್ತದಲ್ಲಿ ನಡೆದ ಹಗರಣಗಳ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಶ್ರೀನಿವಾಸ್ ಎಂಬುವರು ನೀಡಿದ್ದ ದೂರಿನ ಆಧಾರದ ಮೇಲೆ ಅಶ್ವಿನ್ ರಾವ್, ಹೊಟ್ಟೆ ಕೃಷ್ಣ, ನರಸಿಂಹಮೂರ್ತಿ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಸದ್ಯ, ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. [ಕರ್ನಾಟಕ ಲೋಕಾಯುಕ್ತ ಹಗರಣದ Timeline]
ಏನಿದು ದೂರು? : ಹೊಟ್ಟೆ ಕೃಷ್ಣ, ಅಶ್ವಿನ್ ರಾವ್ ಮತ್ತು ನರಸಿಂಹಮೂರ್ತಿ ಅವರು, ಜಮೀನು ವಿವಾದ ಇತ್ಯರ್ಥ ಮಾಡಿಕೊಡುವುದಾಗಿ ಹೇಳಿ 3 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಶ್ರೀನಿವಾಸ್ ಅವರು ಎಸ್ಐಟಿಗೆ ದೂರು ನೀಡಿದ್ದರು. [ಉಪ ಲೋಕಾಯುಕ್ತ ಸುಭಾಷ್ ಅಡಿ ಪದಚ್ಯುತಿ?]
ಬಡಾವಣೆ ನಿರ್ಮಾಣಕ್ಕಾಗಿ ಶ್ರೀನಿವಾಸ್ ಅವರಿಗೆ ಸೇರಿದ್ದ ಜಮೀನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನ ಪಡಿಸಿಕೊಂಡಿತ್ತು. ಇದಕ್ಕೆ ನಗದು ಪರಿಹಾರ ನೀಡಿತ್ತು, ಆದರೆ, ಬದಲಿ ನಿವೇಶನ ಮಂಜೂರು ಮಾಡುವಲ್ಲಿ ವಿಳಂಬವಾಗಿತ್ತು. ಈ ಸಂಬಂಧ ವಿವಾದ ಉಂಟಾಗಿತ್ತು. ಆಗ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೊಟ್ಟೆಕೃಷ್ಣ 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 3 ಲಕ್ಷ ರೂ. ಪಡೆದುಕೊಂಡಿದ್ದರು.
ಅಶ್ವಿನ್ರಾವ್ ಮೂಲಕ ಕೆಲಸ ಮಾಡಿಸಿಕೊಡುವುದಾಗಿ ಹೊಟ್ಟೆಕೃಷ್ಣ ಹೇಳಿದ್ದರು. ನಂತರ ನರಸಿಂಹಮೂರ್ತಿ, ಅಶ್ವಿನ್ ರಾವ್ ಎಲ್ಲರೂ ಸೇರಿ ಹಣವನ್ನು ವಾಪಸ್ ನೀಡದೆ, ಕೆಲಸವನ್ನು ಮಾಡಿಕೊಡದೆ ವಂಚಿಸಿದ್ದಾರೆ ಎಂದು ಶ್ರೀನಿವಾಸ್ ಅವರು ದೂರು ನೀಡಿದ್ದಾರೆ.
-
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications