ಸೋನಿಯಾ ನಾರಂಗ್ ತನಿಖೆ ಕಡತಗಳು ಎಸ್ಐಟಿಗೆ
ಬೆಂಗಳೂರು, ಜುಲೈ 11 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಎಸ್ಪಿ ಸೋನಿಯಾ ನಾರಂಗ್ ನಡೆಸಿದ ತನಿಖೆಯ ಕಡತಗಳನ್ನು ಎಸ್ಐಟಿಗೆ ನೀಡುವಂತೆ ಸರ್ಕಾರ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಭ್ರಷ್ಟಾಚಾರದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಸೂಚನೆ ನೀಡಿದ್ದರು. ಇದರಂತೆ ತನಿಖೆ ನಡೆಸಿದ್ದ ಅವರು, ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದರು. [ಸೋನಿಯಾ ನಾರಂಗ್ ತನಿಖೆಗೆ ತಡೆ]

ಆದರೆ, ಅಶ್ವಿನ್ ರಾವ್ ಅವರು ಸೋನಿಯಾ ನಾರಂಗ್ ನಡೆಸುತ್ತಿದ್ದ ತನಿಖೆಗೆ ತಡೆ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್ ಸರ್ಕಾರ ರಚನೆ ಮಾಡಿದ ಎಸ್ಐಟಿ ಮಾತ್ರ ತನಿಖೆ ಮಾಡಲಿ ಎಂದು ಆದೇಶ ನೀಡಿತ್ತು. ಸೋನಿಯಾ ನಾರಂಗ್ ನಡೆಸುತ್ತಿದ್ದ ತನಿಖೆಗೆ ತಡೆಯಾಜ್ಞೆ ನೀಡಿತ್ತು.[ಲೋಕಾಯುಕ್ತದಲ್ಲಿ ಇದೇನಿದು ಹಗರಣ?]
ಎಸ್ಐಟಿಯ ಸದಸ್ಯರು : ಸರ್ಕಾರ ಎಡಿಜಿಪಿ ಕಮಲ್ ಪಂತ್ ನೇತೃತ್ವದಲ್ಲಿ ಎಸ್ಐಟಿಯನ್ನು ರಚನೆ ಮಾಡಿದೆ. ತನಿಖಾ ದಳದಲ್ಲಿ ಕೆಎಸ್ಆರ್ಟಿಸಿ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ (ಡಿಐಜಿ ) ಸೌಮೇಂದ್ರ ಮುಖರ್ಜಿ, ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಲಾಬೂರಾಮ್, ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ಪಾಟೀಲ್, ಸಿಐಡಿ ವಿಭಾಗದ ಇಬ್ಬರು ಡಿವೈಎಸ್ಪಿ, ಮೂವರು ಇನ್ಸ್ಪೆಕ್ಟರ್ಗಳು, ಇಬ್ಬರು ಸಬ್ಇನ್ಸ್ಪೆಕ್ಟರ್ ಸೇರಿದಂತೆ 12 ಸದಸ್ಯರಿದ್ದಾರೆ.
ಸರ್ಕಾರ ಈಗ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರು ನಡೆಸಿದ ತನಿಖೆಯ ವರದಿ ಮತ್ತು ಕಡತಗಳನ್ನು ಎಸ್ಐಟಿಗೆ ನೀಡುವಂತೆ ಸೂಚನೆ ನೀಡಿದೆ. ಅತ್ತ ವಿವಿಧ ಸಂಘಟನೆಗಳು ಲೋಕಾಯುಕ್ತ ನ್ಯಾ.ಭಾಸ್ಕರರಾವ್ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications