ಪರಿಷತ್ ನಾಮನಿರ್ದೇಶಿತರ ಪಟ್ಟಿ ಬದಲಾವಣೆ
ಬೆಂಗಳೂರು, ಜೂ. 24 : ವಿಧಾನ ಪರಿಷತ್ ನಾಮನಿರ್ದೇಶ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಸರ್ಕಾರ ಅಂತಿಮಗೊಳಿಸಿರುವ ಪಟ್ಟಿಗೆ ರಾಜ್ಯಪಾಲರು ಸೇರಿದಂತೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಿಯನ್ನು ಬದಲಾವಣೆ ಮಾಡಿ, ಇಂದು ಸಂಜೆ ರಾಜ್ಯಪಾಲರಿಗೆ ಸಲ್ಲಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ಪಟ್ಟಿ ಸಮೇತ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮನವೊಲಿಸಿ ಪಟ್ಟಿಯನ್ನು ಅವರ ಒಪ್ಪಿಗೆಗಾಗಿ ನೀಡಲಿದ್ದಾರೆ. ಮೊದಲು ಕಳುಹಿಸಿದ ಪಟ್ಟಿಯಲ್ಲಿದ್ದ ಇಂಟೆಕ್ ಅಧ್ಯಕ್ಷ ಶಾಂತಕುಮಾರ್ ಅವರ ಬದಲು ಐವಿನ್ ಡಿಸೋಜಾ ಅವರ ಹೆಸರನ್ನು ಮತ್ತೆ ಸೇರಿಸುವ ಸಾಧ್ಯತೆ ಇದೆ. ಇಬ್ಬರು ನಾಯಕರು ತೀವ್ರವಾಗಿ ಲಾಬಿ ನಡೆಸುತ್ತಿದ್ದು, ಯಾರಿಗೆ ಸ್ಥಾನ ಎಂಬುದು ಕುತೂಹಲ ಮೂಡಿಸಿದೆ.

ಸರ್ಕಾರ ಮೊದಲು ರಾಜ್ಯಪಾಲರಿಗೆ ನೀಡಿರುವ ಪಟ್ಟಿಯಲ್ಲಿ ವಿ.ಎಸ್.ಉಗ್ರಪ್ಪ, ಅಬ್ದುಲ್ ಜಬ್ಬಾರ್, ಇಕ್ಬಾಲ್ ಅಹಮ್ಮದ್ ಸರಡಗಿ, ಇಂಟೆಕ್ ಮುಖಂಡ ಶಾಂತಕುಮಾರ್ ಮತ್ತು ಚಿತ್ರನಟಿ ಡಾ.ಜಯಮಾಲಾ ಅವರ ಹೆಸರುಗಳಿತ್ತು. ಆದರೆ, ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. [ನಾಮನಿರ್ದೇಶಿತರ ಪಟ್ಟಿ ಹೀಗಿದೆ]
ಬಿಜೆಪಿ ವಿರೋಧ : ವಿಧಾನಪರಿಷತ್ ನಾಮನಿರ್ದೇಶನ ಪಟ್ಟಿಗೆ ಪ್ರತಿಪಕ್ಷ ಬಿಜೆಪಿ ಸಹ ಆಕ್ಷೇಪ ವ್ಯಕ್ತಪಡಿಸಿತ್ತು. ಕಾಂಗ್ರೆಸ್ ರಾಜಕೀಯ ಹಿನ್ನಲೆವುಳ್ಳ ವ್ಯಕ್ತಿಗಳನ್ನು ನಾಮ ನಿರ್ದೇಶಿತರ ಪಟ್ಟಿಯಲ್ಲಿ ಸೇರಿಸಿದೆ. ಆದ್ದರಿಂದ, ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಬಾರದು ಎಂದು ಕರ್ನಾಟಕ ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದ್ದರು. [ಪಟ್ಟಿಗೆ ಬಿಜೆಪಿ ವಿರೋಧ]
ಹೈಕೋರ್ಟ್ ನಲ್ಲಿ ಅರ್ಜಿ : ಸರ್ಕಾರ ನಾಮನಿರ್ದೇಶನ ಮಾಡಿರುವ ಪಟ್ಟಿಯ ಕುರಿತು ಹೈಕೋರ್ಟ್ನಲ್ಲಿಯೂ ಅರ್ಜಿಯೊಂದು ದಾಖಲಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವವರನ್ನು ನಾಮನಿರ್ದೇಶನ ಮಾಡಲಾಗಿದೆ. ಆದ್ದರಿಂದ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನಾಮನಿರ್ದೇಶ ಮಾಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications