ವೃತ್ತಿಪರ ಕೋರ್ಸ್ಗಳಿಗೆ ಜೂನ್ 25ರಿಂದ ಸೀಟು ಹಂಚಿಕೆ ಆರಂಭ!
ಬೆಂಗಳೂರು. ಜೂನ್ 2: ಕರ್ನಾಟಕ ಸಿಇಟಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ವಿಜಯಪುರದ ಶ್ರೀಧರ್ ದೊಡ್ಮನಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಎಂಜಿನಿಯರಿಂಗ್ ಹಾಗೂ ಇನ್ನಿತರೆ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳ ದಾಖಲೆಗಳನ್ನು ಜೂ.5ರಿಂದ ಪರಿಶೀಲನೆ ಮಾಡಲಾಗುತ್ತದೆ.
ರಾಜ್ಯದ 16 ಕೇಂದ್ರಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ನಂತರ ಜೂ.25ರಿಂದ ಕೌನ್ಸೆಲಿಂಗ್ ಪ್ರಾರಂಭಿಸಲು ಚಿಂತಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ್ ಖತ್ರಿ ತಿಳಿಸಿದ್ದಾರೆ.
ಜಾತಿ ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಆನ್ಲೈನ್ ಮೂಲಕ ಮತ್ತು ಅಂಕಪಟ್ಟಿ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ಮತ್ತು ಅಂಕಪಟ್ಟಿ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲೆಗಳನ್ನು ಖುದ್ದಾಗಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೆಇಎ ಅಧಿಕಾರಿ ವಿನೋದ್ ಪ್ರಿಯಾ ತಿಳಿಸಿದ್ದಾರೆ.

ಟಾಪ್-5 ಸ್ಥಾನ ಪಡೆದವರಿಗೆ ಉಚಿತ ಶಿಕ್ಷಣ: ಸಿಇಟಿ ಪರೀಕ್ಷೆ ನಾಲ್ಕು ವಿಭಾಗಗಳಲ್ಲಿ ಟಾಪ್ -5 ಸ್ಥಾನ ಪಡೆದವರಿಗೆ ಸರ್ಕಾರ ಉಚಿತ ಶಿಕ್ಷಣ ನೀಡಲು ಕ್ರಮ ಕೈಗೊಂಡಿದೆ. ಈ ವಿದ್ಯಾರ್ಥಿಗಳು ತಮ್ಮ ಪದವಿ ಪೂರೈಸುವವರೆಗೂ ಎಲ್ಲಾ ರೀತಿಯ ಶುಲ್ಕವನ್ನು ಸರ್ಕಾರವೇ ಭರಿಸಲಿದೆ.
ಶುಲ್ಕ ಹೆಚ್ಚಳ ಬಗ್ಗೆ ತೀರ್ಮಾನ ಇಲ್ಲ: ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಶುಲ್ಕ ಹೆಚ್ಚಳ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೂ.6ರಂದು ಸಭೆ ನಡೆಸಿ ಸೂಕ್ತ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೆಲವೇ ದಿನಗಳಲ್ಲಿ ನೀಟ್ ಫಲಿತಾಂಶ ಪ್ರಕಟವಾಗಲಿದ್ದು, ವೈದ್ಯ, ದಂತವೈದ್ಯ, ಭಾರತೀಯ ವೈದ್ಯಪದ್ಧತಿ ಹಾಗೂ ಹೋಮಿಯೋಪತಿ ಕೋರ್ಸ್ ಗಳಿಗೆ ಜೂ.25 ರಿಂದ ಜು.5ರ ಒಳಗೆ ಮೊದಲ ಹಂತದ ಕೌನ್ಸೆಲಿಂಗ್ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಆಗಸ್ಟ್ 18ರ ಒಳಗೆ ಎಲ್ಲ ಹಂತದ ಕೌನ್ಸೆಲಿಂಗ್ ಪೂರ್ಣಗೊಳ್ಳುವಂತೆ ಆದೇಶಿಸಿದೆ.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ











Click it and Unblock the Notifications