Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ನಾಯಕರಿಂದ ದೇಶಕ್ಕೆ ದಯಾನೀಯ ಸ್ಥಿತಿ: ಬೊಮ್ಮಾಯಿ

ಬೆಂಗಳೂರು,ಜು.8: ಕಾಂಗ್ರೆಸ್ ನಾಯಕರು ಮಹಾತ್ಮ ಗಾಂಧಿಯವರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಶವನ್ನು ದಯನೀಯ ಸ್ಥಿತಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಡಿಐಜಿ ಭಾಗಿಯಾಗಿರುವುದು ಕಂಡುಬಂದಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದರು. ಅವರು ಅವರನ್ನು ಪ್ರಶ್ನಿಸಲು ಅಥವಾ ಅಮಾನತು ಮಾಡಲು ಸಹ ಚಿಂತಿಸಲಿಲ್ಲ ಎಂದರು.

ಆದರೆ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ. ನಾವು ಉನ್ನತ ಅಧಿಕಾರಿಗಳನ್ನು ಬಂಧಿಸಿದ್ದೇವೆ, ಅವರ ತಪ್ಪುಗಳನ್ನು ಅರಿತುಕೊಳ್ಳಬೇಕು, ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿದ್ದಾಗ ಅವರು ಲಾಬಿಗಳಿಗೆ ತಲೆಬಾಗಿ ಹಗರಣಗಳನ್ನು ಮುಚ್ಚಿಹಾಕಿದರು. ಅವರಿಗೆ ಈಗ ಇತರರಿಗೆ ಉಪದೇಶ ಮಾಡುವ ನೈತಿಕ ಹಕ್ಕಿಲ್ಲ. ಕಾಂಗ್ರೆಸ್ ಹೂತು ಹಾಕಿರುವ ಪಿಎಸ್‌ಐನಂತಹ ಹಗರಣಗಳು ಇನ್ನೂ ಹೆಚ್ಚಾಗಿವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಯಲು ಮಾಡಲಾಗುವುದು ಎಂದರು.

ಪಿಎಸ್‌ಐ ಹಗರಣ ಪ್ರಕರಣ ರಾಜ್ಯದಲ್ಲಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕಾತಿಗೆ ಸಂಬಂಧಿಸಿದ ಕೆಪಿಎಸ್‌ಸಿ ಹಗರಣದಲ್ಲಿ ಒಬ್ಬ ವ್ಯಕ್ತಿಯನ್ನು ಸಹ ಕಾಂಗ್ರೆಸ್‌ ಅಮಾನತುಗೊಳಿಸಿಲ್ಲ ಎಂದು ಬೊಮ್ಮಾಯಿ ಹೇಳಿದರು.

 ಸರ್ಕಾರ ಮತ್ತು ಅಧಿಕಾರಿಗಳು ಶಾಮೀಲು

ಸರ್ಕಾರ ಮತ್ತು ಅಧಿಕಾರಿಗಳು ಶಾಮೀಲು

ಶಾಸಕ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ 545 ಅಭ್ಯರ್ಥಿಗಳ ಪಿಎಸ್‌ಐ ನೇಮಕಾತಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಈ ವಿಷಯದಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಮೇ 12ರಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರು ರಾಜ್ಯ ಸರ್ಕಾರವು ಪಿಎಸ್ಐ ಹಗರಣದ ತನಿಖೆ ನಡೆಸುತ್ತಿದೆ ಎಂದು ಘೋಷಿಸಿದರು ಮತ್ತು ಅದರಲ್ಲಿ ಭಾಗಿಯಾಗಿರುವ ಜನರನ್ನು ತನಿಖೆ ನಡೆಸಿ ಬಹಿರಂಗಪಡಿಸಲಾಗುವುದು ಎಂದು ಭರವಸೆ ನೀಡಿದ್ದರು.

 ಶೀಘ್ರದಲ್ಲೇ ಮರು ಪರೀಕ್ಷೆ

ಶೀಘ್ರದಲ್ಲೇ ಮರು ಪರೀಕ್ಷೆ

ಏಪ್ರಿಲ್ 29ರಂದು ಭ್ರಷ್ಟಾಚಾರದ ಆರೋಪದ ನಂತರ ಕರ್ನಾಟಕ ಸರ್ಕಾರವು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯ ಫಲಿತಾಂಶಗಳನ್ನು ರದ್ದುಗೊಳಿಸಲು ನಿರ್ಧರಿಸಿತು. ಹೊಸದಾಗಿ ಮರು ಪರೀಕ್ಷೆಯನ್ನು ನಡೆಸಲಾಗುವುದು ಮತ್ತು ಅದರ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸರ್ಕಾರ ಹೇಳಿದೆ.

 ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು

ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ (psi) ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಿದ ನಂತರ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆ ನೀಡಬೇಕು. ಈ ಹಗರಣಕ್ಕೆ ಜ್ಞಾನೇಂದ್ರ ಅವರೇ ಹೊಣೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದರು.

 ಅಧಿಕಾರಿಗಳಿಂದ ಆರಗ ಜ್ಞಾನೇಂದ್ರರೇ ಹೊಣೆ

ಅಧಿಕಾರಿಗಳಿಂದ ಆರಗ ಜ್ಞಾನೇಂದ್ರರೇ ಹೊಣೆ

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳ ಒಬ್ಬರ ಮೇಲೆ ಆರೋಪ ಹೊರಿಸಬಾರದು. ಅಧಿಕಾರಿಗಳಿಗಿಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಇಲ್ಲಿ ಹೊಣೆಗಾರರು. ಗೃಹ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅಕ್ರಮದ ಅಸ್ಥಿಪಂಜರಗಳು ಕಪಾಟಿನಿಂದ ಒಂದೊಂದಾಗಿ ಹೊರಬರುತ್ತಿವೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣ ನಡೆದಿಲ್ಲ ಎಂದು ಹೇಳಿದ ಸಿಎಂ ಮತ್ತು ಗೃಹ ಸಚಿವರು ಈಗ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+