ಮುನಿರಾಬಾದ್ ರೈಲು ನಿಲ್ದಾಣದಲ್ಲಿ ದಂಪತಿಗಳ ಶವ ಪತ್ತೆ
ಕೊಪ್ಪಳ, ಆಗಸ್ಟ್ 22 : ಮುನಿರಾಬಾದ್ ರೈಲು ನಿಲ್ದಾಣದಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ತಂದೆ-ತಾಯಿಯನ್ನು ಕಳೆದುಕೊಂಡು ಮಗು ಅನಾಥವಾಗಿದೆ. ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಧಾರವಾಡದ ಅಣ್ಣಿಗೇರಿಯ ದಂಪತಿಗಳ ಶವ ಮುನಿರಾಬಾದ್ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ದಂಪತಿಗಳು ಧಾರವಾಡದಿಂದ ಮುನಿರಾಬಾದ್ಗೆ ಬಂದ ಟಿಕೆಟ್ ಪೊಲೀಸರಿಗೆ ಲಭ್ಯವಾಗಿದೆ.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]

ದಂಪತಿಗಳಿಬ್ಬರು ಸಾವನ್ನಪ್ಪಿರುವುದರಿಂದ ಅವರ ಜೊತೆ ಬಂದಿದ್ದ ದೇವರಾಜ ಎಂಬ ಮಗು ಅನಾಥವಾಗಿದೆ. ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ












Click it and Unblock the Notifications