ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್
ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.
ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ.
ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, ಟಿ.ಎಂ.ಸಿ ಯತೀಶ್ ಕುಮಾರ ಹಾಗೂ ಗೋವಿಂದರಾಜು ಮತ್ತಿತರರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಮಾಡಿದೆ.

ಬಿ.ಜೆ. ಪುಟ್ಟಸ್ವಾಮಿ ಅವರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಧಿರೋಹಣ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಜೂ.13ಕ್ಕೆ ವಿಚಾರಣೆ ಮುಂದೂಡಿದೆ.
ಅಲ್ಲದೆ, ಬಿ.ಜೆ.ಪುಟ್ಟಸ್ವಾಮಿ, ಅಖಿಲ ಕರ್ನಾಟಕ ಗಾಣಿಗ ಸಂಘದ ಆಡಳಿತಾಧಿಕಾರಿ ಎಂ.ಪಿ ಮಂಜುನಾಥ್ ಸೇರಿದಂತೆ ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ನ 10 ಮಂದಿ ಟ್ರಸ್ಟಿಗಳು ಮತ್ತು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ನ್ಯಾಯಾಲಯ ತುರ್ತು ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರ ಪರ ವಕೀಲರು, ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ರಚನೆಯೇ ಕಾನೂನು ಬಾಹಿರವಾಗಿದೆ. ಹಾಗಾಗಿ, ಟ್ರಸ್ಟ್ ಚಟುವಟಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು. ಇದೇ 15ರಂದು ಬಿ.ಜೆ.ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.
ಇದೇ ಮೇ 4ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ, ಐದು ದಶಕಗಳ ಸುಧೀರ್ಘ ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಡೆಸಿದ್ದೇನೆ ಎಂದು ಹೇಳಿಕ ಲೌಖಿಕ ಜೀವನ ತ್ಯಜಿಸಿ ಮೇ 6ಕ್ಕೆ ಸನ್ಯಾಸ ದೀಕ್ಷೆ ಸ್ವೀಕರಿಸುವುದಾಗಿ ಹೇಳಿದ್ದರು.
ಮೇ 15 ರಂದು ಮಾದನಾಯ್ಕನಹಳ್ಳಿಯಲ್ಲಿ ಇರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಕೈಲಾಸ ಮಠದ ಜಯತೀರ್ಥ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆಂದು ತಿಳಿಸಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications