ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ 2ನೇ ಅಲೆ ಎನ್ನಲಾಗದು: ರವಿಕುಮಾರ್

|
Google Oneindia Kannada News

ಬೆಂಗಳೂರು, ಮಾರ್ಚ್ 31: ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ ಆದರೆ ಇದನ್ನು ಕೊರೊನಾದ ಎರಡನೇ ಅಲೆ ಎಂದು ಬಿಂಬಿಸಲು ಸಾಧ್ಯವಿಲ್ಲ ಎಂದು ರಾಜ್ಯಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ.

ಕೋವಿಡ್-19 ಲಕ್ಷಣಗಳಿರುವವರು ಸ್ವಯಂ ವೈದ್ಯರಾಗಿ ಔಷಧಗಳನ್ನು ತೆಗೆದುಕೊಳ್ಳಬಾರದೆಂದು ರವಿಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದು, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ದೇಶ ಅತಿ ಅಪಾಯದಲ್ಲಿದೆ; ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಎಚ್ಚರಿಕೆದೇಶ ಅತಿ ಅಪಾಯದಲ್ಲಿದೆ; ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಎಚ್ಚರಿಕೆ

ಪರಿಸ್ಥಿತಿ ನೀವಂದುಕೊಂಡಷ್ಟು ಗಂಭೀರವಾಗಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಿದೆ. ಆರ್ ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಸರ್ಕಾರ ಸಿದ್ಧವಿದೆ. ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಇದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕೆ ವೈದ್ಯರು ಸಿದ್ಧರಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

COVID-19 Cases Rising But Cant Call It A Second Wave, Says Karnataka Chief Secretary

ಹಾಗೆಯೇ ರಾಜ್ಯದಲ್ಲಿ ಉಪ ಚುನಾವಣೆಗಳು ಹತ್ತಿರವಾಗುತ್ತಿದ್ದು, ಚುನಾವಣಾ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದಿದ್ದಾರೆ.

ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ, ಬೆಳಗಾಗಿ ಲೋಕಸಭಾ ಕ್ಷೇತ್ರಗಳಲ್ಲಿ ಏ.17 ರಂದು ಉಪಚುನಾವಣೆ ನಡೆಯುತ್ತಿದ್ದು, 15 ದಿನಗಳ ಕಾಲ ಸಭೆಗಳನ್ನು ನಡೆಸುವುದಕ್ಕೆ ವಿಧಿಸಲಾಗಿರುವ ನಿರ್ಬಂಧ ಈ ಪ್ರದೇಶಗಳಲ್ಲಿ ಅನ್ವಯಿಸುವುದಿಲ್ಲ ಎಂದು ರವಿಕುಮಾರ್ ಹೇಳಿದ್ದಾರೆ.

ಉಪಚುನಾವಣೆ ನಡೆಯುತ್ತಿರುವ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳಿಗೆ ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಅವಕಾಶವಿದೆ ಎಂದು ಹೇಳಿದ್ದಾರೆ.

Recommended Video

ಕೊರೊನಾ ಸಂಕಷ್ಟಕ್ಕೆ ಬೇಸತ್ತು ಕ್ಯಾಬ್‌ ಚಾಲಕ ಆತ್ಮಹತ್ಯೆ ಯತ್ನ! ಚಾಲಕನ ಸ್ಥಿತಿ ಗಂಭೀರ | Oneindia Kannada

English summary
While admitting that COVID-19 cases have been increasing for a week, he said it could not be called a second wave.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X