ರಾಜ್ಯದ 7 ಜಿಲ್ಲೆಗಳಲ್ಲಿ ಐಸಿಯು ಹಾಸಿಗೆಗಳೆಲ್ಲಾ ಫುಲ್, ಜನರ ಪರದಾಟ
ಬೆಂಗಳೂರು, ಮೇ 07: ರಾಜ್ಯದ ಏಳು ಜಿಲ್ಲೆಗಳಲ್ಲಿ ಐಸಿಯು ಹಾಸಿಗೆಗಳೆಲ್ಲಾ ಭರ್ತಿಯಾಗಿದೆ ಎಂದು ರಾಜ್ಯದ ಕ್ರಿಟಿಕಲ್ ಕೇರ್ ಸಪೋರ್ಟ್ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದ ಹಲವೆಡೆ ಐಸಿಯು ಹಾಸಿಗೆ, ಆಮ್ಲಜನಕತದ ಕೊರತೆ ಎದುರಾಗಿದೆ.
ಗುರುವಾರ ಸಿಸಿಎಸ್ಯು ನೀಡಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದರೆ ತಪ್ಪಾಗಲಾರದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಮುಂದಿನ ವಾರದಲ್ಲಿ ಐಸಿಯು ಹಾಸಿಗೆ , ವೆಂಟಿಲೇಟರ್ಗಳ ಕೊರತೆ ಮತ್ತಷ್ಟು ತಲೆದೋರುವ ಸಾಧ್ಯತೆಗಳಿವೆ.

ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿದಿನ ಬೆಳಗ್ಗೆ ಆಮ್ಲಜನಕ ಸೌಲಭ್ಯದ ಹಾಸಿಗೆ, ಕೊರೊನಾ ಔಷಧಗಳು, ಐಸಿಯು ಹಾಸಿಗೆಗಳ ಸಂಖ್ಯೆ ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ಗಳ ಮಾಹಿತಿಯನ್ನು ತೀವ್ರ ನಿಗಾ ತಜ್ಞರನ್ನು ಒಳಗೊಂಡಿರುವ ಸಿಸಿಎಸ್ಯು ಮಾಹಿತಿಯನ್ನು ಕಲೆ ಹಾಕುತ್ತದೆ.
ಐಸಿಯ ಹಾಸಿಗೆಗಳ ಕೊರತೆ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ, ಇದು ಆತಂಕವನ್ನುಂಟು ಮಾಡಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕಾರವಾರ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಲಭ್ಯತೆ ಉತ್ತಮವಾಗಿದೆ.
ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ, ಬಳ್ಳಾರಿ, ಮಂಡ್ಯ, ತುಮಕೂರು, ಚಾಮರಾಜನಗರ, ಉಡುಪಿಯ ಕುಂದಾಪುರ ಜಿಲ್ಲಾಸ್ಪತ್ರೆಗಳಲ್ಲಿ ಆಮ್ಲಜನಕ ಸೌಲಭ್ಯದ ಹಾಸಿಗೆಗಳ ಕೊರತೆ ಹೆಚ್ಚಾಗಿದೆ. ಈ ಆಸ್ಪತ್ರೆಗಳಿಗೆ 20 ರಿಂದ 100 ವೆಂಟಿಲೇಟರ್ಗಳ ಅಗತ್ಯವಿದೆ ಎಂದು ಹೇಳಲಾಗಿದೆ.
ಬೆಂಗಳೂರು, ಮೈಸೂರಿನ ಕೆಆರ್ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳು ಸಂಪೂರ್ಣ ಭರ್ತಿಯಾಗಿವೆ, ಉಳಿದಂತೆ ಧಾರವಾಡ, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳು ಹಾಸಿಗೆಗಳಲ್ಲಿ ಲಭ್ಯತೆ ಸಮರ್ಪಕವಾಗಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಹಾಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಕೇವಲ ಎರಡು ಐಸಿಯು ಹಾಸಿಗೆಗಳು ಲಭ್ಯವಿದೆ ಎಂದು ಹೇಳಲಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications