ಕೊರೊನಾ ಉಪಕರಣ ಅಕ್ರಮ ಆರೋಪ: ಯಡಿಯೂರಪ್ಪರನ್ನು ಭಾರೀ ಇಕ್ಕಟ್ಟಿಗೆ ಸಿಲುಕಿಸಿದ ಪೆನ್ ಡ್ರೈವ್
ಬೆಂಗಳೂರು, ಜುಲೈ 9: ಕೋವಿಡ್ 19 ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನುವ ವಿರೋಧ ಪಕ್ಷಗಳ ಆರೋಪಕ್ಕೆ ಮತ್ತಷ್ಟು ಇಂಬು ನೀಡುವಂತಹ ವಿದ್ಯಮಾನವೊಂದು ನಡೆದಿದೆ.
Recommended Video
ಖುದ್ದು, ಬಿಜೆಪಿಯ ಹಿರಿಯ ಮುಖಂಡ, ಬೀಳಗಿ ಶಾಸಕ ಮುರುಗೇಶ್ ನಿರಾಣಿ ನೀಡಿರುವ ಹೇಳೀಕೆ, ರಾಜ್ಯದ ಬಿಜೆಪಿ ಸರಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ಈ ವಿಚಾರ, ಸರಕಾರಕ್ಕೆ ಮುಜುಗರ ತಂದೊಡ್ಡಲಿದೆ ಎನ್ನುವುದನ್ನು ಅರಿತ ನಿರಾಣಿ, ಇದೆಲ್ಲಾ ನಿರಾಧಾರ ಎಂದಿದ್ದಾರೆ.
"ಸರಕಾರದಲ್ಲಿ ಯಾವುದೇ ವಿಪಕ್ಷಗಳ ಹೇಳುತ್ತಿರುವಂತಹ ಹಗರಣ ನಡೆದಿಲ್ಲ. ಸಿದ್ದರಾಮಯ್ಯ ಸುಮ್ಮನೆ ಹೇಳಿಕೆ ಕೊಡುತ್ತಿದ್ದಾರೆಯೇ ಹೊರತು ಯಾವುದೇ ದಾಖಲೆ ಒದಗಿಸುತ್ತಿಲ್ಲ" ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ವಿಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮುರುಗೇಶ್ ನಿರಾಣಿ ಹೇಳಿಕೆಯನ್ನು ಮುಂದಿಟ್ಟುಕೊಂಡು, ಮತ್ತೆ ಯಡಿಯೂರಪ್ಪ ಸರಕಾರದ ವಿರುದ್ದ ತಿರುಗಿಬಿದ್ದಿದ್ದಾರೆ. ನಿರಾಣಿ ಹೇಳಿದ ಪೈನ್ ಡ್ರೈವ್, ಮುಂದೆ ಓದಿ..

ಮುರುಗೇಶ್ ನಿರಾಣಿ
ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಮುರುಗೇಶ್ ನಿರಾಣಿ, "ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಅದಕ್ಕೆ ಸಂಬಂಧ ಪಟ್ಟ ದಾಖಲೆಗಳು ನನ್ನಲ್ಲಿವೆ"ಎಂದು ಹೇಳಿದ್ದರು. ನಿರಾಣಿ, ಸಭೆಯಲ್ಲಿ ನೀಡಿದ ಹೇಳಿಕೆ ಅದ್ಯಾಗೋ ಸೋರಿಕೆಯಾಗಿದೆ.

ಪೆನ್ ಡ್ರೈವ್ ನಿಮಗೆ (ಎಚ್.ಕೆ.ಪಾಟೀಲ್) ಕಳುಹಿಸಿಕೊಡುತ್ತೇನೆ
"ಬಿಜಾಪುರದಿಂದ ಬರುತ್ತಿದ್ದಾಗ ಅಧಿಕಾರಿಯೊಬ್ಬರು ನನ್ನ ಜೊತೆಗಿದ್ದರು. ಅವರು ತಮ್ಮ ಬಳಿ ಪೆನ್ ಡ್ರೈವ್ ಒಂದನ್ನು ಇಟ್ಟುಕೊಂಡಿದ್ದರು. ಅದರಲ್ಲಿ ಮಹತ್ವದ ದಾಖಲೆಗಳಿದ್ದವು. ನನಗೆ ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಲು ಆಗದೇ ಇರುವುದರಿಂದ, ಪೆನ್ ಡ್ರೈವ್ ನಿಮಗೆ (ಎಚ್.ಕೆ.ಪಾಟೀಲ್) ಕಳುಹಿಸಿಕೊಡುತ್ತೇನೆ"ಎಂದು ಮುರುಗೇಶ್ ನಿರಾಣಿ ಹೇಳಿದ್ದರು.

ಪೆನ್ ಡ್ರೈವ್ ಪಡೆಯಲು ವಿರೋಧ ಪಕ್ಷಗಳ ಪ್ರಯತ್ನ
ಇದರಲ್ಲಿ ಯಾವಯಾವ ವಸ್ತುಗಳ ಮೂಲ ಬೆಲೆ ಎಷ್ಟು, ಬಿಲ್ ಮಾಡಿರುವ ಬೆಲೆ ಎಷ್ಟು ಎನ್ನುವ ಅಂಶವೂ ಪೆನ್ ಡ್ರೈವ್ ನಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಪೆನ್ ಡ್ರೈವ್ ವಿಚಾರ ಗೊತ್ತಾಗುತ್ತಿದ್ದಂತೆಯೇ ಅದನ್ನು ಪಡೆಯಲು ವಿರೋಧ ಪಕ್ಷಗಳು ಸಾಕಷ್ಟು ಪ್ರಯತ್ನ ನಡೆಸಿದರೂ ಸಫಲರಾಗಲಿಲ್ಲ.

ಬಿಎಸ್ವೈಗೆ ಭಾರೀ ಇಕ್ಕಟ್ಟಿಗೆ ಸಿಲುಕಿಸಿದ ಪೆನ್ ಡ್ರೈವ್
ಲೆಕ್ಕಪತ್ರ ಸಮಿತಿಯಲ್ಲಿ ತಾನು ನೀಡಿದ ಹೇಳಿಕೆಯಿಂದ ಸರಕಾರ ಇಕ್ಕಟ್ಟಿಗೆ ಸಿಲುಕುತ್ತದೆ ಎಂದರಿತ ಮುರುಗೇಶ್ ನಿರಾಣಿ, ಆ ರೀತಿ ನಾನು ಹೇಳಿಲ್ಲ ಎಂದಿದ್ದಾರೆ. ಆದರೆ, ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್, ಈಶ್ವರ ಖಂಡ್ರೆ ಮುಂತಾದವರು, ನಿರಾಣಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಸರಕಾರಕ್ಕೆ ಭರ್ಜರಿ ಬಿಸಿಮುಟ್ಟಿಸುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications