ಕೊರೊನಾ ಭೀತಿ ಬೇಡ; ನಿರಾತಂಕವಾಗಿ ಐಸ್ ಕ್ರೀಂ ಸವಿಯಿರಿ
ಬೆಂಗಳೂರು, ಮಾರ್ಚ್ 19 : ಐಸ್ ಕ್ರೀಂ ತಿಂದರೆ ಕೊರೊನಾ ಹರಡುತ್ತದೆ ಎಂದು ಹರಿದಾಡುತ್ತಿದ್ದ ಸಂದೇಶವನ್ನು ವೈದ್ಯರು ತಳ್ಳಿ ಹಾಕಿದ್ದಾರೆ. ಬೇಸಿಗೆಯ ಬಿಸಿಯಲ್ಲಿ ಐಸ್ ಕ್ರೀಂ ತಿನ್ನುವವರು, ವ್ಯಾಪಾರಿಗಳು ಇದರಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ಈ ತಿಂಗಳ ಮೊದಲ ವಾರದಲ್ಲಿ ಮೇಲಷ್ಯಾದಲ್ಲಿ ವಾಟ್ಸಪ್ ಮೂಲಕ ಹರಿದಾಡುತ್ತಿದ್ದ ಐಸ್ ಕ್ರೀಂ ಸಂದೇಶ ಬೆಂಗಳೂರಿಗೆ ಬಂದು ತಲುಪಿತ್ತು. ಐಸ್ ಕ್ರೀಂ ಪ್ರಿಯರ ಆತಂಕಕ್ಕೆ ಇದು ಕಾರಣವಾಗಿತ್ತು. ಈಗ ಯೂನಿಸೆಫ್ ವೈರಲ್ ಆಗಿರುವ ಸಂದೇಶ ಸುಳ್ಳು ಎಂದು ಹೇಳಿದೆ.
ಐಸ್ ಕ್ರೀಂ ತಿಂದರೆ ಕೊರೊನಾ ಹರಡಲಿದೆ ಎಂಬ ಸಂದೇಶ ಬೆಂಗಳೂರಿಗೂ ಬಂದಿತ್ತು. ಪಿಐಬಿ ಕೊರೊನಾ ಹರಡದಂತೆ ತಡೆಯಲು ಐಸ್ ಕ್ರೀಂನಿಂದ ದೂರವಿರಿ ಎಂಬ ಸಂದೇಶ ಸುಳ್ಳು ಎಂದು ಹೇಳಿತ್ತು. ಈಗ ಯೂನಿಸೆಫ್ ಸಹ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ.

ಭಾರತದಲ್ಲಿನ ಐಸ್ ಕ್ರೀಂ ತಯಾರಕರ ಸಂಘ ತನ್ನ ವೆಬ್ ಸೈಟ್ನಲ್ಲಿ ಯೂನಿಸೆಫ್ ಹೇಳಿಕೆಯನ್ನು ಅಪ್ ಲೋಡ್ ಮಾಡಿದ್ದು, ಜನರ ಆತಂಕವನ್ನು ದೂರಮಾಡಿದೆ. ಈ ಸುಳ್ಳು ವಾಟ್ಸಪ್ ಸುದ್ದಿಯ ಕಾರಣದಿಂದಾಗಿ ಸ್ಥಳೀಯವಾಗಿ ಐಸ್ ಕ್ರೀಂ ಮಾರಾಟದಲ್ಲಿ ಕುಸಿತ ಉಂಟಾಗಿತ್ತು.
8 ಅಪ್ಸರಾ ಐಸ್ ಕ್ರೀಂ ಔಟ್ ಲೆಟ್ ಹೊಂದಿರುವ ಪ್ರದೀಪ್ ಬಾಲಿ ಅವರು, "ಕಳೆದ ಐದು ದಿನಗಳಿಂದ ಐಸ್ ಕ್ರೀಂ ವ್ಯಾಪಾರದಲ್ಲಿ ಶೇ 20ರಷ್ಟು ಕುಸಿತವಾಗಿದೆ. ಯೂನಿಸೆಫ್ ನೀಡಿದ ಹೇಳಿಕೆ ಪ್ರತಿಯನ್ನು ಔಟ್ ಲೆಟ್ಗಳಲ್ಲಿ ಹಾಕಿದ್ದೇವೆ" ಎಂದು ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ಬಂದ ಸಂದೇಶವನ್ನು ಇತರರಿಗೆ ಕಳಿಸುವ ಮುನ್ನ ಅವುಗಳ ಸತ್ಯಾಸತ್ಯತೆ ಬಗ್ಗೆ ಒಮ್ಮೆ ಪರಿಶೀಲಿಸಿಕೊಳ್ಳಿ. ಕೊರೊನಾ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹಬ್ಬುತ್ತಿವೆ ವಾಟ್ಸಪ್ ಮೂಲಕ ಎಲ್ಲರನ್ನೂ ತಲುಪುತ್ತಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications