ಕೊರೊನಾ ಉಲ್ಬಣ: ಐತಿಹಾಸಿಕ ಚಿತ್ರದುರ್ಗ ಕೋಟೆ, ಬೇಲೂರು-ಹಳೇಬೀಡು ದೇಗುಲಗಳು ಬಂದ್
ಹಾಸನ, ಏಪ್ರಿಲ್ 16: ಭಾರತದಾದ್ಯಂತ ಕೊರೊನಾ ಸೋಂಕು 2ನೇ ಅಲೆ ಹೆಚ್ಚಳವಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ.
ಈ ಹಿಂದೆ ಕೊರೊನಾ ಲಾಕ್ಡೌನ್ ಮಾಡಿದ್ದಾಗ ಕೆಲವು ತಿಂಗಳುಗಳ ಕಾಲ ಪ್ರವಾಸಿ ತಾಣಗಳು ಹಾಗೂ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು.
ಇದೀಗ ಅದೇ ರೀತಿ ದೇಶದ ಎಲ್ಲ ಪ್ರಸಿದ್ಧ ದೇವಸ್ಥಾನಗಳು, ಐತಿಹಾಸಿಕ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ರದ್ದುಗೊಳಿಸಿ ಭಾರತೀಯ ಪುರಾತತ್ವ ಸ್ಮಾರಕ ನಿರ್ದೇಶಕ ಎನ್.ಕೆ ಪಾಠಕ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯ ಐತಿಹಾಸಿಕ ದೇವಸ್ಥಾನಗಳಾದ ಬೇಲೂರು, ಹಳೇಬೀಡು ಹಾಗೂ ಶ್ರವಣಬೆಳಗೊಳಕ್ಕೆ ಮೇ.15ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಗುರುವಾರವಷ್ಟೇ ಬೇಲೂರಿನ ಚನ್ನಕೇಶವ ದೇವಸ್ಥಾನದಲ್ಲಿ ಗರುಡ ಪ್ರತಿಷ್ಠೆ ಮಾಡಿ ಸಾಂಕೇತಿಕ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. ಇಂದಿನಿಂದ ಒಂದು ತಿಂಗಳ ಕಾಲ ದೇವಸ್ಥಾನ ಬಂದ್ ಆಗಲಿದೆ.

ಚಿತ್ರದುರ್ಗ ಕೋಟೆಗೆ ನಿಷೇಧ
ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಭಾರತೀಯ ಪುರಾತತ್ವ ಇಲಾಖೆ ಸೂಚನೆಯಂತೆ ಐತಿಹಾಸಿಕ ಚಿತ್ರದುರ್ಗ ಕೋಟೆಯನ್ನು ಬಂದ್ ಮಾಡಲಾಗಿದೆ. ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಪ್ರವಾಸಿಗರಿಗೆ ಚಿತ್ರದುರ್ಗದ ಕೋಟೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ಒಂದು ತಿಂಗಳ ಕಾಲ ಚಿತ್ರದುರ್ಗದ ಕಲ್ಲಿನ ಕೋಟೆ ಹಾಗೂ ಪಾಳೇಗಾರರ ಸ್ಮಾರಕಗಳ ಸಾರ್ವಜನಿಕ ವೀಕ್ಷಣೆಗೆ ಮೇ.15ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಪ್ರತಿನಿತ್ಯ ಇಲ್ಲಿಗೆ 2ರಿಂದ 3 ಸಾವಿರ ಜನರು ಆಗಮಿಸುತ್ತಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications