ಬೆಂಗಳೂರಿನ IISc ಅಭಿವೃದ್ಧಿಪಡಿಸುತ್ತಿರುವ ಕೊರೊನಾ ಲಸಿಕೆಯಲ್ಲಿ ಹೊಸ ಭರವಸೆ
ಬೆಂಗಳೂರು, ಮೇ 14: ಕೊರೊನಾವೈರಸ್ ಲಸಿಕೆ ಕೊರತೆ ನಡುವೆ ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಕೇಂದ್ರದಲ್ಲಿ ಉತ್ಪಾದಿಸಲಾಗುತ್ತಿರುವ ಕೊವಿಡ್-19 ಲಸಿಕೆಯು ಹೊಸ ಭರವಸೆಯನ್ನು ಮೂಡಿಸಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
Recommended Video
ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ ಸಿ) ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆ ಚರ್ಚಿಸಿದ ಬಳಿಕ ಸಚಿವರು ಮಾತನಾಡಿದರು. ರಾಜ್ಯದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಂಸ್ಥೆಯ ಬೆಂಬಲವನ್ನು ಕೋರಿರುವುದಾಗಿ ಹೇಳಿದರು.
"ಐಐಎಸ್ಸಿ ಅಭಿವೃದ್ಧಿಪಡಿಸಿರುವ ಕೊರೊನಾವೈರಸ್ ಲಸಿಕೆಯು ಪ್ರಸ್ತುತ ಬಳಕೆಯಲ್ಲಿರುವ ಲಸಿಕೆಗಳಿಗಿಂತ ಪರಿಣಾಮಕಾರಿಯಂತೆ ಕಾಣುತ್ತಿದೆ. ಅಲ್ಲದೇ ಸಾಮಾನ್ಯವಾಗಿ 30 ಡಿಗ್ರಿ ಸೆಲ್ಸಿಯಸ್ ತಾಪಮಾನದವರೆಗೆ ಸಂಗ್ರಹಿಸಬಹುದು" ಎಂದು ತಿಳಿಸಿದ್ದಾರೆ. ಇದರ ಜೊತೆ ರಾಜ್ಯ ಸರ್ಕಾರವು ತಾಂತ್ರಿಕ ಪರಿಹಾರಗಳನ್ನು ವಿನ್ಯಾಸಗೊಳಿಸುವಲ್ಲಿ ಪ್ರೀಮಿಯರ್ ಸೈನ್ಸ್ ಇನ್ಸ್ ಟಿಟ್ಯೂಟ್ ಸಹಾಯಕವಾಗಲಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಐಐಎಸ್ ಸಿ ಕೊವಿಡ್-19 ಲಸಿಕೆ ಬಗ್ಗೆ ವಿಶ್ವಾಸ:
ದೇಶದಲ್ಲಿ ವಿತರಣೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಗಳಿಗೆ ಹೋಲಿಸಿದ್ದಲ್ಲಿ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯು ಪರಿಣಾಮಕಾರಿ ಹಾಗೂ ತಟಸ್ಥ ಪ್ರಭಾವವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಐಐಎಸ್ ಸಿ ಅಭಿವೃದ್ಧಿಪಡಿಸುತ್ತಿರುವ ಕೊವಿಡ್-19 ಲಸಿಕೆ ಮೇಲೆ ಹೆಚ್ಚಿನ ವಿಶ್ವಾಸವಿದೆ ಎಂದು ಸಂಸ್ಥೆಯ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ತಿಳಿಸಿದ್ದಾರೆ.
ವೈದ್ಯಕೀಯ ಪ್ರಯೋಗವನ್ನು ಆರಂಭಿಸದ ಲಸಿಕೆಯ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಈ ಲಸಿಕೆಯು ಮಹತ್ವದ ಹಾಗೂ ಪರಿಣಾಮಕಾರಿ ಅಸ್ತ್ರವಾಗಿ ಬಳಕೆಯಾಗಲಿದೆ ಎಂದು ಸಂಸ್ಥೆಯು ತಿಳಿಸಿದೆ.
ಕೇಂದ್ರ ರಕ್ಷಣಾ ಸಚಿವಾಲಯದ ಅಡಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಆರ್ ಡಿಒ (ಇಸಿಎಸ್) ನಿರ್ದೇಶರ ಕಾರ್ಯಾಲಯಕ್ಕೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಭೇಟಿ ನೀಡಿದರು.
— oneindiakannada (@OneindiaKannada) May 14, 2021
#Bangalore #DRDO @mla_sudhakar pic.twitter.com/c5sZbv6xRU
ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೊರೊನಾವೈರಸ್ ಲಸಿಕೆಗೆ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಕೊ)ಯಿಂದ ಅನುಮೋದನೆ ನೀಡಲು ಸಚಿವರು ಸಹಕಾರ ನೀಡಬೇಕು ಎಂದು ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಮನವಿ ಮಾಡಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications