ಕೋವಿಡ್ ಉಚಿತ ಚಿಕಿತ್ಸೆ ಅಕ್ರಮ: 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
ಬೆಂಗಳೂರು, ಆ. 21: ಕೋವಿಡ್ ರೋಗಿಳಿಂದ ಹಣ ವಸೂಲಿ ಮಾಡಿದ್ದಲ್ಲದೇ ಸರ್ಕಾರದಿಂದಲೂ ಹಣ ಪಡೆದಿದ್ದ ರಾಜ್ಯದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಮಾತ್ರವಲ್ಲ ಹೆಚ್ಚುವರಿ ಹಣ ವಾಪಸು ಪಡೆದು 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಮರಳಿಸಲಾಗಿದೆ. ಅಕ್ರಮ ಎಸಗಿದ ಆಸ್ಪತ್ರೆಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೋವಿಡ್ ರೋಗದಿಂದ ಬಳಲುತ್ತಿದ್ದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಚಿಕಿತ್ಸೆ ನೀಡಲು ಸರ್ಕಾರ ಅವಕಾಶ ಕಲ್ಪಿಸಿತ್ತು. ಆದ್ರೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ಪಡೆಯುವ ಜತೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹಣವನ್ನು ಪಡೆದಿವೆ. ರಾಜ್ಯದ 577 ಆಸ್ಪತ್ರೆಗಳಿಗೆ ಈ ಸಂಬಂಧ ನೋಟಿಸ್ ನೀಡಿದ್ದು, 403 ಕುಟುಂಬಗಳಿಗೆ 1.58 ಕೋಟಿ ರೂ ಹಣವನ್ನು ಹಿಂತಿರುಗಿಸಲಾಗಿದೆ.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್ ಆಧಾರದಲ್ಲಿ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್ನಿಂದಲೂ ಹಣ ಪಡೆದುಕೊಂಡಿವೆ.

ಈ ಕುರಿತು ದೂರುಗಳು ಬಂದಾಗ, ತಕ್ಷಣ ಕ್ರಮ ವಹಿಸಿದ ಸಚಿವ ಡಾ.ಕೆ.ಸುಧಾಕರ್, ಪರಿಶೀಲನೆ ನಡೆಸಿ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.

ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ:
ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್ನಿಂದ 2021 ರ ಮಾರ್ಚ್ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications