ಮಹಾರಾಷ್ಟ್ರದಲ್ಲಿ ಕೋವಿಡ್ ಉಲ್ಬಣ: ಕರ್ನಾಟಕದ ಜನರಿಗೆ ಆರೋಗ್ಯ ಇಲಾಖೆ ಸಲಹೆಗಳೇನು?
ಬೆಂಗಳೂರು, ಅಕ್ಟೋಬರ್ 25: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತು ಓಮಿಕ್ರಾನ್ ರೋಪಾಂತರ ತಳಿಯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮಧ್ಯೆ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಿಸುವವರು ಆರೋಗ್ಯ ಕಡೆಗೆ ಹೆಚ್ಚು ಗಮನ ಹರಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಮಂಗಳವಾರ ಸಲಹಾ ಪತ್ರ ಹೊರಡಿಸಿರುವ ಇಲಾಖೆಯು ಕೆಲವು ಸಲಹೆಗಳನ್ನು ರಾಜ್ಯದ ಜನರಿಗೆ ನೀಡಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ BA 2.75 ಮತ್ತು BJ.1 ಹಾಗೂ ಓಮಿಕ್ರಾನ್ ರೋಪಾಂತರ ತಳಿಯು ಪತ್ತೆಯಾಗಿದೆ. ಕರ್ನಾಟಕ, ಬೆಂಗಳೂರಿನಲ್ಲಿ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದೆ.
ಹೀಗಾಗಿ ದೀಪಾವಳಿ ಮತ್ತು ಮುಂಬರಲಿರುವ 67ನೇ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಜನರು ಗುಂಪುಗೂಡುತ್ತಾರೆ. ಇದರಿಂದ ಕೊರೊನಾ ಹೆಚ್ಚಾಗುವ ಸಂಭವವಿದೆ. ಯಾರಿಗಾದರೂ ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಕಂಡು ಬಂದಲ್ಲೂ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಿರಿ. ಕೊರೋನಾ ತಪಾಸಣೆ ಸಹ ಮಾಡಿಕೊಂಡು ವರದಿ ಬರುವವರೆಗೆ ಪ್ರತ್ಯೇಕವಾಗಿರಿ ಎಂದು ತಿಳಿಸಿದೆ.

ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರೆ ವೈದ್ಯರ ಆರೈಕೆ ಪಡೆದರೆ ಒಳಿತು. ಎಸಿ ಕೊಠಡಿಯಲ್ಲಿದ್ದರೆ, ಅಗತ್ಯ ಗಾಳಿ ಬೆಳಕಿಲ್ಲದ ಸ್ಥಳಗಳಲ್ಲಿ ಮಾಸ್ಕ್ ಧರಿಸಿ. ಹಬ್ಬಗಳ ಆಚರಣೆಯನ್ನು ಹೊರಾಂಗಣದಲ್ಲಿ ಆಚರಿಸುವುದು ಮತ್ತು ಗಂಪುಗೂಡುವುದರಿಂದ ದೂರವಿರಲು ಪ್ರಯತ್ನಿಸಿ. ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಬಾಕಿ ಇರುವವರು, ಹಿರಿಯ ನಾಗರಿಕರು ಕೂಡಲೇ ಲಸಿಕೆ ಪಡೆಯಿರಿ. ಇತರ ಕಾಯಿಲೆಗಳಿಂದ ಬಳಲುವವರು ವೈದ್ಯರ ಸಲಹೆ ಮೇರೆಗೆ ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳಬಹುದು.
ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಹಾಗೂ ಪರಿಸರಕ್ಕೆ ಪೂರಕವಾದ ಹಸಿರು ಪಟಾಕಿಗಳನ್ನೆ ಹೊಡೆಯಿರಿ. ಅಲ್ಲದೇ ಪದೇ ಪದೆ ಕೈ ತೊಳೆಯುವುದು, ಕೆಮ್ಮುವಾಗ ಕರವಸ್ತ್ರ ಅಥವಾ ಕೈ ಬಳಕೆ ಮಾಡುವುದು ಸೇರಿದಂತೆ ಅಗತ್ಯ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ. ಈ ಮೂಲಕ ಆರೋಗ್ಯದಿಂದ ಇರುವಂತೆ ಕರ್ನಾಟಕ ಜನರಿಗೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications