ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಲಾಕ್ಡೌನ್ ಸಡಿಲಿಕೆ ಸೂಚನೆ ಬೆನ್ನಲ್ಲೇ ಜೂ.7ರಂದು ಮತ್ತೊಂದು ಸಭೆ
ಬೆಂಗಳೂರು, ಜೂನ್ 05: ಕೊರೊನಾ ಸೋಂಕಿನ ಕಾರಣ ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಲಾಕ್ಡೌನ್ ಸಡಿಲಿಕೆಯ ಸುಳಿವನ್ನು ನೀಡಿದ್ದರು.
ಈ ಬೆನ್ನಲ್ಲೇ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ ನಿಗದಿ ಮಾಡಲಾಗಿದೆ. ಟಾಸ್ಕ್ ಫೋರ್ಸ್ ಕಾರ್ಯಪಡೆ ಮುಖ್ಯಸ್ಥ, ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಸದ್ಯದ ಸ್ಥಿತಿ ಹಾಗೂ ಅನ್ಲಾಕ್ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಬಗ್ಗೆ ಸುಳಿವು ಕೊಟ್ಟ ಸಿಎಂ
ರಾಜ್ಯದಲ್ಲಿ ಪ್ರತಿನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಹೀಗಾಗಿ ಕೊರೊನಾ ಪರಿಸ್ಥಿತಿ ಪರಿಶೀಲನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿದುಬಂದಿದೆ.
Recommended Video
ಭಾರತದ
ಬ್ಯಾಟಿಂಗ್
ಸಾಮರ್ಥ್ಯದ
ಬಗ್ಗೆ
ಮಾತನಾಡಿದ
ಪಾಕ್
ಮಾಜಿ
ಕ್ರಿಕೆಟಿಗ
|
Oneindia
Kannada
ನಂತರ ಅನ್ಲಾಕ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಭೆ ನಂತರ ಹಂತಹಂತವಾಗಿ ವ್ಯಾಪಾರ ಚಟುವಟಿಕೆಗಳಿಗೆ ಹಾಗೂ ಸಣ್ಣಪುಟ್ಟ ಕೈಗಾರಿಕೆಗಳಿಗೆ ವಿನಾಯಿತಿ ನೀಡುವ ನಿರೀಕ್ಷೆ ವ್ಯಕ್ತಗೊಂಡಿದೆ.
Comments
coronavirus health state government karnataka bengaluru ವೈರಸ್ ಕೊರೊನಾ ಲಸಿಕೆ ಡಿಸಿಎಂ ರಾಜ್ಯ ಸರ್ಕಾರ ಕರ್ನಾಟಕ ಬೆಂಗಳೂರು
English summary
Covid task force committe meeting scheduled on monday june 7 after CM Yediyurappa gave hint of unlock in state
Story first published: Saturday, June 5, 2021, 16:17 [IST]