ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಸಡಿಲಿಕೆ ಸೂಚನೆ ಬೆನ್ನಲ್ಲೇ ಜೂ.7ರಂದು ಮತ್ತೊಂದು ಸಭೆ

|
Google Oneindia Kannada News

ಬೆಂಗಳೂರು, ಜೂನ್ 05: ಕೊರೊನಾ ಸೋಂಕಿನ ಕಾರಣ ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಲಾಕ್‌ಡೌನ್‌ ಸಡಿಲಿಕೆಯ ಸುಳಿವನ್ನು ನೀಡಿದ್ದರು.

ಈ ಬೆನ್ನಲ್ಲೇ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ ನಿಗದಿ ಮಾಡಲಾಗಿದೆ. ಟಾಸ್ಕ್‌ ಫೋರ್ಸ್ ಕಾರ್ಯಪಡೆ ಮುಖ್ಯಸ್ಥ, ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಸದ್ಯದ ಸ್ಥಿತಿ ಹಾಗೂ ಅನ್‌ಲಾಕ್ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಸುಳಿವು ಕೊಟ್ಟ ಸಿಎಂರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಸುಳಿವು ಕೊಟ್ಟ ಸಿಎಂ

ರಾಜ್ಯದಲ್ಲಿ ಪ್ರತಿನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಹೀಗಾಗಿ ಕೊರೊನಾ ಪರಿಸ್ಥಿತಿ ಪರಿಶೀಲನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿದುಬಂದಿದೆ.

Covid Task Force Committee Meeting Scheduled After Hint Of Unlock In State

Recommended Video

ಭಾರತದ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಮಾತನಾಡಿದ ಪಾಕ್ ಮಾಜಿ ಕ್ರಿಕೆಟಿಗ | Oneindia Kannada

ನಂತರ ಅನ್ಲಾಕ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಭೆ ನಂತರ ಹಂತಹಂತವಾಗಿ ವ್ಯಾಪಾರ ಚಟುವಟಿಕೆಗಳಿಗೆ ಹಾಗೂ ಸಣ್ಣಪುಟ್ಟ ಕೈಗಾರಿಕೆಗಳಿಗೆ ವಿನಾಯಿತಿ ನೀಡುವ ನಿರೀಕ್ಷೆ ವ್ಯಕ್ತಗೊಂಡಿದೆ.

English summary
Covid task force committe meeting scheduled on monday june 7 after CM Yediyurappa gave hint of unlock in state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X