ಸ್ಪಷ್ಟತೆಯಿಲ್ಲದ ಪರಿಷ್ಕೃತ ದಿಢೀರ್ ಮಾರ್ಗಸೂಚಿ: ಶೇ.90 ಲಾಕ್ಡೌನ್ನತ್ತ ರಾಜ್ಯ
ರಾಜ್ಯಪಾಲರು ಕರೆದ ಸರ್ವಪಕ್ಷಗಳ ಸಭೆ, ಇದಾದ ನಂತರ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ, ಹೊಸ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿತ್ತು. ಆ ಮೂಲಕ, ರಾಜ್ಯ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಸುದ್ದಿಗೆ ತೆರೆಬಿದ್ದಿತ್ತು.
ಹೊಸ ಮಾರ್ಗಸೂಚಿಯಂತೆ ಸಾರ್ವಜನಿಕರು/ಸಂಸ್ಥೆಗಳು ಮತ್ತು ಇತರ ಉದ್ದಿಮೆಗಳು ಕಾರ್ಯ ನಿರ್ವಹಿಸಲಾರಂಭಿಸಿದ್ದವು. ಆದರೆ, ಬುಧವಾರ (ಏ 21) ಕೆಲವೊಂದು ಮಾರ್ಪಾಡುಗಳನ್ನು ಸರಕಾರ ಮಾಡಿತ್ತು.
ಆದರೆ, ಪರಿಷ್ಕೃತ ಮಾರ್ಗಸೂಚಿಗೂ ಮತ್ತು ಮೂಲ ಮಾರ್ಗಸೂಚಿಗೂ ಏನೂ ಅಂಥ ವ್ಯತ್ಯಾಸಗಳು ಇರಲಿಲ್ಲ. ಜೊತೆಗೆ, ಈ ಹೊಸ ಆದೇಶದ ಪ್ರಕಾರ ಯಾವುದು ಓಪನ್, ಯಾವುದಕ್ಕೆ ನಿರ್ಬಂಧ ಎನ್ನುವ ಸ್ಪಷ್ಟ ಮಾಹಿತಿಯೂ ಇರಲಿಲ್ಲ.
ಇನ್ನೊಂದು ವಿಚಾರವೇನಂದರೆ, ಪರಿಷ್ಕೃತ ಮಾರ್ಗಸೂಚಿಯನ್ನು ಸರಕಾರದ ಮಟ್ಟದಲ್ಲಿ ಯಾರೂ ಮಾಧ್ಯಮದವರ ಮುಂದೆ ಪ್ರಕಟಿಸಿರಲಿಲ್ಲ. ಆದರೆ, ಸರಕಾರದ ಮಾರ್ಗಸೂಚಿಯನ್ನು ಜಿಲ್ಲಾಡಳಿತ ಜಾರಿಗೆ ತರಲು ಮುಂದಾಗಿದ್ದು, ಬೆಂಗಳೂರು ಸೇರಿದಂತೆ ಶೇ. 90ರಷ್ಟು ಲಾಕ್ಡೌನ್ ಆಗುವ ಸಾಧ್ಯತೆಯಿದೆ. ಸರಕಾರದ ಉದ್ದಟತನದ ಪರಮಾವಧಿ, ಮುಂದೆ ಓದಿ..

ಡಿಸ್ಚಾರ್ಜ್ ಆಗಿರುವ ಸಿಎಂ ಯಡಿಯೂರಪ್ಪ
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಿಎಂ ಯಡಿಯೂರಪ್ಪ, ಬೆಂಗಳೂರು ವ್ಯಾಪ್ತಿಯ ಸಚಿವರು, ಸಂಸದರು ಮತ್ತು ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಈ ಸಭೆ ಸದ್ಯ ಚಾಲಿಯಲ್ಲಿದೆ. ಯಾವಯಾವ ಚಟುವಟಿಕೆಗಳಿಗೆ ಅನುಮತಿ ಇದೆ/ಇಲ್ಲ ಎನ್ನುವುದರ ಬಗ್ಗೆ ಸರಕಾರ ಸ್ಪಷ್ಟನೆಯನ್ನು ನೀಡಲಿದೆ.

ಬುಧವಾರದ ಪರಿಷ್ಕೃತ ಮಾರ್ಗಸೂಚಿ
ಆದರೆ, ಬುಧವಾರದ ಪರಿಷ್ಕೃತ ಮಾರ್ಗಸೂಚಿಯ ನಂತರ ಆಯಾ ಜಿಲ್ಲಾಡಳಿತ ಅದನ್ನು ಜಾರಿಗೆ ತರಲು ಮುಂದಾದ ರೀತಿ ಮಾತ್ರ ಒಪ್ಪಿಕೊಳ್ಳುವಂತದಲ್ಲ. ಯಾವುದೇ ಪೂರ್ವ ಮಾಹಿತಿಯಿಲ್ಲದೇ, ಅಂಗಡಿಗಳನ್ನು ಪೊಲೀಸರು ಜಬರ್ದಸ್ತಾಗಿ ಮುಚ್ಚುತ್ತಿರುವುದು ಉದ್ಯಮಿಗಳಿಗೆ, ಸಣ್ಣಪುಟ್ಟ ಅಂಗಡಿಯವರಿಗೆ ಶಾಕ್ ನೀಡಿದೆ.

ಬಲವಂತದಿಂದ ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು
ಬೆಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಅವೆನ್ಯೂ ರಸ್ತೆ, ಚಿಕ್ಕಪೇಟೆ ಭಾಗದಲ್ಲಿ ಪೊಲೀಸರು ಬಲವಂತದಿಂದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ರೀತಿ ರಾಜ್ಯದ ಇತರ ಪ್ರಮುಖ ನಗರಗಳಲ್ಲೂ ಅಂಗಡಿಗಳನ್ನು ಮುಚ್ಚಿಸುತ್ತಿರುವುದರ ಬಗ್ಗೆ ವರದಿಯಾಗಿದೆ.

ಒಂದೋ ಲಾಕ್ಡೌನ್, ಇಲ್ಲವೋ ನಾರ್ಮಲ್
ಒಂದೋ ಲಾಕ್ಡೌನ್, ಇಲ್ಲವೋ ನಾರ್ಮಲ್. ಎರಡರಲ್ಲಿ ಯಾವುದನ್ನೂ ಸ್ಪಷ್ಟವಾಗಿ ತಿಳಿಸದ ಸರಕಾರ ವಾಣಿಜ್ಯ ಚಟುವಟಿಕೆಗಳ ಮೇಲೆ ಗಧಾಪ್ರಹಾರ ಮಾಡುತ್ತಿರುವುದು ಖಂಡನೀಯ. ಒಂದರ ಮೇಲೊಂದು ಗೊಂದಲದ/ ಮುಂದಾಲೋಚನೆಯಿಲ್ಲದ ನಿರ್ಧಾರ ತೆಗೆದುಕೊಳ್ಳುವ ಸರಕಾರಕ್ಕೆ ಅದ್ಯಾವಾಗ ಬುದ್ದಿಬರುತ್ತೋ ಎಂದು ಸಾರ್ವಜನಿಕರು ರೊಚ್ಚಿಗೆದ್ದರೆ, ಸರಕಾರಕ್ಕೆ ಇದು ದುಬಾರಿಯಾಗುವುದಂತೂ ನಿಶ್ಚಿತ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications