ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹಮದ್ ಖಾನ್ ವಿರುದ್ಧ ಸ್ಫೋಟಕ ಹೇಳಿಕೆ ಕೊಟ್ಟ ಪ್ರಮೋದ್ ಮುತಾಲಿಕ್
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಹೇಯ ಕೃತ್ಯ. ಸಚಿವ ಜಮೀರ್ ಅಹ್ಮದ್ ನಾಟಕ ಆಡುತ್ತಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಪ್ರಕರಣದಲ್ಲಿ ಬಿಹಾರಿ ಮುಸ್ಲಿಂ ಬಲಿ ಕೊಟ್ಟಿದ್ದಾರೆ. ಈ ವ್ಯಕ್ತಿಗೂ ಪ್ರಕರಣದಕ್ಕೂ ಸಂಬಂಧವೇ ಇಲ್ಲ. ದೊಡ್ಡ ಗುಂಪು ರಕ್ಷಣೆ ಮಾಡೋ ತಂತ್ರಗಾರಿಕೆ ಇದರ ಹಿಂದೆ ಇದೆ. ನಿನ್ನ ಬಿಡಿಸ್ತೀವಿ, ಕುಡಿದ ಮತ್ತಿನಲ್ಲಿ ಮಾಡಿದ್ದೀನಿ ಎಂದು ಹೇಳಿಕೆ ಕೊಡಿಸಿದ್ದಾರೆ. ಈ ನಾಟಕ ರಚನೆ ಮಾಡಿರೋದು ಜನರಿಗೆ ಗೊತ್ತಾಗಿದೆ. ಜಮೀರ್ ನಿಮ್ಮ ನಾಟಕ ನಿಲ್ಲಿಸಿ. ನಿಜವಾಗಿ ಕೃತ್ಯ ಮಾಡಿದವರ ಎನ್ಕೌಂಟರ್ ಮಾಡಬೇಕು. ಇದು ಇಸ್ಲಾಂ ಮಾನಸಿಕತೆ. ಕತ್ತರಿಸೋ ಮಾನಸಿಕತೆ ಇಸ್ಲಾಂ ಮನಸ್ಥಿತಿ. ಹೀಗಾಗಿ ಎನ್ಕೌಂಟರ್ ಮಾಡಬೇಕು. ಸಿಸಿಟಿವಿ ಇಲ್ಲ ಅನ್ನೋದು ನಾಟಕ ರಚನೆ ಆಗಿದೆ ಎಂದ ಮುತಾಲಿಕ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ನಡೆಯುತ್ತಿದೆ. ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆಯಾಗಿದೆ. ಜಮೀರ್ ಅಹ್ಮದ್ ಇದು ನಿಮ್ಮ ಕ್ಷೇತ್ರದಲ್ಲಿ ನಡೆದಿರುವ ಘಟನೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೆ ಶ್ರೀರಾಮ ಸೇನೆಯಿಂದ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದೂ ಅವರ ಭಾನುವಾರ ಎಚ್ಚರಿಕೆ ಕೊಟ್ಟಿದ್ದರು. ಇದೀಗ ಸೋಮವಾರ ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ಈ ವಿಚಾರವಾಗಿ ಮಾತನಾಡಿದ್ದ ಪ್ರಮೋದ್ ಮುತಾಲಿಕ್ ಅವರು ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಹಸು ಎನ್ನುವುದು ಕೇವಲ ಪ್ರಾಣಿ ಮಾತ್ರವಲ್ಲ. ಹಸುವಿನ ಕೆಚ್ಚಲು ಕೊಯ್ದಿರುವ ನೀಚರನ್ನು ಒದ್ದು ಒಳಗಡೆ ಹಾಕಬೇಕು. ಒಂದೊಮ್ಮೆ ಈ ಕೆಲಸ ಮಾಡದೆ ಇದ್ದರೆ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ. ಇದು ಎಚ್ಚರಿಕೆ ಎಂದು ವಾಗ್ದಾಳಿ ನಡೆಸಿದ್ದರು. ಇನ್ನು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೆಸ್ನ ಮುಸ್ಲಿಂ ತುಷ್ಟೀಕರಣ ಹಿನ್ನೆಲೆಯಲ್ಲಿ ನಿರಂತರ ಗೋಹತ್ಯೆ ಆಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಟಾಚಾರಕ್ಕೆ ಆರೋಪಿಯನ್ನು ಬಂಧಿಸಲಾಗಿದೆ
ಇನ್ನು ದನದ ಕೆಚ್ಚಲು ಕತ್ತರಿಸಿದ ಪ್ರಕರಣದಲ್ಲಿ ಪೊಲೀಸರು ಕಾಟಾಚಾರಕ್ಕೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಆರೋಪಿಸಿದ್ದಾರೆ. ಈ ವಿಚಾರವಾಗಿ ಆರ್ ಅಶೋಕ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಅಲ್ಲದೆ ಈ ಪ್ರಕರಣವನ್ನು ಮುಚ್ಚಿಹಾಕುವುದಕ್ಕೆ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಹಿಂದೂಗಳ ಗಣೇಶ ಹಬ್ಬ, ಹನುಮ ಜಯಂತಿ ಈಗ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಿಂದೂಗಳ ಭಾವನಗೆ ಧಕ್ಕೆ ತರುವ ಕೆಲಸಗಳಿಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ಮುಸ್ಲಿಮರ ಅತಿಯಾದ ಓಲೈಕೆ ಮಾಡುವುದನ್ನು ಬಿಡುವವರೆಗೆ ಈ ರಾಜ್ಯದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲಸಲು ಸಾಧ್ಯವಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications