ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ರಾಜ್ಯಪಾಲರ ಅಂಕಿತಕ್ಕೆ ರವಾನೆ
ಬೆಂಗಳೂರು, ಡಿ. 30: ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಇಂದು ಡಿಸೆಂಬರ್ 30ರಂದು ಕಳುಹಿಸಲಾಗುತ್ತಿದೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವ ಸಲುವಾಗಿ, ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿಯ 'ಕರ್ನಾಟಕ ಜಾನುವಾರು ಹತ್ಯೆೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ'ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಿದೆ.
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಗೋಹತ್ಯೆೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಲಾಗಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಜ್ಯಪಾಲರ ಅಂಕಿತ ಹಾಕಿದ ನಂತರ ಸುಗ್ರೀವಾಜ್ಞೆ ಅಧಿಕೃತ ಕಾಯ್ದೆಯಾಗಿ ಜಾರಿಗೆ ಬರಲಿದೆ.

ನಂತರ ಆರು ತಿಂಗಳೊಳಗಾಗಿ ಸರ್ಕಾರ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದ ಎರಡೂ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕಾಗುತ್ತದೆ. ಕಳೆದ ವಿಧಾನ ಮಂಡಳ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಆದರೆ ಜೆಡಿಎಸ್ ಬೆಂಬಲ ಕೊಡದೇ ಇದ್ದುದರಿಂದ ವಿಧಾನ ಪರಿಷತ್ನಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಿರಲಿಲ್ಲ.

Recommended Video
ಹೀಗಾಗಿ ಸುಗ್ರೀವಾಜ್ಞೆ ಮೂಲಕ ಇದೀಗ ಕಾಯ್ದೆ ಜಾರಿಗೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದ್ದು, ಹೊಸ ವರ್ಷದ ವಿಧಾನ ಮಂಡಳ ಜಂಟಿ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ್ಕೆ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications