Get Updates
Get notified of breaking news, exclusive insights, and must-see stories!

ರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ!

Recommended Video

      ರಮೇಶ್ ಜಾರಕಿಹೊಳಿ ಹಾಗು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ ಕುತೂಹಲದ ಭೇಟಿ | Oneindia Kannada

      ಬೆಂಗಳೂರು, ಮೇ 14 : ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಸೋಮವಾರ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ಮಂಗಳವಾರ ಸಂಜೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್‌ನಲ್ಲಿರುವ ನಿವಾಸದಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

      ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಮತ್ತು ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ನಾಗರಾಜು ಅವರು ಪ್ರತ್ಯೇಕವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರು ಕಳೆದ ವಾರ ಯಮಕನಮರಡಿ ಕ್ಷೇತ್ರದ ಬಿಜೆಪಿ ನಾಯಕರ ಜೊತೆಗೂ ಸಭೆ ನಡೆಸಿದ್ದರು

      ಬೆಂಗಳೂರಿನಲ್ಲಿರುವ ರಮೇಶ್ ಜಾರಕಿಹೊಳಿ ಅವರು ಇಬ್ಬರು ನಾಯಕರ ಭೇಟಿಗೆ ಮಂಗಳವಾರ ಸಂಜೆ ಪ್ರತ್ಯೇಕ ಸಮಯವನ್ನು ನೀಡಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ....

      ಕುತೂಹಲ ಮೂಡಿಸಿದ ಭೇಟಿ

      ಕುತೂಹಲ ಮೂಡಿಸಿದ ಭೇಟಿ

      ಗೋಕಾಕ್‌ನಲ್ಲಿದ್ದ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಹಿನ್ನಲೆಯಲ್ಲಿ ಬೆಂಗಳೂರಿಗೆ ಬಂದಿದ್ದರು ಎಂಬ ಸುದ್ದಿಗಳು ಇವೆ. ಆದರೆ, ಮಂಗಳವಾರ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು.

      ಸಿ.ಪಿ.ಯೋಗೇಶ್ವರ ಭೇಟಿ

      ಸಿ.ಪಿ.ಯೋಗೇಶ್ವರ ಭೇಟಿ

      ಮಂಗಳವಾರ ಸಿ.ಪಿ.ಯೋಗೇಶ್ವರ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣ ಮತ್ತು ರಾಮನಗರದ ರಾಜಕೀಯದಲ್ಲಿ ಸಕ್ರಿಯರು. ಅವರು ಬೆಳಗಾವಿಯ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದು ಏಕೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

      ಮತ್ತೆ ಆಪರೇಷನ್ ಕಮಲ?

      ಮತ್ತೆ ಆಪರೇಷನ್ ಕಮಲ?

      2018ರ ಡಿಸೆಂಬರ್‌ನಲ್ಲಿ ಆಪರೇಷನ್ ಕಮಲದ ಚಟುವಟಿಕೆಗಳು ನಡೆದಾಗ ಸಿ.ಪಿ.ಯೋಗೇಶ್ವರ ಅವರ ಹೆಸರು ಸಹ ಕೇಳಿಬಂದಿತ್ತು. ಅವರು ಕಾಂಗ್ರೆಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಇಂದು ಅವರು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದು, ಪುನಃ ಆಪರೇಷನ್ ಕಮಲ ಆರಂಭವಾಯಿತೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

      ಪಕ್ಷ ಬಿಡುವುದಿಲ್ಲ ಎಂಬ ಭರವಸೆ

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ ಪಕ್ಷದಲ್ಲೇ ಮುಂದುವರೆಯುತ್ತಾರೆಂಬ ಭರವಸೆ ಇದೆ ಎಂದು ಟ್ವೀಟ್ ಮಾಡಿದ್ದರು. ಆದರೆ, ಇಂದು ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+