ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ - ಸಿಪಿಐಎಂ ವಿರೋಧ
ಬೆಂಗಳೂರು, ಏಪ್ರಿಲ್ 06: ಪ್ರತಿ ಯೂನಿಟ್ ವಿದ್ಯುತ್ ಬೆಲೆಯನ್ನು 10 ಪೈಸೆಗಳಿಂದ 20 ಪೈಸೆಗೆ ಮತ್ತು ವಾಣಿಜ್ಯಬಳಕೆಯ ವಿದ್ಯುತ್ ಅನ್ನು 15 ಪೈಸೆಯಿಂದ 25 ಪೈಸೆಗೆ ಹೆಚ್ಚಳ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಮತ್ತೊಂದು ಹೊರೆಯನ್ನು ಹೇರಲು ಮುಂದಾದ ವಿದ್ಯುತ್ ಕಂಪನಿಗಳ ಕ್ರಮವನ್ನು ಸಿಪಿಐಎಂ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದು ಜನತೆಯ ಮೇಲೆ ಎರಡು ರೀತಿಯ ತೆರಿಗೆಯ ಬರೆಯನ್ನು ಎಳೆದಿದ್ದು ಈ ಕೂಡಲೇ ಬೆಲೆ ಏರಿಕೆಯ ಕ್ರಮಗಳನ್ನು ವಾಪಾಸು ಪಡೆಯುವಂತೆ ಬಲವಾಗಿ ಒತ್ತಾಯಿಸಿದೆ.
ಕಳೆದ 2009 ರಿಂದ 2022 ರ ಇಂದಿನ ವರೆಗೆ ಪ್ರತಿ ಯೂನಿಟ್ ವಿದ್ಯುತ್ ಬೆಲೆಯನ್ನು 2.70 ರುಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯು ಎಲ್ಲ ಮನೆಗಳ ಬಿಲ್ ಗಳನ್ನು ಹೆಚ್ಚಿಸಲಿದೆ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ಬೆಲೆಗಳ ಏರಿಕೆಯು ಸಣ್ಣ ಕೈಗಾರಿಕೆಗಳು ಮುಚ್ಚುವಂತಹ ಪರಿಸ್ಥಿತಿಯನ್ನು ವ್ಯಾಪಕಗೊಳಿಸಲಿದೆ ಹಾಗೂ ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಮತ್ತೊಂದು ಹೊರೆಯನ್ನು ಹೇರಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಬೆಲೆ ಏರಿಕೆಯ ಈ ಕ್ರಮಗಳನ್ನು ಹಿಂಪಡೆಯಲು ಅಗತ್ಯ ಕ್ರಮವಹಿಸಲು ಮುಂದಾಗಬೇಕೆಂದು ಮುಖ್ಯಮಂತ್ರಿಗಳನ್ನು ಸಿಪಿಐಎಂ ಒತ್ತಾಯಿಸಿದೆ.
ವಿದ್ಯುತ್ ಸರಬರಾಜು ಕಂಪನಿಗಳು ತಮ್ಮ ಸರಬರಾಜುಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿಕೊಳ್ಳದೇ ಆ ಮೂಲಕ ಆಗುವ ವಿದ್ಯುತ್ ನಷ್ಠವನ್ನು ಜನ ಸಾಮಾನ್ಯರ ಮೇಲೆ ಹೇರುತ್ತಿರುವುದನ್ನು ಒಪ್ಪಲಾಗದು. ಇದಕ್ಕೆ ಆ ಕಂಪನಿಗಳು ಮತ್ತು ಸರಕಾರ ಅಗತ್ಯ ಕ್ರಮವಹಿಸಬೇಕು.

ಸಾರ್ವಜನಿಕ ಕ್ಷೇತ್ರದ ಕೆಪಿಸಿಲ್ ಮೂಲಕ ಅತ್ಯಂತ ಕಡಿಮೆ ಬೆಲೆಗೆ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ಖಾಸಗೀ ಕಂಪನಿಗಳ ದುಬಾರಿ ವಿದ್ಯುತ್ ಖರೀದಿಯನ್ನು ಮುಂದುವರೆಸಲು ಆಗಿಂದಾಗ್ಗೆ ರಾಜ್ಯದ ಹಲವು ಘಟಕಗಳಲ್ಲಿ ಸಲ್ಲದ ನೆಪ ಹೇಳಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗುತ್ತಿದೆ.ಈ ಕುರಿತು ಅಗತ್ಯ ಸ್ವತಂತ್ರ ನ್ಯಾಯಾಂಗದ ತನಿಖೆಗೆ ಕ್ರಮವಹಿಸುವುದು ಅಗತ್ಯವಿದೆ.
ಅದೇ ರೀತಿ, ಸಾರ್ವಜನಿಕ ರಂಗದ ವಿದ್ಯುತ್ ಉತ್ಪಾದನೆ (ಕೆಪಿಸಿಎಲ್) ಹಾಗೂ ಸರಬರಾಜು ಕಂಪನಿಗಳನ್ನು ಖಾಸಗೀಕರಿಸುವ ಲೂಟಿಕೋರ ಸಂಚಿನ ದುರುದ್ದೇಶವು ಈ ಬೆಲೆ ಏರಿಕೆಯ ಹಿಂದೆ ಅಡಗಿರುವುದನ್ನು ಸಾರ್ವಜನಿಕರು ಗಮನಿಸಿ ಪ್ರತಿರೋಧಿಸುವಂತೆ ಸಿಪಿಐಎಂ ಕರೆ ನೀಡುತ್ತದೆ ಎಂದು ಸಿಪಿಐಎಂ ಕಾರ್ಯದರ್ಶಿ ಯು ಬಸವರಾಜ ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications