ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; 12 ಜನರ ಸಜೀವ ದಹನ!
ಬೆಂಗಳೂರು, ಅಕ್ಟೋಬರ್ 07: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 30 ರಿಂದ40 ಜನ ಕಾರ್ಮಿಕರ ಪೈಕಿ 12 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಹೌದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಘಟನೆ ನಡೆದಿದೆ. ವಾಹನದಿಂದ ಪಟಾಕಿ ಆನ್ಲೋಡ್ ಮಾಡುವ ವೇಳೆ ಆದ ಅವಘಡ ಸಂಭವಿಸಿದ್ದು, ಏಕಾಏಕಿ ಹೊತ್ತಿಕೊಂಡ ಬೆಂಕಿ ಹೊತ್ತಿಕೊಂಡಿದೆ.
ಇನ್ನೂ ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನೂ ಬೆಂಕಿಗೆ ಸಿಲುಕಿ ಕಾರ್ಮಿಕರು ಮೃತಪಟ್ಟಿದ್ದು, ಎಷ್ಟು ಜನ ಸಿಲುಕಿದ್ದಾರೆ ಎನ್ನುವ ನಿಖರ ಮಾಹಿತಿ ಇಲ್ಲ. ಸಾರ್ವಜನಿಕರನ್ನು ಪೊಲೀಸರು ದೂರ ಕಳುಹಿಸುತ್ತಿದ್ದು, ಸದ್ಯ ಪಟಾಕಿ ಮಳಿಗೆ ಬಳಿ ಮೂರು ಆಂಬುಲೆನ್ಸ್ ಗಳು ಆಗಮಿಸಿವೆ. ಸದ್ಯ ಮೃತ ದೇಹ ಶಿಫ್ಟ್ ಮಾಡಲಾಗಿದೆ.

ಇನ್ನೂ ಪಟಾಕಿ ದಾಸ್ತಾನು ಮಳಿಗೆ ನಾಲೈದು ತಾಸಿನಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಶಾಮಕ ದಳದ ಐದಾರು ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ನವೀನ್ ಎಂಬುವವರಿಗೆ ಸೇರಿದ್ದ ಈ ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ.
ಇನ್ನೂ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಈ ಮಳಿಗೆಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಅಲ್ಲದೇ ದಾಸ್ತಾನು ಮಳಿಗೆ, ಒಂದು ಲಾರಿ, ಒಂದು ಸರಕು ಸಾಗಣೆ ಮತ್ತು ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳದಲ್ಲಿ ಪಟಾಕಿಗಳು ಇನ್ನೂ ಸಿಡಿಯುತ್ತಿದ್ದು, ಸುತ್ತಲೂ ದಟ್ಟವಾದ ಬೆಂಕಿ ಮತ್ತು ಹೊಗೆ ಆವರಿಸಿದೆ. ಪಟಾಕಿ ಮಳಿಗೆ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಾಲೈದು ಆಂಬುಲೆನ್ಸ್ಗಳು ಬಂದಿವೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications