ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ; 12 ಜನರ ಸಜೀವ ದಹನ!
ಬೆಂಗಳೂರು, ಅಕ್ಟೋಬರ್ 07: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 30 ರಿಂದ40 ಜನ ಕಾರ್ಮಿಕರ ಪೈಕಿ 12 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಹೌದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಘಟನೆ ನಡೆದಿದೆ. ವಾಹನದಿಂದ ಪಟಾಕಿ ಆನ್ಲೋಡ್ ಮಾಡುವ ವೇಳೆ ಆದ ಅವಘಡ ಸಂಭವಿಸಿದ್ದು, ಏಕಾಏಕಿ ಹೊತ್ತಿಕೊಂಡ ಬೆಂಕಿ ಹೊತ್ತಿಕೊಂಡಿದೆ.
ಇನ್ನೂ ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನೂ ಬೆಂಕಿಗೆ ಸಿಲುಕಿ ಕಾರ್ಮಿಕರು ಮೃತಪಟ್ಟಿದ್ದು, ಎಷ್ಟು ಜನ ಸಿಲುಕಿದ್ದಾರೆ ಎನ್ನುವ ನಿಖರ ಮಾಹಿತಿ ಇಲ್ಲ. ಸಾರ್ವಜನಿಕರನ್ನು ಪೊಲೀಸರು ದೂರ ಕಳುಹಿಸುತ್ತಿದ್ದು, ಸದ್ಯ ಪಟಾಕಿ ಮಳಿಗೆ ಬಳಿ ಮೂರು ಆಂಬುಲೆನ್ಸ್ ಗಳು ಆಗಮಿಸಿವೆ. ಸದ್ಯ ಮೃತ ದೇಹ ಶಿಫ್ಟ್ ಮಾಡಲಾಗಿದೆ.

ಇನ್ನೂ ಪಟಾಕಿ ದಾಸ್ತಾನು ಮಳಿಗೆ ನಾಲೈದು ತಾಸಿನಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಶಾಮಕ ದಳದ ಐದಾರು ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ನವೀನ್ ಎಂಬುವವರಿಗೆ ಸೇರಿದ್ದ ಈ ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ.
ಇನ್ನೂ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಈ ಮಳಿಗೆಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಅಲ್ಲದೇ ದಾಸ್ತಾನು ಮಳಿಗೆ, ಒಂದು ಲಾರಿ, ಒಂದು ಸರಕು ಸಾಗಣೆ ಮತ್ತು ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳದಲ್ಲಿ ಪಟಾಕಿಗಳು ಇನ್ನೂ ಸಿಡಿಯುತ್ತಿದ್ದು, ಸುತ್ತಲೂ ದಟ್ಟವಾದ ಬೆಂಕಿ ಮತ್ತು ಹೊಗೆ ಆವರಿಸಿದೆ. ಪಟಾಕಿ ಮಳಿಗೆ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಾಲೈದು ಆಂಬುಲೆನ್ಸ್ಗಳು ಬಂದಿವೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ











Click it and Unblock the Notifications