ಹೊಸ ಹುದ್ದೆ ಸೃಷ್ಟಿ; ವಿವಾದ ಹುಟ್ಟು ಹಾಕಿದ ಕೆಐಎಡಿಬಿ
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಹುದ್ದೆಯನ್ನು ಸೃಷ್ಟಿ ಮಾಡುವ ಮೂಲಕ ವಿವಾದ ಹುಟ್ಟು ಹಾಕಿದೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ವೆಚ್ಚಗಳನ್ನು ಕಡಿತಗೊಳಿಸಲು ಮುಂದಾಗಿದೆ.
ಸರ್ಕಾರ ವೆಚ್ಚ ಕಡಿತ ಮಾಡಲು ದಾರಿ ಹುಡುಕುತ್ತಿದ್ದರೆ ಕೆಐಎಡಿಬಿ ಮುಖ್ಯ ತಾಂತ್ರಿಕ ಸಲಹೆಗಾರ ಎಂಬ ಹುದ್ದೆಯನ್ನು ಸೃಷ್ಟಿ ಮಾಡಲು ಮುಂದಾಗಿದೆ. ಮುಖ್ಯ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಕೆಲವು ದಿನಗಳ ಹಿಂದೆ ನಿವೃತ್ತರಾದವರನ್ನು ಈ ಹುದ್ದೆಗೆ ತರಲಾಗುತ್ತಿದೆ.
ಕೆಐಎಡಿಬಿಯಲ್ಲಿ ಹಿಂದೆ ಒಂದೇ ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಒ-ಸಿಇ) ಹುದ್ದೆ ಇತ್ತು. ಅದನ್ನು 2ಕ್ಕೆ ಹೆಚ್ಚಳ ಮಾಡಲಾಗಿತ್ತು. ಈಗ ಈ ಹುದ್ದೆಗಳ ಮೇಲೆ ಮುಖ್ಯ ತಾಂತ್ರಿಕ ಸಲಹೆಗಾರ ಹುದ್ದೆ ಸೃಷ್ಟಿ ಮಾಡಲಾಗುತ್ತಿದೆ.

ಮಂಡಳಿಯ ಹಿರಿಯ ಅಧಿಕಾರಿಗಳೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರ ವೆಚ್ಚ ಕಡಿತ ಮಾಡಲು ನೋಡುತ್ತಿದ್ದರೆ. ಹೊಸ ಹುದ್ದೆ ಸೃಷ್ಟಿ ಮಾಡುವುದು ಏಕೆ? ಎಂಬುದು ಅಧಿಕಾರಿಗಳ ಪ್ರಶ್ನೆ.
ನಿವೃತ್ತರಾದವರು ವಾಪಸ್ : ಕೆಲವು ದಿನಗಳ ಹಿಂದೆ ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಎಂ. ರಾಮು ಎಂಬುವವರು ನಿವೃತ್ತರಾಗಿದ್ದಾರೆ. ಅವರನ್ನು ಹೊಸದಾಗಿ ಸೃಷ್ಟಿ ಮಾಡುತ್ತಿರುವ ಮುಖ್ಯ ತಾಂತ್ರಿಕ ಸಲಹೆಗಾರ ಹುದ್ದೆಗೆ ನಿಯೋಜನೆ ಮಾಡಲು ತೀರ್ಮಾನಿಸಲಾಗಿದೆ.
ಎಂ. ರಾಮು ಅವರ ಅವಧಿಯಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನೇಕ ಟೆಂಡರ್ಗಳನ್ನು ನೀಡಲಾಗಿದೆ. ಅವುಗಳನ್ನು ಸಕ್ರಮಗೊಳಿಸಲು ಮತ್ತೊಂದು ಹುದ್ದೆಯಲ್ಲಿ ಅವರನ್ನು ತಂದು ಕೂರಿಸಲಾಗುತ್ತದೆ ಎಂಬ ಆರೋಪಗಳಿವೆ.
ಶಿರಾದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ 100 ಕೋಟಿ ಕಾಮಗಾರಿಯನ್ನು ತಾಂತ್ರಿಕ ಪರಿಣಿತಿ ಇಲ್ಲದ ಗುತ್ತಿಗೆದಾರರಿಗೆ ನೀಡಲಾಗಿದೆ. ಇಂತಹ ಹಲವು ಆರೋಪಗಳು ರಾಮು ಅವರ ವಿರುದ್ಧ ಕೇಳಿ ಬರುತ್ತಿವೆ. ಅವರನ್ನು ಪುನಃ ಮುಖ್ಯ ತಾಂತ್ರಿಕ ಸಲಹೆಗಾರ ಹುದ್ದೆಗೆ ಕರೆತರುತ್ತಿರುವುದು ಅನುಮಾನಗಳಿಗೆ ಕಾರಣವಾಗಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications