Bengaluru: ಕಚ್ಚಾ ತೈಲ ದರ ಇಳಿಕೆ ಬೆನ್ನಲ್ಲೆ ಅಡುಗೆ ಅನಿಲ, ಇಂಧನ ಬೆಲೆ ಇಳಿಕೆಗೆ ಆಗ್ರಹ
ಬೆಂಗಳೂರು, ಜಲೈ 05: ನಿರಂತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಹೋಟೆಲ್ ಉದ್ಯಮಕ್ಕೆ ಅಡುಗೆ ಅನಿಲ ದರ ಏರಿಕೆ ಸಹ ಸಾಕಷ್ಟು ಆರ್ಥಿಕ ಹೊಡೆತ ಕೊಟ್ಟಿತ್ತು. ಇದೀಗ ಕಚ್ಚಾ ತೈಲದ ಬೆಲೆ ಇಳಿಕೆ ಆದರೂ ಸಹಿತ ಹೆಚ್ಚಾಗಿರುವ ದರಗಳು ಯಥಾ ಸ್ಥಿತಿಯಲ್ಲಿವೆ. ಇಂಧನ, ಅಡುಗೆ ಅನಿಲಗಳ ಅವುಗಳ ಬೆಲೆ ಕಡಿಮೆ ಮಾಡಲು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ (BBHA) ಒತ್ತಾಯಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ (BBHA) ಅಧ್ಯಕ್ಷ ಪಿ.ಸಿ.ರಾವ್ ಅವರು, ಈಗಾಗಲೇ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 134 ಡಾಲರ್ನಿಂದ 72 ಡಾಲರ್ಗೆ ಇಳಿಕೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಿಲ್ಲ ಇದು ವಿಷಾಧನಿಯ ಎಂದರು.

ಅದಷ್ಟೇ ಅಲ್ಲದೇ ಪೆಟ್ರೋಲ್ನ ಪ್ರಸ್ತುತ ಮಾರಾಟ ಬೆಲೆ ಪ್ರತಿ ಲೀಟರ್ಗೆ ರೂಪಾಯಿ 102 ಇದೆ. ಇದರಲ್ಲಿ 58 ರೂಗಳಷ್ಟು ತೆರಿಗೆ ಸಂಗ್ರಹಿಸುತ್ತಿದ್ದಾರೆ. ಇದರ ಜೊತೆಗೆ LPG ಅಡುಗೆ ಅನಿಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಟನ್ಗೆ 50ರೂಪಾಯಿ ಇಳಿಕೆ ಆಗಿದೆ ಎಂದು ತಿಳಿಸಿದರು.
ತಕ್ಷಣವೇ ಬೆಲೆ ಇಳಿಕೆಗೆ ಕ್ರಮ ವಹಿಸಿ
ಕಚ್ಚಾ ತೈಲದ ಬೆಲೆ, ಅಡುಗೆ ಅನಿಲದ ಬೆಲೆ ಇಳಿಕೆ ಆಗಿದ್ದರೂ ಸಹ ಗ್ಯಾಸ್ ಬೆಲೆಯನ್ನು ಕಡಿಮೆ ಮಾಡಿರುವುದಿಲ್ಲ. ಈ ಎಲ್ಲಾ ಹೆಚ್ಚಿನ ಬೆಲೆ ಮತ್ತು ತೆರಿಗೆಗಳಿಂದ ಜನಸಾಮಾನ್ಯರು ಹಾಗೂ ಉದ್ಯಮಿಗಳ ಮೇಲೆ ದುಷ್ಪರಿಣಾಮ ಬೀಳುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಇಳಿಕೆ ಬಗ್ಗೆ ಗಮನ ಹರಿಸಬೇಕು. ಡೀಸೆಲ್, ಪೆಟ್ರೋಲ್ ಮತ್ತು ಗ್ಯಾಸ್ (LPG) ಬೆಲೆಯನ್ನು ತಕ್ಷಣವೇ ಕಡಿಮೆ ಮಾಡಬೇಕೆಂದು ಜನರ ಪರವಾಗಿ ಹೋಟೆಲ್ ಸಂಘದಿಂದ ಒತ್ತಾಯಿಸುತ್ತೇವೆ ಎಂದರು.

ಇನ್ನೂ ಜೊತೆಗೆ ಹೊಟೇಲುಗಳಿಗೆ ಸರಬರಾಜು ಮಾಡುವ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇಕಡಾ 5ಕ್ಕೆ ಇಳಿಸುವ ಮೂಲಕ ಜನಸಾಮಾನ್ಯರಿಗೆ, ಹೋಟೆಲ್ ಉದ್ಯಮಗಳಿಗೆ ಅನುಕೂಲ ಮಾಡಿಕೊಡಬೇಕು. ಬೆಲೆ ಇಳಿಕೆಗಳ ಕುರಿತು ಸಂಘವು ರಾಜ್ಯ ನಾಯಕರು ಮತ್ತು ಕೇಂದ್ರ ಸಚಿವರ ಜೊತೆ ಚರ್ಚಿಸಲಿದ್ದೇವೆ. ಜೊತೆಗೆ ಮನವಿ ಮೇರೆಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಮುಖಂಡರು ಸೇರಿ ಒತ್ತಾಯಿಸಲಿದ್ದೇವೆ ಎಂದು ಹೇಳಿದರು.
ಅಡುಗೆ ಅನಿಲ, ವಿದ್ಯುತ್ ದರ, ಕಾಪಿ ಪುಡಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬೆಂಗಳೂರಿನ ವಿವಿಧೆಡೆ ಹೋಟೆಲುಗಳಲ್ಲಿ ಊಟ, ತಿಂಡಿ, ಟೀ ಕಾಪಿ ಬೆಲೆ ಏರಿಕೆ ಆಗಿದ್ದು, ಇದು ಗ್ರಾಹಕರಿಗೆ ಆರ್ಥಿಕ ಹೊರೆಯಾಗುತ್ತಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications