CT Ravi on Budget: ಮೇಲುನೋಟಕ್ಕೆ ಸಕ್ಕರೆ ಕೊಟ್ಟು ಒಳಗಡೆ ಕಹಿ ಉಣಿಸುವ ಬಜೆಟ್: ಸಿ ಟಿ ರವಿ
ಬೆಂಗಳೂರು,ಜುಲೈ07: ಮೇಲುನೋಟಕ್ಕೆ ಸಕ್ಕರೆ ಕೊಟ್ಟು ಒಳಗಡೆ ಕಹಿ ಉಣಿಸುವ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯನ್ನು (ಎನ್ಇಪಿ) ವಿರೋಧಿಸಿದ್ದೀರಿ, ಕಾಮಾಲೆ ರೋಗಿಗೆ ಕಾಣೋದೇಲ್ಲ ಹಳದಿ ಎಂಬಂತಿದೆ. ಪ್ರಾಥಮಿಕ ಭಾಷೆ ಮಾತೃಭಾಷೆಯೇ ಇರಬೇಕೆಂದು ಎನ್ಇಪಿ ಹೇಳುತ್ತದೆ. ಕೌಶಲ್ಯಯುಕ್ತ ಶಿಕ್ಷಣಕ್ಕೆ ಅಲ್ಲಿ ಅವಕಾಶವಿದೆ. ಅಂಥ ಶಿಕ್ಷಣ ನಿಮಗೆ ಬೇಡವೇ ಎಂದು ಪ್ರಶ್ನಿಸಿದರು.

ಕ್ಯಾಪಿಟೇಶನ್ ಲಾಬಿಯನ್ನು ರಕ್ಷಿಸುವ ಚಿಂತನೆ ನಿಮ್ಮದು. ಜಿಎಸ್ಟಿ ಜಾರಿ ಬಳಿಕ ನರೇಂದ್ರ ಮೋದಿಯವರು ಹೆಚ್ಚಿನ ತೆರಿಗೆ ಪಾಲನ್ನು ಕರ್ನಾಟಕಕ್ಕೆ ಕೊಡುವ ಕುರಿತು ಉಲ್ಲೇಖಿಸಬೇಕಿತ್ತು. ಆದರೆ, ಅದನ್ನು ಹೇಳುವ ಔದಾರ್ಯ ತೋರದೆ ನಿಮ್ಮ ಸಣ್ಣತನವನ್ನು ಯಥಾವತ್ ತೋರಿಸಿದ್ದೀರಿ ಎಂದು ಟೀಕಿಸಿದರು.
ಸುಂಕಗಳನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದವರನ್ನು ಶೋಷಿಸುವ ಬಜೆಟ್ ಇದೆಂಬಂತೆ ಕಾಣುತ್ತಿದೆ. ನೀಡುವವರನ್ನು ಬೇಡುವಂತೆ ಮಾಡುವುದು ಇವರ ಉದ್ದೇಶ ಇದ್ದಂತಿದೆ. ಆ ಕೆಲಸವನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದು ಟೀಕಿಸಿದರು.
ಸಾಲ ಮಾಡಿಯಾದರೂ ತುಪ್ಪ ತಿನ್ನು ಎಂಬಂತೆ, ನಾಳೆ ಬಗ್ಗೆ, ಕರ್ನಾಟಕದ ಭವಿಷ್ಯದ ಬಗ್ಗೆ ಯಾವುದೇ ದೂರದೃಷ್ಟಿಯ ಚಿಂತನೆ ಇಲ್ಲದ, ಸಂಸತ್ ಚುನಾವಣೆಯನ್ನು ಏನಾದರೂ ಮಾಡಿ ಗೆಲ್ಲಬೇಕೆಂಬ ಯೋಚನೆಯ ಬಜೆಟ್ ಮಂಡಿಸಿದ್ದಾರೆ. ಸುಮಾರು 85 ಸಾವಿರ ಕೋಟಿಯಷ್ಟು ಹೊಸ ಸಾಲ ಮಾಡಿ ಹಂಚಿಕೆ ಮಾಡುವ ನೀತಿ ಇವರದು. ಕರ್ನಾಟಕವನ್ನು ಭವಿಷ್ಯದಲ್ಲಿ ಮುಳುಗಿಸುವ ಭೀತಿ ಕಾಡುತ್ತಿದೆ.

ಮೂಲ ಸೌಕರ್ಯಕ್ಕೆ ಬಂಡವಾಳ ಹೂಡಿದಾಗ ಉದ್ಯೋಗ ಸೃಷ್ಟಿ ಸಾಧ್ಯವಾಗುತ್ತದೆ. ಈ ಸರಕಾರ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟಿಲ್ಲ. ಮೂಲಸೌಕರ್ಯದಲ್ಲಿ ಹೂಡಿಕೆಗೆ ಕ್ರಮ ತೆಗೆದುಕೊಂಡಿಲ್ಲ. ಮಾವನ ಜೋಬಿನಿಂದ ಕತ್ತರಿಸಿ ಅತ್ತೆ ಕೈಗೆ ಕೊಟ್ಟು ಹಮ್ಮೀರ ಎನಿಸಿಕೊಳ್ಳುವ ಚಿಂತನೆ ಇವರದು ಎಂದು ಆಕ್ಷೇಪಿಸಿದರು.
ರೈತರು ದಲ್ಲಾಳಿಗಳ ಕಪಿಮುಷ್ಟಿಯಿಂದ ಹೊರಕ್ಕೆ ಬರಬಾರದು ಎಂಬ ಯೋಚನೆ, ಸಂಚು ನಿಮ್ಮದಾಗಿರುವಂತಿದೆ. ರೈತರ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು, ರೈತರು ಕೈಗಾರಿಕೋದ್ಯಮಿಗಳಾಗಲು, ರೈತರು ಜಾಗತಿಕ ಮಾರುಕಟ್ಟೆಯಲ್ಲಿ ತಮ್ಮ ವಸ್ತುಗಳನ್ನು ಮಾರಾಟ ಮಾಡಲು, ನೇರವಾಗಿ ಖರೀದಿ ಒಪ್ಪಂದ ಮಾಡಿಕೊಳ್ಳಲು ಫಾರ್ಮರ್ ಪ್ರೊಡ್ಯೂಸರ್ ಆರ್ಗನೈಸೇಷನ್ (ಎಫ್ಪಿಒ) ನೆರವಾಗುತ್ತಿತ್ತು. ನೀವು ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡಲು ಮುಂದಾದುರಿಂದ ಎಫ್ಪಿಒ ಗತಿ ಏನಾಗಲಿದೆ ಎಂದು ಪ್ರಶ್ನಿಸಿದರು.
ರೈತರು ಉದ್ಯಮಿಗಳಾಗಬಾರದು ಎಂಬ ಚಿಂತನೆ ನಿಮ್ಮದೇ? ರೈತರು ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧೆ ಮಾಡಬಾರದೇ? ಅವರನ್ನು ಜಾಗತಿಕ ಮಾರುಕಟ್ಟೆ ಪ್ರವೇಶಿಸದಂತೆ ತಡೆಯುವ ಹುನ್ನಾರ ನಿಮ್ಮದೇ? ನಾವು ರೈತರ ಆದಾಯವನ್ನು ಯೋಚಿಸಿದರೆ ನೀವು ಎಪಿಎಂಸಿ ಆದಾಯವನ್ನು ಚಿಂತಿಸುತ್ತಿದ್ದೀರಲ್ಲವೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಅಮೃತದಂಥ ಮಾತು, ವಿಷ ಹಾಕುವಂಥ ಚಿಂತನೆ ನಿಮ್ಮ ಬಜೆಟ್ನಲ್ಲಿ ಇದ್ದಂತಿದೆ ಎಂದು ಕಿಡಿಕಾರಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications