ಸವಿತಾ ಸಮಾಜಕ್ಕೆ ಅವಮಾನ ಮಾಡಿದ್ರಾ ಸಿ.ಟಿ.ರವಿ? ಕಾಂಗ್ರೆಸ್ ಹಂಚಿಕೊಂಡ ವಿಡಿಯೋದಲ್ಲೇನಿದೆ?
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಆರೋಪ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ಕೇಳಿಬಂದಿತ್ತು. ಈ ಕೇಸ್ನಲ್ಲಿ ಬಂಧನ ಕೂಡ ಆಗಿ ಹೊರಬಂದಿದ್ದರು. ಇದೀಗ ಸಿ.ಟಿ.ರವಿ ಅವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಸವಿತಾ ಸಮಾಜದ ಸಿ.ಟಿ.ರವಿ ತುಚ್ಛವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ವಿಡಿಯೋ ಕೂಡ ಕಾಂಗ್ರೆಸ್ ಹಂಚಿಕೊಂಡಿದೆ.
ಸದನದೊಳಗೆ ಮಹಿಳಾ ಸಚಿವರನ್ನು ಅತ್ಯಂತ ಕೀಳಾಗಿ ನಿಂದಿಸಿ ತನ್ನ ಕೊಳಕು ನಾಲಿಗೆಯನ್ನು ಪ್ರದರ್ಸಿಸಿದ್ದ ಬಿಜೆಪಿಯ ಸ್ವಯಂ ಘೋಷಿತ ಸಂಸ್ಕೃತಿ ರಕ್ಷಕ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಸವಿತಾ ಸಮಾಜದ ಬಗ್ಗೆ ತುಚ್ಛವಾಗಿ ಮಾತನಾಡಿ ಅವಮಾನಿಸಿರುವ ಮಾತುಗಳು ಅವರ ವೈಯಕ್ತಿಕ ನಿಲುವು ಮಾತ್ರವಲ್ಲ ಬಿಜೆಪಿಯ ಸಂಸ್ಕೃತಿ ಮತ್ತು ಸಂಘ ಶಿಕ್ಷಣದ ನೈಜ ಸಂಸ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಿಳೆಯರು, ದಲಿತರು, ಹಿಂದುಳಿದ ಜಾತಿಗಳ ಬಗ್ಗೆ ಎಂದಿಗೂ ಗೌರವವಿಲ್ಲದ ಬಿಜೆಪಿ ನಾಯಕರಿಗೆ ಆರ್.ಎಸ್.ಎಸ್ ಹೇಳಿಕೊಟ್ಟಿರುವುದು ಇದೇ ಮನುಸ್ಮೃತಿ ಪ್ರೇರಿತ "ಜಾತಿ ನಿಂದನೆ"ಯ ಪಾಠವನ್ನೇ? ಎಂದು ಕೇಳಿದೆ. ಸವಿತಾ ಸಮಾಜದ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಸಿ.ಟಿ.ರವಿ ಹಾಗೂ ಅವರಿಗೆ ಬೆಂಬಲವಾಗಿ ನಿಂತಿರುವ ಬಿಜೆಪಿ ಪಕ್ಷವು ಕೂಡಲೇ ರಾಜ್ಯದ ಜನರ ಹಾಗೂ ಸವಿತಾ ಸಮಾಜದ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಸಿಟಿ.ರವಿ ಅವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸದನದೊಳಗೆ ಮಹಿಳಾ ಸಚಿವರನ್ನು ಅತ್ಯಂತ ಕೀಳಾಗಿ ನಿಂದಿಸಿ ತನ್ನ ಕೊಳಕು ನಾಲಿಗೆಯನ್ನು ಪ್ರದರ್ಸಿಸಿದ್ದ ಬಿಜೆಪಿಯ ಸ್ವಯಂ ಘೋಷಿತ ಸಂಸ್ಕೃತಿ ರಕ್ಷಕ, ವಿಧಾನ ಪರಿಷತ್ ಸದಸ್ಯ @CTRavi_BJP ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.
— Karnataka Congress (@INCKarnataka) October 29, 2025
ಸವಿತಾ ಸಮಾಜದ ಬಗ್ಗೆ ತುಚ್ಛವಾಗಿ ಮಾತನಾಡಿ ಅವಮಾನಿಸಿರುವ ಮಾತುಗಳು ಅವರ ವೈಯಕ್ತಿಕ ನಿಲುವು… pic.twitter.com/dai2fd2nxi
ಕಾನೂನು ತನ್ನಿ
ಸಿಟಿ ರವಿಯವರಿಗೆ ಸವಿತಾ ಸಮಾಜದ ಬಂಧುಗಳು ಸರಿಯಾಗಿ ಬುದ್ದಿ ಕಲಿಸಬೇಕು, ಬುದ್ಧಿ ಕಲಿಸದಿದ್ದರೆ ಇದು ಮುಂದುವರಿಯುತ್ತಲೇ ಇರುತ್ತೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನ ಈ ವಿಡಿಯೋಗೆ ಕಾಮೆಂಟ್ ಮಾಡುತ್ತಿದ್ದಾರೆ. ಈ ರೀತಿಯ ಪದವನ್ನು ಬಳಸಿ ಸವಿತಾ ಸಮಾಜಕ್ಕೆ ಮತ್ತು ಜನತೆಗೆ ಅಪಮಾನ ಮಾಡಿರುವ ಸಿಟಿ ರವಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸವಿತಾ ಸಮಾಜದ ಮುಖಂಡರು ಕೂಡ ಇದನ್ನು ಖಂಡಿಸಿದ್ದಾರೆ. ಕೂಡಲೇ ಕ್ಷಮೆ ಕೇಳದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇವೆ. ಇಂತಹ ಪದಬಳಕೆ ಮಾಡುವವರಿಗೆ ಶಿಕ್ಷೆ ಕೊಡಲು ಬಲವಾದ ಕಾನೂನು ತರಬೇಕು ಎಂದು ಒತ್ತಾಯಿಸುತ್ತಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications