"ಬಾಂಬ್ ಸ್ಫೋಟಕ್ಕೆ ನಿರ್ದೇಶನ ನೀಡಲೆಂದು ಕರ್ನಾಟಕದ ಜೈಲಿನಲ್ಲಿ ಮೊಬೈಲ್ ಕೊಡಲಾಯಿತೇ?"
ಬೆಂಗಳೂರು, ನವೆಂಬರ್12: ದೇಶದ ಉದ್ದಗಲಕ್ಕೆ ಬಾಂಬ್ ಸ್ಫೋಟ ನಡೆಸಲು ನೆರವಾಗಲೆಂದು ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಕೊಟ್ಟಿದ್ದೀರಾ ಎಂದು ಕೇಳಿದರು. ಬಾಂಬ್ ಸ್ಫೋಟಕ್ಕೆ ನಿರ್ದೇಶನ ನೀಡಲೆಂದು ಮೊಬೈಲ್ ಕೊಡಲಾಯಿತೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಸಿ ಟಿ ರವಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಆರ್ಡಿಎಕ್ಸ್ ಪತ್ತೆಯಾಗಿದೆ. ಯಾವ ಶಾಂತಿದೂತರು ಅದನ್ನು ಕಳಿಸಿಕೊಟ್ಟರು? ಮುಖ್ಯಮಂತ್ರಿಗಳು ಬೇಹುಗಾರಿಕಾ ದಳದಿಂದ ಈ ಕುರಿತು ವರದಿ ತರಿಸಿಕೊಳ್ಳಲಿ ಎಂದು ಒತ್ತಾಯಿಸಿದರು. ಇನ್ನೊಬ್ಬ ಭಯೋತ್ಪಾದಕನಿಗೆ ಇಲ್ಲಿನ ಜೈಲಿನಲ್ಲಿ ಮೊಬೈಲ್ ಕೊಟ್ಟಿದ್ದೀರಲ್ಲವೇ? ಅವನ್ಯಾವ ಶಾಂತಿದೂತ? ಆರ್ಡಿಎಕ್ಸ್ ಸ್ಫೋಟಕ ಬಳಸುವವರು ಮತ್ತು ಅದನ್ನು ಸಂಗ್ರಹಿಸುವವರು ಯಾರು? ಅವರು ಯಾವ ಶಾಂತಿ ಧರ್ಮಕ್ಕೆ ಸೇರಿದವರೆಂದು ಮುಖ್ಯಮಂತ್ರಿಯವರು ತಿಳಿಸಬೇಕು ಎಂದು ಸಿ.ಟಿ. ರವಿ ಅವರು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಈಚೆಗೆ ಒಂದು ಸಭೆಯಲ್ಲಿ ಇಸ್ಲಾಂ ಎಂದರೆ ಶಾಂತಿ ಎಂದಿದ್ದರು. ಅದನ್ನು ಒಪ್ಪೋಣ. ಡಾ. ಅಹ್ಮದ್ ಮೊಹಿಯುದ್ದೀನ್ ಸಯೀದ್ ಪ್ರಾಣ ಉಳಿಸುವ ವೈದ್ಯನಲ್ಲ. ಸಾಮೂಹಿಕ ನರಮೇಧದ ತಯಾರಿ ಮಾಡುತ್ತಿದ್ದ ವ್ಯಕ್ತಿ. ಯಾವ ಶಾಂತಿ ಧರ್ಮಕ್ಕೆ ಸೇರಿದವನು ಎಂದು ಕೇಳಿದರು. ಇನ್ನೊಬ್ಬ ಸಯ್ಯದ್ ಮೊಹಮ್ಮದ್ ಸುಹೇಲ್ ಮತ್ತು ಆಜಾದ್ ಯಾವ ಶಾಂತಿ ಧರ್ಮಕ್ಕೆ ಸೇರಿದವರು ಎಂದು ಪ್ರಶ್ನಿಸಿದರು.
ಪ್ರಿಯಾಂಕ್ ಖರ್ಗೆಯವರೇ, ಅಸಮರ್ಥರು ಎನ್ನುತ್ತೀರಲ್ಲವೇ? ಭಯೋತ್ಪಾದಕರಿಗೆ ಮೊಬೈಲ್ ಕೊಡುವ ಅಯೋಗ್ಯರನ್ನು ಅಸಮರ್ಥರು ಎನ್ನುತ್ತಾರೆ. ಅವರ ನೇತೃತ್ವ ವಹಿಸಿದ ಸರಕಾರವನ್ನು ಅಸಮರ್ಥ ಎನ್ನುತ್ತಾರೆ. ಸರ್ಜಿಕಲ್ ದಾಳಿ, ಆಪರೇಷನ್ ಸಿಂದೂರದ ಮೂಲಕ ಉತ್ತರ ಕೊಡುವವರು ಅಸಮರ್ಥರಲ್ಲ ಎಂದು ಸಿ.ಟಿ. ರವಿ ಅವರು ತಿಳಿಸಿದರು. ಬಿರಿಯಾನಿ ಕೊಡುವುದು ಇದೆಯಲ್ಲವೇ? ಯಾಸಿನ್ ಮಲಿಕ್ ಜೀ ಎನ್ನುವುದು ಇದೆಯಲ್ಲವೇ? ಹಾಗೇ ಪ್ರಧಾನಿ ಕಚೇರಿಗೆ ಕರೆದು ಚಹಾ ಕೊಟ್ಟು ಆಲಂಗಿಸಿಕೊಳ್ಳುವುದು ಅಸಮರ್ಥತೆ ಎಂದು ಟೀಕಿಸಿದರು.
ಮೋದಿಜೀ, ಅಮಿತ್ ಶಾ ಜೀ, ಈಗಿನ ಭಾರತ ಸರಕಾರದ ಮೇಲೆ ಜನರಿಗೆ ವಿಶ್ವಾಸ ಇದೆ. ಇವರು ಭಯೋತ್ಪಾದಕರ ಜೊತೆ ಸೇರಿ ಲಾಭ- ನಷ್ಟದ ಲೆಕ್ಕಾಚಾರ ಹಾಕುವುದಿಲ್ಲ. ಅವರನ್ನು ಬೇರು ಸಹಿತ ಕಿತ್ತು ಹಾಕುವ ಸರ್ವ ಪ್ರಯತ್ನವನ್ನೂ ಮಾಡುತ್ತಾರೆ, ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಸಂಸತ್ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಪರ ವಕಾಲತ್ತು ವಹಿಸಿದ ವಕೀಲರ ಪಟ್ಟಿ ಕೊಡಲೇ? ಎಂದು ಕೇಳಿದರು. ನಿಮ್ಮ ಯಾವ್ಯಾವ ಕಾಂಗ್ರೆಸ್ ನಾಯಕರು ಅವನ ಪರ ಮಾತನಾಡಿದರೆಂದು ಲಿಸ್ಟ್ ಕೊಡಲೇ ಎಂದು ಪ್ರಶ್ನಿಸಿದರು.
ಈಚೆಗೆ ಗುಜರಾತ್, ಜಮ್ಮು-ಕಾಶ್ಮೀರ, ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಎನ್ಐಎ, ಎಟಿಎಸ್ ಹಲವು ಭಯೋತ್ಪಾದಕರನ್ನು ಬಂಧಿಸಿದ್ದವು. ಅವರು ಇಡೀ ದೇಶದಲ್ಲಿ ವಿಧ್ವಂಸಕ ಕೃತ್ಯ ಮಾಡಲು ಸಂಚು ನಡೆಸಿದ್ದು, ಅಪಾಯಕಾರಿ ರಿಸಿನ್ನಂಥ ವಿಷವನ್ನು ತಯಾರಿಸಿ ಸಾಮೂಹಿಕ ನರಮೇಧಕ್ಕೆ ಯೋಜನೆ ರೂಪಿಸಿದ್ದನ್ನು ಎನ್ಐಎ, ಎಟಿಎಸ್ ಮತ್ತು ಪೊಲೀಸ್ ಇಲಾಖೆ ವಿಫಲಗೊಳಿಸಿದೆ ಎಂದು ವಿವರಿಸಿದರು.
ಅಪಾರ ಪ್ರಮಾಣದಲ್ಲಿ ಆರ್ಡಿಎಕ್ಸ್ ಕೂಡ ವಶಕ್ಕೆ ಪಡೆದಿದೆ. ಯೋಜನಾಬದ್ಧವಾದ ಭಯೋತ್ಪಾದನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದನ್ನು ಊಹಿಸಬಹುದು. ನಮ್ಮ ಬೇಹುಗಾರಿಕಾ ವ್ಯವಸ್ಥೆ ಎನ್ಐಎ ಸಾಕಷ್ಟು ಎಚ್ಚರ ವಹಿಸಿದ್ದರಿಂದ ದೊಡ್ಡ ಅಪಾಯ ತಪ್ಪಿದೆ ಎಂದು ವಿಶ್ಲೇಷಿಸಿದರು. ಇದರಿಂದ ಹತಾಶರಾದ ಭಯೋತ್ಪಾದಕರು ಕೆಂಪು ಕೋಟೆಯನ್ನು ಗುರಿಯಾಗಿ ಇಟ್ಟುಕೊಂಡು, ತಾವಿನ್ನೂ ಬದುಕಿದ್ದೇವೆ ಎಂಬುದನ್ನು ತಮ್ಮ ಭಯೋತ್ಪಾದಕ ಕೃತ್ಯದ ಮೂಲಕ ತೋರಿಸಿದ್ದಾರೆ ಎಂದು ತಿಳಿಸಿದರು.
-
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications