Ration: "10 ಕೆ.ಜಿ. ಅಕ್ಕಿ 15,500 ರೂಪಾಯಿಗೆ ಮಾರಾಟ"
Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಸರ್ಕಾರದ ವಿರುದ್ಧ ಗಂಭೀರ ಆರೋಪಗಳು ಸಹ ಕೇಳುಬರುತ್ತಿವೆ. ಇದೀಗ ಸಿಟಿ ರವಿ ಅವರು ಪಡಿತರ ವಿಚಾರದಲ್ಲಿ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಶ್ರೀಮಂತರು ಅಂದರೆ ಅನರ್ಹರು ಕೂಡ ಇದನ್ನು ಪಡೆದುಕೊಂಡಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಇದೀಗ ಪಡಿತರ ಅಕ್ರಮ ಸಾಗಣೆ ಕುರಿತು ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಡವರಿಗೆಂದು ಕೊಡಲ್ಪಡುವ ಅಕ್ಕಿ ಬಡವರ ಮನೆ ತಲುಪುತ್ತಿಲ್ಲ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ಕುರಿತು ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ? ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಅನ್ನಭಾಗ್ಯ ಅಕ್ರಮ ಸಾಗಾಟದ ಆಳ-ಅಗಲ ಬಹಳಷ್ಟು ವಿಸ್ತಾರ ಆಗಿದೆ. ಇದರ ಸಮಗ್ರ ತನಿಖೆಗೆ ಎಸ್ಐಟಿ ತನಿಖೆಯ ಅಗತ್ಯ ಇದೆ ಎಂದು ಗುಡುಗಿದ್ದಾರೆ.
ಮಾಹಿತಿ ಪ್ರಕಾರ, ಇದೇ ಅಕ್ಕಿಯನ್ನು ಪಾಲಿಶ್ ಮಾಡಿ 25 ಕೆ.ಜಿ.ಗೆ 8,000 ರೂಪಾಯಿಗೆ ಮಾರಾಟ ಮಾಡುತ್ತಾರಂತೆ. ದುಬೈನಲ್ಲಿ 10 ಕೆ.ಜಿ. ಅಕ್ಕಿಯನ್ನು 15,500 ರೂಪಾಯಿಗೆ ಮಾರಾಟ ಮಾಡುತ್ತರಂತೆ. ಅಂದರೆ, ಕೆ.ಜಿ.ಗೆ 150 ರೂಪಾಯಿ ಪಡೆಯುತ್ತಾರೆ. ಅನ್ನಭಾಗ್ಯ ಅಂತಾ ಕೊಡುತ್ತಿರುವ ಅಕ್ಕಿ ಬಡವರಿಗೆ ತಲುಪುತ್ತಿಲ್ಲ ಅಥವಾ ಬಡವರಿಗೆ ಬೇಕಾಗಿಲ್ಲ. ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ನೀವೇ ಹೇಳಿದ್ದೀರಿ ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಗೋಡೋನ್ಗೆ ಬರುವುದಕ್ಕಿಂತ ಮುಂಚೆಯೇ ಕ್ವಿಂಟಾಲ್ಗಟ್ಟಲೇ ಅಕ್ಕಿ ಮಾಯವಾಗಿದೆ ಅಂತಾ ನೀವು ಉತ್ತರದಲ್ಲೇ ಕೊಟ್ಟಿದ್ದೀರಿ. ನಾನು ಮಾಹಿತಿ ತೆಗೆದುಕೊಂಡಿರುವ ಪ್ರಕಾರ, ಒಂದೊಂದು ಜಿಲ್ಲೆಯಲ್ಲೇ 30-40 ಎಫ್ಐಆರ್ ದಾಖಲಾಗಿದೆ. ಇದರಿಂದಲೇ ಗೊತ್ತಾಗುತ್ತದೆ ಇದರ ಆಳ, ಅಗಲ ಎಷ್ಟಿದೆ ಎಂದು. ಬೇಲಿಯೇ ಎದ್ದು ಹೊಲ ಮೆಯ್ಯುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಇದರ ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡುವ ಅಗತ್ಯಯಿದೆ ಎಂದು ಕಂಡುಬರುತ್ತಿದೆ ಎಂದು ಹೇಳಿದರು.
ಒಂದು ಪ್ರಕರಣ ಆದರೆ, ಯಾರೋ ಒಬ್ಬ ಮೋಸ ಮಾಡಿದ್ದಾನೆ ಎಂದುಕೊಳ್ಳಬಹುದು. ಆದರೆ, ನೂರಾರು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ಈ ಕುರಿತು ಸಮಗ್ರ ತನಿಖೆ ಮಾಡುವ ಕೆಲಸವನ್ನು ಸರ್ಕಾರ ಮಾಡಿದ್ಯಾ? ಇದನ್ನು ನಿಯಂತ್ರಣ ಮಾಡುವುದೇಗೆ ಎಂದು ಸರ್ಕಾರ ಯೋಚನೆ ಮಾಡಿದ್ಯಾ? ಎಂದು ಸಿಟಿ ರವಿ ಅವರು ಪ್ರಶ್ನೆ ಮಾಡುವ ಮೂಲಕ ಕೆಂಡಕಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕೊಡುತ್ತಿರುವ ಪಡಿತರ ಕಳೆ ಗುಣಮಟ್ಟದಾಗಿದೆ. ರಾಗಿಯಲ್ಲಿ ಬರೀ ಮಣ್ಣು ತುಂಬಿರುತ್ತದೆ ಎಂದು ಈ ಹಿಂದೆ ಮಹಿಳೆಯೊಬ್ಬರು ವಿಡಿಯೋ ಸಹಿತ ಆರೋಪ ಮಾಡಿದ್ದರು. ಈಗಲೂ ಸಹ ಇಂತಹ ಆರೋಪಗಳು ಕೇಳಿಬರುತ್ತಿದ್ದು, ಸರ್ಕಾರ ಇದರತ್ತ ಗಮನಹರಿಸುವ ಮೂಲಕ ಬಡವರಿಗೆ ಗುಣಮಟ್ಟದ ಪಡಿತರ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications