Bank Jobs: ಸ್ಥಳೀಯರಿಗೆ ಬ್ಯಾಂಕ್ ಉದ್ಯೋಗ: ಕೇಂದ್ರ ಸರ್ಕಾರಕ್ಕೆ ಸಿ.ಟಿ.ರವಿ ಧನ್ಯವಾದ
ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷೆ ಮಾತನಾಡದ ಸಿಬ್ಬಂದಿ ಇರುವುದರಿಂದ ಗ್ರಾಹಕರಿಗೆ ಭಾರಿ ಸಮಸ್ಯೆ ಎದುರಾಗಿತ್ತು. ಭಾಷಾ ವಿಚಾರಕ್ಕಾಗಿಯೇ ಬ್ಯಾಂಕ್ಗಳಲ್ಲಿ ಗಲಾಟೆಗಳು ಕೂಡ ನಡೆಯುತ್ತಿದ್ದವು. ಇದೀಗ ಬ್ಯಾಂಕ್ಗಳಲ್ಲಿ ಸ್ಥಳೀಯ ಭಾಷಿಕರಿಗೆ ಉದ್ಯೋಗ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಈ ಮಹತ್ವದ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸುವ ಪ್ರತಿಭಾವಂತ ಉದ್ಯೋಗಿಗಳನ್ನು ಆಯಾ ಪ್ರದೇಶಗಳಲ್ಲಿನ ಬ್ಯಾಂಕ್ ಶಾಖೆಗಳಲ್ಲಿ ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಮಾನವ ಸಂಪನ್ಮೂಲ ನೀತಿಗಳನ್ನು ಪುನರ್ರಚಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದಾರೆ.

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದಾಗಿ, ವಿವಿಧ ರಾಜ್ಯಗಳ ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಲ್ಲಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸುವ ಸಿಬ್ಬಂದಿಯ ಕೊರತೆಯಿಂದಾಗಿ ಜನರು ಕಷ್ಟಪಡುವಂತಾಗಿತ್ತು. ಈ ಸಮಸ್ಯೆಯನ್ನು ಮನಗಂಡ ಮಾನ್ಯ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳಿಗೆ ನೀತಿ ಬದಲಿಸುವಂತೆ ಸ್ಪಷ್ಟವಾಗಿ ಸೂಚಿಸಿದ್ದಾರೆ. ಇದರಿಂದ ಕನ್ನಡಿಗರು ಎದುರಿಸಿದ್ದ ಭಾಷಾ ಸಮಸ್ಯೆ ನಿವಾರಣೆಯಾಗಲಿದೆ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಇದೇ ವೇಳೆ, ಕನ್ನಡಿಗ ಯುವಕ ಯುವತಿಯರೂ ಸಹ ಬ್ಯಾಂಕಿಂಗ್ ಕ್ಷೇತ್ರದ ಅವಕಾಶಗಳನ್ನು ಪಡೆದುಕೊಂಡು, ಸೂಕ್ತ ತಯಾರಿ ನಡೆಸಿ, ಬ್ಯಾಂಕಿಂಗ್ ಉದ್ಯೋಗಗಳನ್ನು ಹೊಂದುವುದರಿಂದ ಈ ಸಮಸ್ಯೆ ಭವಿಷ್ಯದಲ್ಲಿ ಇನ್ನಷ್ಟು ಕಡಿಮೆಯಾಗಬಹುದು. ಈ ಸೂಚನೆ ನೀಡಿರುವುದಕ್ಕೆ ಮಾನ್ಯ ಹಣಕಾಸು ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.
ಹಣಕಾಸು ಸಚಿವರು ಹೇಳಿದ್ದೇನು?
ಎಸ್ಬಿಐನ ಬ್ಯಾಂಕಿಂಗ್ ಮತ್ತು ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ್ದ ಸಚಿವೆ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಪರವಾಗಿ ನಾನು ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಏಕೈಕ ಟೀಕೆವೊಂದಿದೆ. ನಾನು ಖಾಸಗಿ ಬ್ಯಾಂಕುಗಳ ಬಗ್ಗೆ ಮಾತನಾಡುತ್ತಿಲ್ಲ. ನಮ್ಮ ಮಾನವ ಸಂಪನ್ಮೂಲ ನೀತಿಯಿಂದಾಗಿ ನಾವು ವಿಭಿನ್ನ ಪ್ರದೇಶಗಳಲ್ಲಿ ವಿಭಿನ್ನ ಮಾತೃಭಾಷೆಯ ಜನರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳುತ್ತೇವೆ. ನಾನು ಈ ನೀತಿಯನ್ನು ದೂಷಿಸುತ್ತಿಲ್ಲ, ಆದರೆ ಸ್ಥಳೀಯ ಭಾಷೆಯ ಒಂದು ಪದವೂ ಮಾತನಾಡುವುದಿಲ್ಲ ಎಂದು ಬೇಸರ ಹೊರಹಾಕಿದ್ದರು.
ನಿಮ್ಮ ಸ್ಥಳೀಯ ಗ್ರಾಹಕರೊಂದಿಗೆ ಅಗತ್ಯವಿರುವುದು ಆ ಸಣ್ಣ ಸಂಪರ್ಕದ ಅಂಶ. ಅವರಿಲ್ಲದೆ ನೀವು ಇಲ್ಲ, ನೀವು ಆ ಅಂಶವನ್ನು ಸೇರಿಸಿಕೊಳ್ಳಬೇಕು. ಎಲ್ಲ ಬ್ಯಾಂಕುಗಳು ನಿಮ್ಮ ಮಾನವ ಸಂಪನ್ಮೂಲ ನೀತಿಗಳನ್ನು ಕೇವಲ ಸಂಖ್ಯೆಗಳ ಸಲುವಾಗಿ ನೇಮಕಾತಿ ಮಾಡುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದರು.
ಶಾಖೆಯಲ್ಲಿ ನಿಯೋಜಿಸಲಾದ ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಗ್ರಾಹಕರನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸ್ಥಳೀಯ ಭಾಷೆಯನ್ನು ಮಾತನಾಡುತ್ತಾರೆ ಎಂಬುದನ್ನು ಬ್ಯಾಂಕುಗಳು ಖಚಿತಪಡಿಸಿಕೊಳ್ಳಬೇಕು. ಕನಿಷ್ಠ ಪಕ್ಷ ಉನ್ನತ ಆಡಳಿತ ಮಂಡಳಿ ಮಾತನಾಡದಿದ್ದರೂ ಶಾಖಾ ಮಟ್ಟದ ಅಧಿಕಾರಿಗಳಾದರೂ ಸ್ಥಳೀಯ ಭಾಷೆ ಮಾತನಾಡಬೇಕು. ಸ್ಥಳೀಯ ಭಾಷೆಯಲ್ಲಿ ಉದ್ಯೋಗಿಯ ದಕ್ಷತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications