ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮುಂಡಿ ಬೆಟ್ಟದಲ್ಲಿ ಪ್ರಮಾಣಕ್ಕೆ ಸಿದ್ದರಾಮಯ್ಯಗೆ ಸಿ.ಟಿ.ರವಿ ಆಹ್ವಾನ

|
Google Oneindia Kannada News

ಬೆಂಗಳೂರು ಮಾರ್ಚ್ 22 : 'ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ. ಈ ಕುರಿತು ವಕೀಲರ ಜೊತೆ ಚರ್ಚೆ ನಡೆಸಿದ್ದೇನೆ' ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿ.ಟಿ.ರವಿ ಅವರು, 'ನಾನು ಯಾವುದೇ ದಂಧೆಯನ್ನು ಮಾಡಿಲ್ಲ. ನಿಮ್ಮ ದುರಹಂಕಾರದ ಮಾತಿಗೆ ಜನರು ಉತ್ತರ ನೀಡುತ್ತಾರೆ' ಎಂದರು.

ಕ್ಷಮಾಪಣೆ ನಂ. 3: ಗಡ್ಕರಿ, ಸಿಬಲ್ ಕ್ಷಮೆ ಕೋರಿದ ಕೇಜ್ರಿವಾಲ್ಕ್ಷಮಾಪಣೆ ನಂ. 3: ಗಡ್ಕರಿ, ಸಿಬಲ್ ಕ್ಷಮೆ ಕೋರಿದ ಕೇಜ್ರಿವಾಲ್

'ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಲ್ಲ ಲೂಟಿ ರವಿ ಎನ್ನುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ. ಈ ಕುರಿತು ವಕೀಲರ ಜೊತೆ ಚರ್ಚೆ ನಡೆಸಿದ್ದೇನೆ' ಎಂದು ಹೇಳಿದರು.

CT Ravi to file defamation case against Siddaramaiah

'ದತ್ತಪೀಠ ವಿಚಾರದಲ್ಲಿ ಹಿಂದೂಗಳಿಗೆ ನ್ಯಾಯ ಸಿಕ್ಕಿಲ್ಲ. ಅವರನ್ನು ಸಾಕಷ್ಟು ಗೊಂದಲಕ್ಕೆ ತಳ್ಳಿದ್ದೀರಿ. ಅದನ್ನು ಮರೆಮಾಚಲು ಇಲ್ಲ ಸಲ್ಲದ ಹೇಳಿಕೆಯನ್ನು ನೀಡುತ್ತಿದ್ದೀರಿ' ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವಂತದ್ದು ಬಿಎಸ್ವೈಗೆ ಏನಾಯ್ತು?ಸಿಎಂ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವಂತದ್ದು ಬಿಎಸ್ವೈಗೆ ಏನಾಯ್ತು?

'ನಾನು ಯಾವುದೇ ದಂಧೆಯನ್ನು ಮಾಡಿಲ್ಲ. ನೀವು ಸಿದ್ದರಾಮಯ್ಯನೇ ಆಗಿದ್ದರೆ ಚಾಮುಂಡಿ ಬೆಟ್ಟಕ್ಕೆ ಬನ್ನಿ. ಅಲ್ಲಿ ಪ್ರಮಾಣ ಮಾಡಿ' ಎಂದು ಸಿ.ಟಿ.ರವಿ ಆಹ್ವಾನ ನೀಡಿದರು.

English summary
BJP Leader C.T.Ravi said that he will file a defamation case against Karnataka Chief Minister Siddaramaiah for calling him Looti Ravi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X